Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ 'ಜಾತಿ ಗಣತಿ'ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

- Advertisement -
- Advertisement -

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ (ಸೆ.23) ವಿಚಾರಣೆ ನಡೆಸಿತು.

ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು. “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅರ್ಜಿದಾರರು ‘ಜಾತಿ ಸಮೀಕ್ಷೆ’ ಎಂದು ವ್ಯಾಖ್ಯಾನಿಸುವ ಮೂಲಕ ತಪ್ಪಾಗಿ ಚಿತ್ರಿಸಿದ್ದಾರೆ” ಎಂದು ಆಕ್ಷೇಪಿಸಿದರು.

ಆಗ ಪೀಠವು “ಪ್ರತಿಯೊಬ್ಬ ನಿವಾಸಿಯನ್ನು ಪತ್ತೆ ಮಾಡಿ, ಅವರ ಜಾತಿಯನ್ನು ಗುರುತಿಸಲಾಗುತ್ತಿದೆ ಎಂಬುದು ಅರ್ಜಿದಾರರ ವಾದವಾಗಿದೆ. ಹಾಗಾದರೆ, ಜಾತಿ ಸಮೀಕ್ಷೆಗೂ ಇದಕ್ಕೂ ವ್ಯತ್ಯಾಸವೇನು? ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಸಿಂಘ್ವಿ, “ದತ್ತಾಂಶವಿಲ್ಲದೇ ಕಲ್ಯಾಣ ಕ್ರಮಗಳನ್ನು ರೂಪಿಸಲಾಗದು. ಇದು ನ್ಯಾಯಾಂಗ ಪರಿಶೀಲನೆಗೆ ಒಳಪಡುವುದಿಲ್ಲ. ವಿಶೇಷ ಪ್ರಕರಣಗಳಲ್ಲಿ ಮಾತ್ರ ನ್ಯಾಯಾಲಯ ಮಧ್ಯಂತರ ತಡೆ ನೀಡಬಹುದಾಗಿದೆ” ಎಂದರು.

“ದತ್ತಾಂಶವಿಲ್ಲದೇ ತರ್ಕಬದ್ಧ ನೀತಿ ಅಥವಾ ತರ್ಕಬದ್ಧ ಸಲಹೆ ನೀಡುವುದು ಹೇಗೆ? ಅರ್ಜಿದಾರರು ಸರ್ಕಾರದ ತೀರ್ಮಾನ ಪ್ರಶ್ನಿಸಲು ಬಯಸುತ್ತಿಲ್ಲ. ಆದರೆ, ನಿರ್ಧಾರ ಕೈಗೊಳ್ಳಲು ಸಂಗ್ರಹಕ್ಕೆ ಮುಂದಾಗಿರುವ ದತ್ತಾಂಶ ಸಂಗ್ರಹ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದಾರೆ. ಸಂಪೂರ್ಣ ವಾದ ಆಲಿಸಿ ಇಡೀ ಪ್ರಕ್ರಿಯೆ ಅಸಾಂವಿಧಾನಿಕ ಎಂದು ನ್ಯಾಯಾಲಯ ಹೇಳಬಹುದು. ಹಾಗಾಗಿ, ಈ ಹಂತದಲ್ಲಿ ಮಧ್ಯಂತರ ತಡೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಅರ್ಜಿದಾರರ ವಾದವನ್ನು ಒಪ್ಪಿದರೆ ಎಲ್ಲಾ ದತ್ತಾಂಶ ಸಮೀಕ್ಷೆಯು ಗಣತಿ ಎಂದಾಗಲಿದೆ. ಸರ್ಕಾರ ಎಣಿಕೆಯ ದೃಷ್ಟಿಯಿಂದ ದತ್ತಾಂಶ ಸಂಗ್ರಹಿಸುವಾಗ ಖಾಸಗಿತನ ಉಲ್ಲಂಘನೆಯಾಗುವುದಿಲ್ಲ” ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಸಮೀಕ್ಷೆಯಲ್ಲಿ ದತ್ತಾಂಶ ನೀಡುವುದು ಸ್ವಯಂಪ್ರೇರಿತ ನಿರ್ಧಾರವಾಗಿದ್ದು, ಕಡ್ಡಾಯವಾಗಿ ಮಾಹಿತಿ ನೀಡಲೇಬೇಕಾದ ಗಣತಿ ಕಾಯ್ದೆಗೆ ವಿರುದ್ಧ” ಎಂದರು.

