Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ 'ಜಾತಿ ಗಣತಿ'ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

- Advertisement -
- Advertisement -

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ (ಸೆ.23) ವಿಚಾರಣೆ ನಡೆಸಿತು.

ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು. “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅರ್ಜಿದಾರರು ‘ಜಾತಿ ಸಮೀಕ್ಷೆ’ ಎಂದು ವ್ಯಾಖ್ಯಾನಿಸುವ ಮೂಲಕ ತಪ್ಪಾಗಿ ಚಿತ್ರಿಸಿದ್ದಾರೆ” ಎಂದು ಆಕ್ಷೇಪಿಸಿದರು.

ಆಗ ಪೀಠವು “ಪ್ರತಿಯೊಬ್ಬ ನಿವಾಸಿಯನ್ನು ಪತ್ತೆ ಮಾಡಿ, ಅವರ ಜಾತಿಯನ್ನು ಗುರುತಿಸಲಾಗುತ್ತಿದೆ ಎಂಬುದು ಅರ್ಜಿದಾರರ ವಾದವಾಗಿದೆ. ಹಾಗಾದರೆ, ಜಾತಿ ಸಮೀಕ್ಷೆಗೂ ಇದಕ್ಕೂ ವ್ಯತ್ಯಾಸವೇನು? ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಸಿಂಘ್ವಿ, “ದತ್ತಾಂಶವಿಲ್ಲದೇ ಕಲ್ಯಾಣ ಕ್ರಮಗಳನ್ನು ರೂಪಿಸಲಾಗದು. ಇದು ನ್ಯಾಯಾಂಗ ಪರಿಶೀಲನೆಗೆ ಒಳಪಡುವುದಿಲ್ಲ. ವಿಶೇಷ ಪ್ರಕರಣಗಳಲ್ಲಿ ಮಾತ್ರ ನ್ಯಾಯಾಲಯ ಮಧ್ಯಂತರ ತಡೆ ನೀಡಬಹುದಾಗಿದೆ” ಎಂದರು.

“ದತ್ತಾಂಶವಿಲ್ಲದೇ ತರ್ಕಬದ್ಧ ನೀತಿ ಅಥವಾ ತರ್ಕಬದ್ಧ ಸಲಹೆ ನೀಡುವುದು ಹೇಗೆ? ಅರ್ಜಿದಾರರು ಸರ್ಕಾರದ ತೀರ್ಮಾನ ಪ್ರಶ್ನಿಸಲು ಬಯಸುತ್ತಿಲ್ಲ. ಆದರೆ, ನಿರ್ಧಾರ ಕೈಗೊಳ್ಳಲು ಸಂಗ್ರಹಕ್ಕೆ ಮುಂದಾಗಿರುವ ದತ್ತಾಂಶ ಸಂಗ್ರಹ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದಾರೆ. ಸಂಪೂರ್ಣ ವಾದ ಆಲಿಸಿ ಇಡೀ ಪ್ರಕ್ರಿಯೆ ಅಸಾಂವಿಧಾನಿಕ ಎಂದು ನ್ಯಾಯಾಲಯ ಹೇಳಬಹುದು. ಹಾಗಾಗಿ, ಈ ಹಂತದಲ್ಲಿ ಮಧ್ಯಂತರ ತಡೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಅರ್ಜಿದಾರರ ವಾದವನ್ನು ಒಪ್ಪಿದರೆ ಎಲ್ಲಾ ದತ್ತಾಂಶ ಸಮೀಕ್ಷೆಯು ಗಣತಿ ಎಂದಾಗಲಿದೆ. ಸರ್ಕಾರ ಎಣಿಕೆಯ ದೃಷ್ಟಿಯಿಂದ ದತ್ತಾಂಶ ಸಂಗ್ರಹಿಸುವಾಗ ಖಾಸಗಿತನ ಉಲ್ಲಂಘನೆಯಾಗುವುದಿಲ್ಲ” ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಸಮೀಕ್ಷೆಯಲ್ಲಿ ದತ್ತಾಂಶ ನೀಡುವುದು ಸ್ವಯಂಪ್ರೇರಿತ ನಿರ್ಧಾರವಾಗಿದ್ದು, ಕಡ್ಡಾಯವಾಗಿ ಮಾಹಿತಿ ನೀಡಲೇಬೇಕಾದ ಗಣತಿ ಕಾಯ್ದೆಗೆ ವಿರುದ್ಧ” ಎಂದರು.

