Homeಮುಖಪುಟಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

ಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಜಯಪ್ರಕಾಶ್ ನಾರಾಯಣ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಇಂದು ಭಾರತೀಯರು ಪ್ರೀತಿಯಿಂದ ಜೆ.ಪಿ. ಎಂದು ಕರೆಯಲ್ಪಡುವ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್‌ ನಾರಾಯಣ ಅವರ ಜನ್ಮ ದಿನಾಚರಣೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು  ಸೇರಿದಂತೆ ಹಲವು ಗಣ್ಯರು ಜೆ.ಪಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಲೋಕ ನಾಯಕ ಮತ್ತು ಜೆ.ಪಿ ಎಂದು ಪ್ರಸಿದ್ಧರಾಗಿರುವ ಜಯಪ್ರಕಾಶ್‌ ನಾರಾಯಣ‌ ಅವರು ಬಿಹಾರದ ಸರಾನ್‌ನಲ್ಲಿ 1902ರ ಅಕ್ಟೋಬರ್‌ 11ರಂದು ಜನಿಸಿದರು. ಅಪ್ರತಿಮ ದೇಶಪ್ರೇಮಿ, ಅನ್ಯಾಯದ ವಿರುದ್ಧ ಸತತವಾಗಿ ಹೋರಾಟ ನಡೆಸಿದವರು. ಸ್ವಾತಂತ್ರ ಚಳುವಳಿಯಲ್ಲಿ ಪಾತ್ರವಹಿಸಿದ ಇವರು ಮಹಾತ್ಮ ಗಾಂಧಿ ಮತ್ತು ಎಂ.ಎನ್.ರಾಯ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಜೆ.ಪಿ ಅವರು ಅಮೆರಿಕದಲ್ಲಿ ಸತತ ಎಂಟು ವರ್ಷಗಳವರೆಗೆ ನೆಲೆಸಿದ್ದು, ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ, ಸಮಾಜವಿಜ್ಞಾನಗಳ ಅಧ್ಯಯನ ಮಾಡಿದ್ದಾರೆ. ಪ್ರತಿಭಾಶಾಲಿ ವಿದ್ಯಾರ್ಥಿಯಾಗಿದ್ದ ಜಯಪ್ರಕಾಶರು ಅಮೆರಿಕದಲ್ಲಿ ಮ್ಮ ಜೀವನ ಮತ್ತು ಶಿಕ್ಷಣದ ವೆಚ್ಚವನ್ನು ನಿರ್ವಹಿಸಲು ಕಾರ್ಖಾನೆಗಳಲ್ಲಿ, ಹೋಟೆಲುಗಳಲ್ಲಿ, ಹೊಲಗಳಲ್ಲಿ ದುಡಿದಿದ್ದರು.

ಅಮೆರಿಕವನ್ನು ಬಿಡುವ ಹೊತ್ತಿಗೆ ಜಯಪ್ರಕಾಶರು ಮಾರ್ಕ್ಸ್‌ವಾದಿಯಾಗಿದ್ದರು. ಎಂ. ಎನ್.ರಾಯರ ವಿಚಾರಧಾರೆ ಇವರ ರಾಜಕೀಯ ಪ್ರಜ್ಞೆಯ ಮೇಲೆ ಪ್ರಭಾವ ಬೀರಿತು. 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1965 ರಲ್ಲಿ ಜಯಪ್ರಕಾಶ್ ನಾರಾಯಣ್  ಅವರಿಗೆ ಸಾರ್ವಜನಿಕ ಸೇವೆಗಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನೀಡಲಾಯಿತು. ಮರಣೋತ್ತರವಾಗಿ 1999ರಲ್ಲಿ ಭಾರತ್ ರತ್ನ ನೀಡಿ ಗೌರವಿಸಲಾಗಿದೆ.

ಸಮಾಜವಾದಿ ನಾಯಕರ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿ ’ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಪ್ರಜಾಪ್ರಭುತ್ವದ ನೀತಿಗಳು ಆಕ್ರಮಣಕ್ಕೊಳಗಾದಾಗ, ಅದನ್ನು ರಕ್ಷಿಸಲು ಅವರು ಬಲವಾದ ಜನಾಂದೋಲನವನ್ನು ನಡೆಸಿದರು. ಅವರಿಗೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಕಲ್ಯಾಣಕ್ಕಿಂತ ಮುಖ್ಯವಾದದ್ದು ಏನೂ ಇರಲಿಲ್ಲ’ ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:  ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೂಡ ಜೆ.ಪಿ.ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.’ಜಯಪ್ರಕಾಶ್ ನಾರಾಯಣ್ ಜನರ ನಾಯಕರಾಗಿದ್ದರು. ಇಂದಿಗೂ ಅವರ ಆಲೋಚನೆಗಳು ಲಕ್ಷಾಂತರ ಜನರನ್ನು ಪ್ರೇರೆಪಿಸುತ್ತಿವೆ’ ಎಂದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಲೋಕನಾಯಕ ಜಯಪ್ರಕಾಶ್ ನಾರಾಯಣ‌ ಅವರ ಜನ್ಮ ದಿನಾಚರಣೆಯಂದು ಗೌರವ ಅರ್ಪಿಸಿದ್ದಾರೆ. ’ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಭ್ರಷ್ಟಾಚಾರದ ವಿರುದ್ಧದ ಅವರ ಹೋರಾಟವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಹೋರಾಟವು ಜನರ ಮನಸ್ಸಿನಲ್ಲಿ ಅಳಿಸಲಾಗದೆ ಉಳಿದಿದೆ ಎಂದು ನಾಯ್ಡು ಅವರು ಬಣ್ಣಿಸಿದ್ದಾರೆ’ ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್‌ ಮಾಡಿದೆ.


ಇದನ್ನೂಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...