Homeಮುಖಪುಟಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

ಭಾರತಕ್ಕೆ ಸಮಾಜವಾದ ಅಗತ್ಯವಿಲ್ಲ, ಜಾತ್ಯತೀತತೆ ಸಂಸ್ಕೃತಿಯ ಭಾಗವಲ್ಲ: ಕೇಂದ್ರ ಸಚಿವ

- Advertisement -
- Advertisement -

ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳು ಇನ್ನೂ ಇರಬೇಕೆ? ಎಂಬ ಆರ್‌ಎಸ್‌ಎಸ್ ನಾಯಕ ದತ್ತಾತ್ರೇಯ ಹೊಸಬಾಳೆಯ ಹೇಳಿಕೆಯನ್ನು ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಜಿತೇಂದ್ರ ಸಿಂಗ್ ಬೆಂಬಲಿಸಿದ್ದಾರೆ.

ತುರ್ತು ಪರಿಸ್ಥಿತಿ ಘೋಷಣೆಯಾಗಿ 50 ವರ್ಷ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, “ಸರ್ವ ಧರ್ಮ ಸಂಭವ್ (ಎಲ್ಲಾ ಧರ್ಮಗಳಿಗೂ ಸಮಾನ ಗೌರವ) ಭಾರತೀಯ ಸಂಸ್ಕೃತಿಯ ತಿರುಳು, ಅಲ್ಲದೆ ಧರ್ಮ ನಿರಪೇಕ್ಷತೆ (ಜಾತ್ಯತೀತ) ಅಲ್ಲ. ಆದ್ದರಿಂದ, ತುರ್ತು ಪರಿಸ್ಥಿತಿಯ ಸಮಯದಲ್ಲಿ ಸೇರಿಸಲಾದ ಧರ್ಮ ನಿರಪೇಕ್ಷತೆ ಪದವನ್ನು ತೆಗೆದು ಹಾಕುವ ಬಗ್ಗೆ ಚರ್ಚೆ ನಡೆಯಬೇಕು” ಎಂದಿದ್ದಾರೆ.

ಸಮಾಜವಾದದ ಬಗ್ಗೆ ಮಾತನಾಡಿದ ಚೌಹಾಣ್, “ಉಳಿದವರೆಲ್ಲರೂ ತಮ್ಮಂತೆಯೇ ಇರಬೇಕೆಂದು ನಂಬುವುದು ಮತ್ತು ಈ ಜಗತ್ತು ಒಂದು ಕುಟುಂಬ (ವಸುಧೈವ ಕುಟುಂಬಕಂ) ಎಂಬುದು ಭಾರತದ ಮೂಲ ಚಿಂತನೆಯಾಗಿದೆ. ಇಲ್ಲಿ ‘ಸಮಾಜವಾದ’ದ ಅಗತ್ಯವಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎಂದು ನಾವು ಬಹಳ ದಿನಗಳಿಂದ ಹೇಳುತ್ತಿದ್ದೇವೆ. ಆದ್ದರಿಂದ, ‘ಸಮಾಜವಾದ’ ಎಂಬ ಪದವೂ ಅಗತ್ಯವಿಲ್ಲ, ದೇಶವು ಖಂಡಿತವಾಗಿಯೂ ಇದರ ಬಗ್ಗೆ ಯೋಚಿಸಬೇಕು” ಎಂದು ಹೇಳಿದ್ದಾರೆ.

ಜಮ್ಮುವಿನಲ್ಲಿ ಮಾತನಾಡಿದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಯ ಬಗ್ಗೆ ‘ಎರಡನೇ ಆಲೋಚನೆ’ ಇಲ್ಲ. ಸಂವಿಧಾನದ 42ನೇ ತಿದ್ದುಪಡಿಯ ನಂತರ ಅದರ ಪೀಠಿಕೆಗೆ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ಸೇರಿಸಲಾಗಿದೆ. ಅವುಗಳನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿರಲಿಲ್ಲ” ಎಂದಿದ್ದಾರೆ.