ಇದಕ್ಕೂ ಮುನ್ನ, ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಸಮೀಕ್ಷೆಗಾಗಿ ಸರ್ಕಾರ ಮತ್ತು ಆಯೋಗ ನೀಡಿರುವ ಹ್ಯಾಂಡ್‌ಬುಕ್‌ನಲ್ಲಿ ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸಂವಿಧಾನದ 342ನೇ ವಿಧಿಯಡಿ ನಿರ್ಬಂಧ ಇರುವುದರಿಂದ ಸಮೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕಾನೂನಿನ ಅಡಿ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಉದ್ದೇಶಕ್ಕಾಗಿ ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ, ನಿರ್ವಹಿಸಬಹುದು. ಆದರೆ, ಇದು ಕೇಂದ್ರ ಸರ್ಕಾರದ ಪಟ್ಟಿಗಿಂತ ವಿಭಿನ್ನ” ಎಂದರು.

ಮತ್ತೊಬ್ಬರು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್‌ ಪಾಟೀಲ್‌ ಅವರು, “ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆಯ ಸೆಕ್ಷನ್‌ 9(1)(ii)ಅಡಿ ಸಮೀಕ್ಷೆ ನಡೆಸಲು ಯಾವುದೇ ಕಾರ್ಯ ವಿಧಾನವಿಲ್ಲ. ಈ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂವಿಧಾನದ 342ನೇ ವಿಧಿ ಸೂಪರ್‌ ಸೀಡ್‌ ಮಾಡಲಾಗದು. ಸಮೀಕ್ಷೆಯಲ್ಲಿ ಇಡೀ ರಾಜ್ಯದ ಜನತೆಯನ್ನು ಒಳಗೊಳ್ಳಲಾಗುತ್ತದೆ. ಇದು ಗಣತಿಯಲ್ಲದೇ ಬೇರೇನೂ ಅಲ್ಲ. ಇದು ಸಂವಿಧಾನದ 342ಎ ವಿಧಿಗೆ ವಿರುದ್ಧವಾಗಿದ್ದು, ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದು ಚುನಾವಣೆಗಾಗಿ ಪ್ರತಿ ಜಾತಿಯ ಸಂಖ್ಯೆಯನ್ನು ಪತ್ತೆ ಮಾಡುವ ಅಧಿಕಾರದ ಕುತಂತ್ರ ಕಸರತ್ತು” ಎಂದು ಹೇಳಿದರು.

