Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ 'ಜಾತಿ ಗಣತಿ'ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

- Advertisement -
- Advertisement -

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ (ಸೆ.23) ವಿಚಾರಣೆ ನಡೆಸಿತು.

ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು. “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅರ್ಜಿದಾರರು ‘ಜಾತಿ ಸಮೀಕ್ಷೆ’ ಎಂದು ವ್ಯಾಖ್ಯಾನಿಸುವ ಮೂಲಕ ತಪ್ಪಾಗಿ ಚಿತ್ರಿಸಿದ್ದಾರೆ” ಎಂದು ಆಕ್ಷೇಪಿಸಿದರು.

ಆಗ ಪೀಠವು “ಪ್ರತಿಯೊಬ್ಬ ನಿವಾಸಿಯನ್ನು ಪತ್ತೆ ಮಾಡಿ, ಅವರ ಜಾತಿಯನ್ನು ಗುರುತಿಸಲಾಗುತ್ತಿದೆ ಎಂಬುದು ಅರ್ಜಿದಾರರ ವಾದವಾಗಿದೆ. ಹಾಗಾದರೆ, ಜಾತಿ ಸಮೀಕ್ಷೆಗೂ ಇದಕ್ಕೂ ವ್ಯತ್ಯಾಸವೇನು? ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಸಿಂಘ್ವಿ, “ದತ್ತಾಂಶವಿಲ್ಲದೇ ಕಲ್ಯಾಣ ಕ್ರಮಗಳನ್ನು ರೂಪಿಸಲಾಗದು. ಇದು ನ್ಯಾಯಾಂಗ ಪರಿಶೀಲನೆಗೆ ಒಳಪಡುವುದಿಲ್ಲ. ವಿಶೇಷ ಪ್ರಕರಣಗಳಲ್ಲಿ ಮಾತ್ರ ನ್ಯಾಯಾಲಯ ಮಧ್ಯಂತರ ತಡೆ ನೀಡಬಹುದಾಗಿದೆ” ಎಂದರು.

“ದತ್ತಾಂಶವಿಲ್ಲದೇ ತರ್ಕಬದ್ಧ ನೀತಿ ಅಥವಾ ತರ್ಕಬದ್ಧ ಸಲಹೆ ನೀಡುವುದು ಹೇಗೆ? ಅರ್ಜಿದಾರರು ಸರ್ಕಾರದ ತೀರ್ಮಾನ ಪ್ರಶ್ನಿಸಲು ಬಯಸುತ್ತಿಲ್ಲ. ಆದರೆ, ನಿರ್ಧಾರ ಕೈಗೊಳ್ಳಲು ಸಂಗ್ರಹಕ್ಕೆ ಮುಂದಾಗಿರುವ ದತ್ತಾಂಶ ಸಂಗ್ರಹ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದಾರೆ. ಸಂಪೂರ್ಣ ವಾದ ಆಲಿಸಿ ಇಡೀ ಪ್ರಕ್ರಿಯೆ ಅಸಾಂವಿಧಾನಿಕ ಎಂದು ನ್ಯಾಯಾಲಯ ಹೇಳಬಹುದು. ಹಾಗಾಗಿ, ಈ ಹಂತದಲ್ಲಿ ಮಧ್ಯಂತರ ತಡೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಅರ್ಜಿದಾರರ ವಾದವನ್ನು ಒಪ್ಪಿದರೆ ಎಲ್ಲಾ ದತ್ತಾಂಶ ಸಮೀಕ್ಷೆಯು ಗಣತಿ ಎಂದಾಗಲಿದೆ. ಸರ್ಕಾರ ಎಣಿಕೆಯ ದೃಷ್ಟಿಯಿಂದ ದತ್ತಾಂಶ ಸಂಗ್ರಹಿಸುವಾಗ ಖಾಸಗಿತನ ಉಲ್ಲಂಘನೆಯಾಗುವುದಿಲ್ಲ” ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಸಮೀಕ್ಷೆಯಲ್ಲಿ ದತ್ತಾಂಶ ನೀಡುವುದು ಸ್ವಯಂಪ್ರೇರಿತ ನಿರ್ಧಾರವಾಗಿದ್ದು, ಕಡ್ಡಾಯವಾಗಿ ಮಾಹಿತಿ ನೀಡಲೇಬೇಕಾದ ಗಣತಿ ಕಾಯ್ದೆಗೆ ವಿರುದ್ಧ” ಎಂದರು.