ಡಾ. ಬಿ.ಆರ್ ಅಂಬೇಡ್ಕರ್ ಅವರು ‘ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದನ್ನು’ ರಚಿಸಿದ್ದಾರೆ ಎಂದು ಹೇಳಿದ ಸಿಂಗ್, “ಜಾತ್ಯತೀತ ಮತ್ತು ‘ಸಮಾಜವಾದಿ’ ಪದಗಳು ಅಂಬೇಡ್ಕರ್ ಅವರ ಚಿಂತನೆಯಲ್ಲಿ ಇರಲಿಲ್ಲ. ಯಾರೋ ಯಾವುದೋ ಚಿಂತನೆಯಿಂದ ಅವುಗಳನ್ನು ಸಂವಿಧಾನದಲ್ಲಿ ಸೇರಿಸಿದ್ದಾರೆ ಎಂದು ಹೇಳಿದ್ದಾರೆ.

‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕುವ ಬೇಡಿಕೆಯನ್ನು ಬಿಜೆಪಿ ಮುಂದಿಡುತ್ತದೆಯೇ? ಎಂದು ಕೇಳಿದ್ದಕ್ಕೆ “ಯಾರು ಅದನ್ನು ಬಯಸುವುದಿಲ್ಲ? ಪ್ರತಿಯೊಬ್ಬ ಸರಿಯಾದ ಚಿಂತನೆಯ ನಾಗರಿಕನು ಅದನ್ನು ಬೆಂಬಲಿಸುತ್ತಾನೆ. ಏಕೆಂದರೆ, ಆ ಪದಗಳು ಡಾ. ಅಂಬೇಡ್ಕರ್ ಮತ್ತು ಸಮಿತಿಯ ಉಳಿದವರು ಬರೆದ ಮೂಲ ಸಂವಿಧಾನ ದಾಖಲೆಯ ಭಾಗವಾಗಿರಲಿಲ್ಲ ಎಂಬುವುದು ಎಲ್ಲರಿಗೂ ತಿಳಿದಿದೆ” ಎಂದಿದ್ದಾರೆ.

“ಇದು ಬಿಜೆಪಿ ಮತ್ತು ಬಿಜೆಪಿಯೇತರರ ಪ್ರಶ್ನೆಯಲ್ಲ. ಇದು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡುವ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಹಠಾತ್ ನಿರ್ಧಾರವಲ್ಲ. ಬದಲಾಗಿ, ಕಾಂಗ್ರೆಸ್‌ನ ಸೈದ್ಧಾಂತಿಕ ತೀರ್ಮಾನವಾಗಿದೆ. ಕಾಂಗ್ರೆಸ್ ಸ್ವಜನಪಕ್ಷಪಾತ, ಸರ್ವಾಧಿಕಾರ ಮತ್ತು ಅವಕಾಶವಾದದಲ್ಲಿ ಬೇರೂರಿದೆ. ಯಾವಾಗಲೂ ದೇಶದ ಹಿತಾಸಕ್ತಿಗಳಿಗಿಂತ ಹೆಚ್ಚಾಗಿ ತನ್ನ ಸ್ವಂತ ಹಿತಾಸಕ್ತಿಗಳ ಬಗ್ಗೆ ಚಿಂತಿಸುತ್ತದೆ” ಎಂದು ಜಿತೇಂದ್ರ ಸಿಂಗ್ ಆರೋಪಿಸಿದ್ದಾರೆ.

ಆರ್‌ಎಸ್‌ಎಸ್‌ ನಾಯಕನಿಂದ ಸಂವಿಧಾನ ಪೀಠಿಕೆಯ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ತೆಗೆಯುವ ಹೇಳಿಕೆ: ವಿವಿಧ ಪಕ್ಷ, ನಾಯಕರಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...