Homeಮುಖಪುಟಸಂವಿಧಾನದ ಹೊಸ ಪ್ರತಿಗಳಲ್ಲಿ 'ಸಮಾಜವಾದಿ, ಜಾತ್ಯತೀತ' ಕಾಣೆಯಾಗಿದೆ: ಅಧೀರ್ ಚೌಧರಿ ಕಳವಳ

ಸಂವಿಧಾನದ ಹೊಸ ಪ್ರತಿಗಳಲ್ಲಿ ‘ಸಮಾಜವಾದಿ, ಜಾತ್ಯತೀತ’ ಕಾಣೆಯಾಗಿದೆ: ಅಧೀರ್ ಚೌಧರಿ ಕಳವಳ

- Advertisement -
- Advertisement -

ಹೊಸ ಸಂಸತ್ ಕಟ್ಟಡದ ಉದ್ಘಾಟನಾ ದಿನದಂದು ರಾಜಕಾರಣಿಗಳಿಗೆ ನೀಡಿದ ಸಂವಿಧಾನದ ಹೊಸ ಪ್ರತಿಗಳಲ್ಲಿ ‘ಸಮಾಜವಾದಿ ಜಾತ್ಯತೀತ’ ಪದಗಳು ಇಲ್ಲ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕಳವಳ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು, ”ಇಂದು (ಸೆಪ್ಟೆಂಬರ್ 19) ನಮಗೆ ನೀಡಲಾದ ಸಂವಿಧಾನದ ಹೊಸ ಪ್ರತಿಗಳನ್ನು ನಾವು ನಮ್ಮ ಕೈಯಲ್ಲಿ ಹಿಡಿದು ಹೊಸ ಸಂಸತ್ತಿನ ಕಟ್ಟಡ ಪ್ರವೇಶಿಸಿದ್ದೇವೆ. ಆದರೆ ಇದರ ಮುನ್ನುಡಿಯಲ್ಲಿ ‘ಸಮಾಜವಾದಿ ಜಾತ್ಯತೀತ’ ಪದಗಳಿಲ್ಲ” ಎಂದು ಅವರು ಹೇಳಿದ್ದಾರೆ.

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಚೌಧರಿ, ”1976ರಲ್ಲಿ ತಿದ್ದುಪಡಿಯ ನಂತರ ಈ ಪದಗಳನ್ನು ಸೇರಿಸಲಾಗಿದೆ ಎಂದು ನಮಗೆ ತಿಳಿದಿದೆ. ಆದರೆ ಯಾರಾದರೂ ಇಂದು ನಮಗೆ ಸಂವಿಧಾನದ ಪ್ರತಿ ನೀಡಿದರೆ, ಅದರಲ್ಲಿ ಸಮಾಜವಾದಿ, ಜಾತ್ಯತೀತ ಪದಗಳಿಲ್ಲದಿದ್ದರೆ ಅದು ಕಳವಳಕಾರಿ ವಿಷಯವಾಗಿದೆ” ಎಂದರು.

”ಅವರ ಉದ್ದೇಶ ಅನುಮಾನಾಸ್ಪದವಾಗಿದೆ, ಅದನ್ನು ಜಾಣತನದಿಂದ ಮಾಡಲಾಗಿದೆ. ಇದು ನನಗೆ ಕಳವಳದ ವಿಷಯವಾಗಿದೆ” ಎಂದು ಕೇಂದ್ರ ಬಿಜೆಪಿ ವಿರುದ್ಧ ಕಿಡಿಕಾರಿದರು.

”ನಾನು ಈ ವಿಷಯವನ್ನು ಎತ್ತಲು ಪ್ರಯತ್ನಿಸಿದೆ, ಆದರೆ ಈ ವಿಷಯವನ್ನು ಪ್ರಸ್ತಾಪಿಸಲು ನನಗೆ ಅವಕಾಶ ಸಿಗಲಿಲ್ಲ” ಎಂದು ಹೇಳಿದರು.

ಐದು ದಿನಗಳ ವಿಶೇಷ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ‘INDIA ಮತ್ತು ‘ಭಾರತ’ ನಡುವೆ ಅನಗತ್ಯ ಬಿರುಕು ಮೂಡಿಸಲು ಯಾರೂ ಪ್ರಯತ್ನಿಸಬಾರದು . ಭಾರತದ ಸಂವಿಧಾನದ ಪ್ರಕಾರ ಇವೆರಡರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿದರು.

”ಈ ಸಂವಿಧಾನವು ನಮಗೆ ಗೀತಾ, ಕುರಾನ್ ಮತ್ತು ಬೈಬಲ್‌ಗಿಂತ ಕಡಿಮೆಯಿಲ್ಲ. 1ನೇ ವಿಧಿ ಹೇಳುತ್ತದೆ, INDIA, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ…” ಅಂದರೆ INDIA ಮತ್ತು ಭಾರತಕ್ಕೆ ಯಾವುದೇ ವ್ಯತ್ಯಾಸವಿಲ್ಲ. ಎರಡರ ನಡುವೆ ಅನಗತ್ಯವಾಗಿ ಬಿರುಕು ಮೂಡಿಸಲು ಪ್ರಯತ್ನಿಸದಿದ್ದರೆ, ಅದು ಉತ್ತಮವಾಗಿರುತ್ತದೆ” ಎಂದು ಹೇಳಿದರು.

ಸಾಮಾನ್ಯವಾಗಿ ‘ಇಂಡಿಯಾದ ರಾಷ್ಟ್ರಪತಿ’ ಎಂದು ಬಳಸಲಾಗುತ್ತದೆ. ಆದರೆ G20 ಔತಣಕೂಟದ ಆಹ್ವಾನದಲ್ಲಿ ‘ಭಾರತದ ಅಧ್ಯಕ್ಷ’ ಹೆಸರಿನಲ್ಲಿ ಕಳುಹಿಸಲಾಯಿತು. ಇದು INDIA ಮತ್ತು ಭಾರತ ನಡುವಿನ ರಾಜಕೀಯ ಗದ್ದಲಕ್ಕೆ ಕಾರಣವಾಯಿತು. ಇಂದು ಲೋಕಸಭೆಯಲ್ಲಿ ಈ ವಿಚಾರವನ್ನು ಕಾಂಗ್ರೆಸ್ ನಾಯಕ ಚೌಧರಿ ಪ್ರಸ್ತಾಪಿಸಿದರು. 26 ವಿರೋಧ ಪಕ್ಷಗಳು ಒಗ್ಗೂಡಿ ತನ್ನನ್ನು ತಾನು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (I.N.D.I.A) ಎಂದು ಒfಕೂಟ ರಚನೆ ಮಾಡಿದವು. ಹಾಗಾಗಿ ಈ ‘INDIA’ ಎನ್ನುವ ಹೆಸರಿನ ಮೇಲೆ ಕೇಂದ್ರ ಬಿಜೆಪಿ ದಾಳಿ ನಡೆಸುತ್ತಿದೆ.

ಇದನ್ನೂ ಓದಿ: ಭಗವದ್ಗೀತೆ, ಕುರಾನ್, ಬೈಬಲ್‌ಗಿಂತ ನಮಗೆ ಸಂವಿಧಾನವೇ ಹೆಚ್ಚು: ಲೋಕಸಭೆಯಲ್ಲಿ ಅಧೀರ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...