ಇದಕ್ಕೂ ಮುನ್ನ, ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಸಮೀಕ್ಷೆಗಾಗಿ ಸರ್ಕಾರ ಮತ್ತು ಆಯೋಗ ನೀಡಿರುವ ಹ್ಯಾಂಡ್‌ಬುಕ್‌ನಲ್ಲಿ ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸಂವಿಧಾನದ 342ನೇ ವಿಧಿಯಡಿ ನಿರ್ಬಂಧ ಇರುವುದರಿಂದ ಸಮೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕಾನೂನಿನ ಅಡಿ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಉದ್ದೇಶಕ್ಕಾಗಿ ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ, ನಿರ್ವಹಿಸಬಹುದು. ಆದರೆ, ಇದು ಕೇಂದ್ರ ಸರ್ಕಾರದ ಪಟ್ಟಿಗಿಂತ ವಿಭಿನ್ನ” ಎಂದರು.

ಮತ್ತೊಬ್ಬರು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್‌ ಪಾಟೀಲ್‌ ಅವರು, “ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆಯ ಸೆಕ್ಷನ್‌ 9(1)(ii)ಅಡಿ ಸಮೀಕ್ಷೆ ನಡೆಸಲು ಯಾವುದೇ ಕಾರ್ಯ ವಿಧಾನವಿಲ್ಲ. ಈ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂವಿಧಾನದ 342ನೇ ವಿಧಿ ಸೂಪರ್‌ ಸೀಡ್‌ ಮಾಡಲಾಗದು. ಸಮೀಕ್ಷೆಯಲ್ಲಿ ಇಡೀ ರಾಜ್ಯದ ಜನತೆಯನ್ನು ಒಳಗೊಳ್ಳಲಾಗುತ್ತದೆ. ಇದು ಗಣತಿಯಲ್ಲದೇ ಬೇರೇನೂ ಅಲ್ಲ. ಇದು ಸಂವಿಧಾನದ 342ಎ ವಿಧಿಗೆ ವಿರುದ್ಧವಾಗಿದ್ದು, ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದು ಚುನಾವಣೆಗಾಗಿ ಪ್ರತಿ ಜಾತಿಯ ಸಂಖ್ಯೆಯನ್ನು ಪತ್ತೆ ಮಾಡುವ ಅಧಿಕಾರದ ಕುತಂತ್ರ ಕಸರತ್ತು” ಎಂದು ಹೇಳಿದರು.

