Homeಕರ್ನಾಟಕಸಮಾಜ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಬೇಕು: ಸಚಿವ ಕೃಷ್ಣ ಬೈರೇಗೌಡ

ಸಮಾಜ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಬೇಕು: ಸಚಿವ ಕೃಷ್ಣ ಬೈರೇಗೌಡ

ಬ್ಯಾಟರಾಯನಪುರದಲ್ಲಿ ರೂ. 4.5 ಕೋಟಿ ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ಶಾಲೆ ಉದ್ಘಾಟನೆ

- Advertisement -
- Advertisement -

ಸಮಾಜದಲ್ಲಿರುವ ಪ್ರತಿಯೊಬ್ಬರೂ ಹೆಚ್ಚಿನ ಪ್ರಯತ್ನ ಮಾಡಿ ಸರ್ಕಾರಿ ಶಾಲೆಗಳಲ್ಲಿ ಮತ್ತಷ್ಟು ಉತ್ತಮ ಗುಮಟ್ಟದ ಶಿಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದ್ದು, ಖಾಸಗಿ ಶಾಲೆಯ ಮಕ್ಕಳೂ ಸರ್ಕಾರಿ ಶಾಲೆಗಳ ಕಡೆ ಮುಖಮಾಡುವಂತಹ ದಿನಗಳು ಶೀಘ್ರದಲ್ಲೇ ಬರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಬೆಂಗಳೂರಿನಲ್ಲಿ ಅಭಿಪ್ರಾಯಪಟ್ಟರು.ಸಮಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಿಎಸ್ಆರ್ ಫಂಡ್ ಹಾಗೂ ಉದ್ಯಮಿ ಆನಂದ್ ಪೈ ಕುಟುಂಬದವರ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ 17 ನೂತನ ತರಗತಿ ಕೊಠಡಿ, ಉತ್ತಮ ಗುಣಮಟ್ಟದ ಶೌಚಾಲಯ ಹಾಗೂ ಅಡುಗೆ ಕೊಣೆಯನ್ನು ಒಳಗೊಂಡ ಹೈಟೆಕ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

“ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಆ ನಿಟ್ಟಿನಲ್ಲಿ ಖಾಸಗಿ ಶಾಲೆಯ ಮಕ್ಕಳಿಗೆ ಸಿಗುವಂತಹ ಉತ್ತಮ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಮಕ್ಕಳಿಗೂ ಸಿಗುವಂತಾಗಬೇಕು ಎಂಬುದೇ ಎಲ್ಲರ ಆಶಯ. ಆ ನಿಟ್ಟಿನಲ್ಲಿ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಪ್ರಸ್ತುತ ನಿರ್ಮಿಸಲಾಗಿರುವ ಈ ಶಾಲೆ ಯಾರೇ ಆದರೂ ಒಮ್ಮೆ ತಿರುಗಿ ನೋಡುವಂತೆ ಅಭಿವೃದ್ಧಿಯಾಗಿರುವುದು ಸಂತಸದ ವಿಚಾರ” ಎಂದು ಅಭಿಪ್ರಾಯಪಟ್ಟರು.

ಇದನ್ನೂಓದಿ: ಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

“ಬ್ಯಾಟರಾಯನಪುರದಲ್ಲಿ ಅನೇಕ ಸರ್ಕಾರಿ ಶಾಲೆಗಳನ್ನುಈಗಾಗಲೇ ಸಿಎಸ್ಆರ್ ಫಂಡ್ ಬಳಸಿ ಉನ್ನತ ಮಟ್ಟಕ್ಕೆ ಏರಿಸಲಾಗಿದೆ. ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಕಟ್ಟಡ ಹಾಗೂ ಕಲಿಕಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಪರಿಣಾಮ ಸರ್ಕಾರಿ ಶಾಲೆಗಳಿಗೆ ಆಗಮಿಸುವ ಮಕ್ಕಳ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ” ಎಂದು ಅವರು ಹೇಳಿದರು.

“ಇದೇ ಮಾದರಿಯಲ್ಲಿ ಇದೀಗ ಮತ್ತೊಂದು ಶಾಲೆ ಲೋಕಾರ್ಪಣೆಯಾಗಿದ್ದು ನಿಜಕ್ಕೂ ಹೆಮ್ಮೆ ಪಡಬೇಕಾದ ವಿಚಾರ. ಈ ಮೂಲಕ ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ, ನಾಳಿನ ಸಮಾಜಕ್ಕೆ ಅವರನ್ನು ಆಸ್ತಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ” ಎಂದು ಅವರು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕರಿಗೂ ಕಿವಿಮಾತು ಹೇಳಿದ ಸಚಿವ ಕೃಷ್ಣ ಬೈರೇಗೌಡ ಅವರು, “ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಕೂಡಲೇ ಶಾಲೆಗಳು ಉತ್ತಮಗೊಳ್ಳುವುದಿಲ್ಲ. ಬದಲಾಗಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿದಾಗ ಮಾತ್ರ ನಮ್ಮ ಕೆಲಸ ಸಾರ್ಥಕವಾಗುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಕೆಲಸ ಮಾಡಲಿ, ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳೂ ನಾಳೆ ದೊಡ್ಡ ಉದ್ಯಮಿಗಳಾಗಿ ನಮ್ಮ ಸಮಾಜಕ್ಕೆ ಹಾಗೂ ಎಲ್ಲಾ ಶಿಕ್ಷಕರಿಗೂ ಮತ್ತಷ್ಟು ಸ್ಫೂರ್ತಿ ಪ್ರೇರಣೆಯಾಗಲಿ” ಎಂದು ಆಶಿಸಿದರು.ಸಮಾಜ

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...