ರಾಜ್ಯ ಒಕ್ಕಲಿಗರ ಸಂಘವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಜಾತಿ ಗುರುತಿಸುವಿಕೆಯನ್ನು ಸ್ವೇಚ್ಛೆಯಿಂದ ಮಾಡಲಾಗುತ್ತಿದೆ. ಜಾತಿ ಗುರುತಿಸುವುದಕ್ಕೆ ಪೂರಕವಾಗಿ ಯಾವುದೇ ಅಧ್ಯಯನವನ್ನು ಸರ್ಕಾರ ಮಾಡಿಲ್ಲ. ಇದರಿಂದ ನಕಲಿ ಸಾಧ್ಯತೆ ಹೆಚ್ಚಾಗಲಿದ್ದು, ಜನರು ತಪ್ಪು ದತ್ತಾಂಶ ನೀಡುವ ಸಾಧ್ಯತೆ ಇದೆ. ಮಾಹಿತಿಯ ಖಾಸಗಿತನದ ಪ್ರಶ್ನೆಯೂ ಇಲ್ಲಿದ್ದು, ಡಿಜಿಟಲ್‌ ರೂಪದಲ್ಲಿ ದಾಖಲಿಸಿದ ದತ್ತಾಂಶ ಸೋರಿಕೆಯಾಗುವುದನ್ನು ಅಲ್ಲಗಳೆಯಲಾಗದು. ಸಮೀಕ್ಷೆಯಲ್ಲಿ ಎತ್ತಲಾಗಿರುವ ಪ್ರಶ್ನೆಗಳನ್ನು ನೋಡಿದರೆ ಅದು ವ್ಯಕ್ತಿಯೊಬ್ಬರ ವಿವರವಲ್ಲದೇ ಬೇರೇನೂ ಅಲ್ಲ. ಇಂಥ ಸಮೀಕ್ಷೆಗೆ ಅವಕಾಶವಿಲ್ಲ” ಎಂದರು.

ಮಾಜಿ ಶಾಸಕ ಕೆ.ಎನ್‌ ಸುಬ್ಬಾರೆಡ್ಡಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ವಿವೇಕ್‌ ರೆಡ್ಡಿ ಅವರು, “ಹಲವು ಜಾತಿಗಳನ್ನು ಧರ್ಮದೊಂದಿಗೆ ತಳುಕು ಹಾಕಲಾಗಿದೆ. ಹೊಸ ಪಟ್ಟಿಯಲ್ಲಿ ಅವೈಜ್ಞಾನಿಕ ಗುಂಪು ಸೃಷ್ಟಿಸಲಾಗಿದ್ದು, ಪ್ರಮುಖ ಜಾತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಆಯೋಗವು ತನ್ನ ವಿವೇಚನೆ ಬಳಸಿಲ್ಲ. ಕೃತಕವಾಗಿ ಜಾತಿಗಳನ್ನು ಸೃಷ್ಟಿ ಮಾಡಲಾಗಿದ್ದು, ವಿವೇಚನೆ ಬಳಕೆ ಮಾಡಲಾಗಿಲ್ಲ. ಇದು ಗೊಂದಲಕ್ಕೆ ನಾಂದಿಯಾಗಿದೆ. ಪ್ರಮುಖ ದತ್ತಾಂಶವನ್ನು ಅಸ್ತ್ರವಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ದತ್ತಾಂಶ ಗಣಿಗಾರಿಕೆ ಮಾಡುವುದು ಸರ್ಕಾರ ಉದ್ದೇಶವಾಗಿದೆ” ಎಂದು ಆರೋಪಿಸಿದರು.

ಅಖಿಲ ಭಾರತ ಬ್ರಾಹ್ಮಣ ಮಹಾಸಭಾವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಶ್ರೀರಂಗ ಸುಬ್ಬಣ್ಣ ಅವರು “ಸಮೀಕ್ಷೆ ನಡೆಸಲು ಅತ್ಯಂತ ಅವಸರ ಪಡಲಾಗುತ್ತಿದ್ದು, ಕೆಲವು ವಿಚಾರಗಳು ನಿರ್ಧಾರವಾಗುವವರೆಗೆ ಸರ್ಕಾರ ಮತ್ತು ಆಯೋಗಕ್ಕೆ ಸಮೀಕ್ಷೆ ಮುಂದುವರಿಸುವಂತೆ ನಿರ್ದೇಶಿಸುವುದು ಅಗತ್ಯವಾಗಿದೆ” ಎಂದರು.

ಎಲ್ಲ ಪಕ್ಷಕಾರರ ವಾದ ಆಲಿಸಿದ ಪೀಠವು ವಿಚಾರಣೆಯನ್ನು ಇಂದಿಗೆ (ಸೆ.24) ಮುಂದೂಡಿದೆ.

Courtesy: livelaw.in

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...