Homeಮುಖಪುಟಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

ಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಜಯಪ್ರಕಾಶ್ ನಾರಾಯಣ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಇಂದು ಭಾರತೀಯರು ಪ್ರೀತಿಯಿಂದ ಜೆ.ಪಿ. ಎಂದು ಕರೆಯಲ್ಪಡುವ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್‌ ನಾರಾಯಣ ಅವರ ಜನ್ಮ ದಿನಾಚರಣೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು  ಸೇರಿದಂತೆ ಹಲವು ಗಣ್ಯರು ಜೆ.ಪಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಲೋಕ ನಾಯಕ ಮತ್ತು ಜೆ.ಪಿ ಎಂದು ಪ್ರಸಿದ್ಧರಾಗಿರುವ ಜಯಪ್ರಕಾಶ್‌ ನಾರಾಯಣ‌ ಅವರು ಬಿಹಾರದ ಸರಾನ್‌ನಲ್ಲಿ 1902ರ ಅಕ್ಟೋಬರ್‌ 11ರಂದು ಜನಿಸಿದರು. ಅಪ್ರತಿಮ ದೇಶಪ್ರೇಮಿ, ಅನ್ಯಾಯದ ವಿರುದ್ಧ ಸತತವಾಗಿ ಹೋರಾಟ ನಡೆಸಿದವರು. ಸ್ವಾತಂತ್ರ ಚಳುವಳಿಯಲ್ಲಿ ಪಾತ್ರವಹಿಸಿದ ಇವರು ಮಹಾತ್ಮ ಗಾಂಧಿ ಮತ್ತು ಎಂ.ಎನ್.ರಾಯ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಜೆ.ಪಿ ಅವರು ಅಮೆರಿಕದಲ್ಲಿ ಸತತ ಎಂಟು ವರ್ಷಗಳವರೆಗೆ ನೆಲೆಸಿದ್ದು, ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ, ಸಮಾಜವಿಜ್ಞಾನಗಳ ಅಧ್ಯಯನ ಮಾಡಿದ್ದಾರೆ. ಪ್ರತಿಭಾಶಾಲಿ ವಿದ್ಯಾರ್ಥಿಯಾಗಿದ್ದ ಜಯಪ್ರಕಾಶರು ಅಮೆರಿಕದಲ್ಲಿ ಮ್ಮ ಜೀವನ ಮತ್ತು ಶಿಕ್ಷಣದ ವೆಚ್ಚವನ್ನು ನಿರ್ವಹಿಸಲು ಕಾರ್ಖಾನೆಗಳಲ್ಲಿ, ಹೋಟೆಲುಗಳಲ್ಲಿ, ಹೊಲಗಳಲ್ಲಿ ದುಡಿದಿದ್ದರು.

ಅಮೆರಿಕವನ್ನು ಬಿಡುವ ಹೊತ್ತಿಗೆ ಜಯಪ್ರಕಾಶರು ಮಾರ್ಕ್ಸ್‌ವಾದಿಯಾಗಿದ್ದರು. ಎಂ. ಎನ್.ರಾಯರ ವಿಚಾರಧಾರೆ ಇವರ ರಾಜಕೀಯ ಪ್ರಜ್ಞೆಯ ಮೇಲೆ ಪ್ರಭಾವ ಬೀರಿತು. 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1965 ರಲ್ಲಿ ಜಯಪ್ರಕಾಶ್ ನಾರಾಯಣ್  ಅವರಿಗೆ ಸಾರ್ವಜನಿಕ ಸೇವೆಗಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನೀಡಲಾಯಿತು. ಮರಣೋತ್ತರವಾಗಿ 1999ರಲ್ಲಿ ಭಾರತ್ ರತ್ನ ನೀಡಿ ಗೌರವಿಸಲಾಗಿದೆ.

ಸಮಾಜವಾದಿ ನಾಯಕರ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿ ’ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಪ್ರಜಾಪ್ರಭುತ್ವದ ನೀತಿಗಳು ಆಕ್ರಮಣಕ್ಕೊಳಗಾದಾಗ, ಅದನ್ನು ರಕ್ಷಿಸಲು ಅವರು ಬಲವಾದ ಜನಾಂದೋಲನವನ್ನು ನಡೆಸಿದರು. ಅವರಿಗೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಕಲ್ಯಾಣಕ್ಕಿಂತ ಮುಖ್ಯವಾದದ್ದು ಏನೂ ಇರಲಿಲ್ಲ’ ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:  ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೂಡ ಜೆ.ಪಿ.ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.’ಜಯಪ್ರಕಾಶ್ ನಾರಾಯಣ್ ಜನರ ನಾಯಕರಾಗಿದ್ದರು. ಇಂದಿಗೂ ಅವರ ಆಲೋಚನೆಗಳು ಲಕ್ಷಾಂತರ ಜನರನ್ನು ಪ್ರೇರೆಪಿಸುತ್ತಿವೆ’ ಎಂದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಲೋಕನಾಯಕ ಜಯಪ್ರಕಾಶ್ ನಾರಾಯಣ‌ ಅವರ ಜನ್ಮ ದಿನಾಚರಣೆಯಂದು ಗೌರವ ಅರ್ಪಿಸಿದ್ದಾರೆ. ’ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಭ್ರಷ್ಟಾಚಾರದ ವಿರುದ್ಧದ ಅವರ ಹೋರಾಟವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಹೋರಾಟವು ಜನರ ಮನಸ್ಸಿನಲ್ಲಿ ಅಳಿಸಲಾಗದೆ ಉಳಿದಿದೆ ಎಂದು ನಾಯ್ಡು ಅವರು ಬಣ್ಣಿಸಿದ್ದಾರೆ’ ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್‌ ಮಾಡಿದೆ.


ಇದನ್ನೂಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....