ಇದಕ್ಕೂ ಮುನ್ನ, ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಸಮೀಕ್ಷೆಗಾಗಿ ಸರ್ಕಾರ ಮತ್ತು ಆಯೋಗ ನೀಡಿರುವ ಹ್ಯಾಂಡ್‌ಬುಕ್‌ನಲ್ಲಿ ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸಂವಿಧಾನದ 342ನೇ ವಿಧಿಯಡಿ ನಿರ್ಬಂಧ ಇರುವುದರಿಂದ ಸಮೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕಾನೂನಿನ ಅಡಿ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಉದ್ದೇಶಕ್ಕಾಗಿ ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ, ನಿರ್ವಹಿಸಬಹುದು. ಆದರೆ, ಇದು ಕೇಂದ್ರ ಸರ್ಕಾರದ ಪಟ್ಟಿಗಿಂತ ವಿಭಿನ್ನ” ಎಂದರು.

ಮತ್ತೊಬ್ಬರು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್‌ ಪಾಟೀಲ್‌ ಅವರು, “ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆಯ ಸೆಕ್ಷನ್‌ 9(1)(ii)ಅಡಿ ಸಮೀಕ್ಷೆ ನಡೆಸಲು ಯಾವುದೇ ಕಾರ್ಯ ವಿಧಾನವಿಲ್ಲ. ಈ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂವಿಧಾನದ 342ನೇ ವಿಧಿ ಸೂಪರ್‌ ಸೀಡ್‌ ಮಾಡಲಾಗದು. ಸಮೀಕ್ಷೆಯಲ್ಲಿ ಇಡೀ ರಾಜ್ಯದ ಜನತೆಯನ್ನು ಒಳಗೊಳ್ಳಲಾಗುತ್ತದೆ. ಇದು ಗಣತಿಯಲ್ಲದೇ ಬೇರೇನೂ ಅಲ್ಲ. ಇದು ಸಂವಿಧಾನದ 342ಎ ವಿಧಿಗೆ ವಿರುದ್ಧವಾಗಿದ್ದು, ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದು ಚುನಾವಣೆಗಾಗಿ ಪ್ರತಿ ಜಾತಿಯ ಸಂಖ್ಯೆಯನ್ನು ಪತ್ತೆ ಮಾಡುವ ಅಧಿಕಾರದ ಕುತಂತ್ರ ಕಸರತ್ತು” ಎಂದು ಹೇಳಿದರು.