ರಾಜ್ಯ ಒಕ್ಕಲಿಗರ ಸಂಘವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಜಾತಿ ಗುರುತಿಸುವಿಕೆಯನ್ನು ಸ್ವೇಚ್ಛೆಯಿಂದ ಮಾಡಲಾಗುತ್ತಿದೆ. ಜಾತಿ ಗುರುತಿಸುವುದಕ್ಕೆ ಪೂರಕವಾಗಿ ಯಾವುದೇ ಅಧ್ಯಯನವನ್ನು ಸರ್ಕಾರ ಮಾಡಿಲ್ಲ. ಇದರಿಂದ ನಕಲಿ ಸಾಧ್ಯತೆ ಹೆಚ್ಚಾಗಲಿದ್ದು, ಜನರು ತಪ್ಪು ದತ್ತಾಂಶ ನೀಡುವ ಸಾಧ್ಯತೆ ಇದೆ. ಮಾಹಿತಿಯ ಖಾಸಗಿತನದ ಪ್ರಶ್ನೆಯೂ ಇಲ್ಲಿದ್ದು, ಡಿಜಿಟಲ್‌ ರೂಪದಲ್ಲಿ ದಾಖಲಿಸಿದ ದತ್ತಾಂಶ ಸೋರಿಕೆಯಾಗುವುದನ್ನು ಅಲ್ಲಗಳೆಯಲಾಗದು. ಸಮೀಕ್ಷೆಯಲ್ಲಿ ಎತ್ತಲಾಗಿರುವ ಪ್ರಶ್ನೆಗಳನ್ನು ನೋಡಿದರೆ ಅದು ವ್ಯಕ್ತಿಯೊಬ್ಬರ ವಿವರವಲ್ಲದೇ ಬೇರೇನೂ ಅಲ್ಲ. ಇಂಥ ಸಮೀಕ್ಷೆಗೆ ಅವಕಾಶವಿಲ್ಲ” ಎಂದರು.

ಮಾಜಿ ಶಾಸಕ ಕೆ.ಎನ್‌ ಸುಬ್ಬಾರೆಡ್ಡಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ವಿವೇಕ್‌ ರೆಡ್ಡಿ ಅವರು, “ಹಲವು ಜಾತಿಗಳನ್ನು ಧರ್ಮದೊಂದಿಗೆ ತಳುಕು ಹಾಕಲಾಗಿದೆ. ಹೊಸ ಪಟ್ಟಿಯಲ್ಲಿ ಅವೈಜ್ಞಾನಿಕ ಗುಂಪು ಸೃಷ್ಟಿಸಲಾಗಿದ್ದು, ಪ್ರಮುಖ ಜಾತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಆಯೋಗವು ತನ್ನ ವಿವೇಚನೆ ಬಳಸಿಲ್ಲ. ಕೃತಕವಾಗಿ ಜಾತಿಗಳನ್ನು ಸೃಷ್ಟಿ ಮಾಡಲಾಗಿದ್ದು, ವಿವೇಚನೆ ಬಳಕೆ ಮಾಡಲಾಗಿಲ್ಲ. ಇದು ಗೊಂದಲಕ್ಕೆ ನಾಂದಿಯಾಗಿದೆ. ಪ್ರಮುಖ ದತ್ತಾಂಶವನ್ನು ಅಸ್ತ್ರವಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ದತ್ತಾಂಶ ಗಣಿಗಾರಿಕೆ ಮಾಡುವುದು ಸರ್ಕಾರ ಉದ್ದೇಶವಾಗಿದೆ” ಎಂದು ಆರೋಪಿಸಿದರು.

ಅಖಿಲ ಭಾರತ ಬ್ರಾಹ್ಮಣ ಮಹಾಸಭಾವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಶ್ರೀರಂಗ ಸುಬ್ಬಣ್ಣ ಅವರು “ಸಮೀಕ್ಷೆ ನಡೆಸಲು ಅತ್ಯಂತ ಅವಸರ ಪಡಲಾಗುತ್ತಿದ್ದು, ಕೆಲವು ವಿಚಾರಗಳು ನಿರ್ಧಾರವಾಗುವವರೆಗೆ ಸರ್ಕಾರ ಮತ್ತು ಆಯೋಗಕ್ಕೆ ಸಮೀಕ್ಷೆ ಮುಂದುವರಿಸುವಂತೆ ನಿರ್ದೇಶಿಸುವುದು ಅಗತ್ಯವಾಗಿದೆ” ಎಂದರು.

ಎಲ್ಲ ಪಕ್ಷಕಾರರ ವಾದ ಆಲಿಸಿದ ಪೀಠವು ವಿಚಾರಣೆಯನ್ನು ಇಂದಿಗೆ (ಸೆ.24) ಮುಂದೂಡಿದೆ.

Courtesy: livelaw.in

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...