ರಾಜ್ಯ ಒಕ್ಕಲಿಗರ ಸಂಘವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಜಾತಿ ಗುರುತಿಸುವಿಕೆಯನ್ನು ಸ್ವೇಚ್ಛೆಯಿಂದ ಮಾಡಲಾಗುತ್ತಿದೆ. ಜಾತಿ ಗುರುತಿಸುವುದಕ್ಕೆ ಪೂರಕವಾಗಿ ಯಾವುದೇ ಅಧ್ಯಯನವನ್ನು ಸರ್ಕಾರ ಮಾಡಿಲ್ಲ. ಇದರಿಂದ ನಕಲಿ ಸಾಧ್ಯತೆ ಹೆಚ್ಚಾಗಲಿದ್ದು, ಜನರು ತಪ್ಪು ದತ್ತಾಂಶ ನೀಡುವ ಸಾಧ್ಯತೆ ಇದೆ. ಮಾಹಿತಿಯ ಖಾಸಗಿತನದ ಪ್ರಶ್ನೆಯೂ ಇಲ್ಲಿದ್ದು, ಡಿಜಿಟಲ್‌ ರೂಪದಲ್ಲಿ ದಾಖಲಿಸಿದ ದತ್ತಾಂಶ ಸೋರಿಕೆಯಾಗುವುದನ್ನು ಅಲ್ಲಗಳೆಯಲಾಗದು. ಸಮೀಕ್ಷೆಯಲ್ಲಿ ಎತ್ತಲಾಗಿರುವ ಪ್ರಶ್ನೆಗಳನ್ನು ನೋಡಿದರೆ ಅದು ವ್ಯಕ್ತಿಯೊಬ್ಬರ ವಿವರವಲ್ಲದೇ ಬೇರೇನೂ ಅಲ್ಲ. ಇಂಥ ಸಮೀಕ್ಷೆಗೆ ಅವಕಾಶವಿಲ್ಲ” ಎಂದರು.

ಮಾಜಿ ಶಾಸಕ ಕೆ.ಎನ್‌ ಸುಬ್ಬಾರೆಡ್ಡಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ವಿವೇಕ್‌ ರೆಡ್ಡಿ ಅವರು, “ಹಲವು ಜಾತಿಗಳನ್ನು ಧರ್ಮದೊಂದಿಗೆ ತಳುಕು ಹಾಕಲಾಗಿದೆ. ಹೊಸ ಪಟ್ಟಿಯಲ್ಲಿ ಅವೈಜ್ಞಾನಿಕ ಗುಂಪು ಸೃಷ್ಟಿಸಲಾಗಿದ್ದು, ಪ್ರಮುಖ ಜಾತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಆಯೋಗವು ತನ್ನ ವಿವೇಚನೆ ಬಳಸಿಲ್ಲ. ಕೃತಕವಾಗಿ ಜಾತಿಗಳನ್ನು ಸೃಷ್ಟಿ ಮಾಡಲಾಗಿದ್ದು, ವಿವೇಚನೆ ಬಳಕೆ ಮಾಡಲಾಗಿಲ್ಲ. ಇದು ಗೊಂದಲಕ್ಕೆ ನಾಂದಿಯಾಗಿದೆ. ಪ್ರಮುಖ ದತ್ತಾಂಶವನ್ನು ಅಸ್ತ್ರವಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ದತ್ತಾಂಶ ಗಣಿಗಾರಿಕೆ ಮಾಡುವುದು ಸರ್ಕಾರ ಉದ್ದೇಶವಾಗಿದೆ” ಎಂದು ಆರೋಪಿಸಿದರು.

ಅಖಿಲ ಭಾರತ ಬ್ರಾಹ್ಮಣ ಮಹಾಸಭಾವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಶ್ರೀರಂಗ ಸುಬ್ಬಣ್ಣ ಅವರು “ಸಮೀಕ್ಷೆ ನಡೆಸಲು ಅತ್ಯಂತ ಅವಸರ ಪಡಲಾಗುತ್ತಿದ್ದು, ಕೆಲವು ವಿಚಾರಗಳು ನಿರ್ಧಾರವಾಗುವವರೆಗೆ ಸರ್ಕಾರ ಮತ್ತು ಆಯೋಗಕ್ಕೆ ಸಮೀಕ್ಷೆ ಮುಂದುವರಿಸುವಂತೆ ನಿರ್ದೇಶಿಸುವುದು ಅಗತ್ಯವಾಗಿದೆ” ಎಂದರು.

ಎಲ್ಲ ಪಕ್ಷಕಾರರ ವಾದ ಆಲಿಸಿದ ಪೀಠವು ವಿಚಾರಣೆಯನ್ನು ಇಂದಿಗೆ (ಸೆ.24) ಮುಂದೂಡಿದೆ.

Courtesy: livelaw.in

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...