Homeಕರ್ನಾಟಕಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

"ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡಿ, ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ".

- Advertisement -
- Advertisement -

ಜಾತಿ, ಧರ್ಮದ ಅಮಲನ್ನು ಜನರ ಮೆದುಳಿಗೆ ತುಂಬುವುದು, ಅಧಿಕಾರಕ್ಕೆ ಏರಲು ಜಾತಿಯನ್ನು ಬಳಸುವುದು. ಜಾತಿಗೊಂದು ನಿಗಮ ರಚನೆ, ಮೀಸಲಾತಿಯ ಘೋಷಣೆ, ಮಠಗಳಿಗೆ ಪುರಸ್ಕಾರ, ಇವೆಲ್ಲವೂ ತಮ್ಮ ಜಾತಿ ಬೆಂಬಲವನ್ನು ಘೋಷಿಸಿಕೊಳ್ಳುವುದು ರಾಜಕೀಯ ನಡೆಯಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿರುವ ಸೊಗಡು ಶಿವಣ್ಣ ಅವರ ಹೇಳಿಕೆ ಚರ್ಚೆಗೆ ಗ್ರಾಸ ಒದಗಿಸಿದೆ. ಈ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಸಮಾಧಾನವನ್ನು ಹೊರಹಾಕಿರುವುದು ಸಪ್ಷವಾಗುತ್ತದೆ. ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಟೀಕಿಸುತ್ತಲೇ ಮುಖ್ಯಮಂತ್ರಿಗಳ ಇತ್ತೀಚಿನ ನಡೆಗಳನ್ನು ಸೊಗಡು ಶಿವಣ್ಣ ಟೀಕಿಸಿದ್ದಾರೆ.

ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಕುಂಚಿಟಿಗರನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆ ನೀಡಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ, ಒಳಮೀಸಲಾತಿ ಜಾರಿ, ಮಠಗಳಿಗೆ ಹೆಚ್ಚಿನ ಮನ್ನಣೆ ನೀಡಿದ್ದು -ಇವೆಲ್ಲವೂ ಮುಖ್ಯ ಮಂತ್ರಿಗಳು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಅನುಸರಿಸಿದ ರಾಜಕೀಯ ನಡೆಗಳು. ಇದನ್ನೇ ಮಾಜಿ ಸಚಿವ ಸೊಗಡು ಶಿವಣ್ಣ ಟೀಕಿಸುತ್ತಿರುವುದು. ಅಂದರೆ ಮುಖ್ಯಮಂತ್ರಿಗಳು ಭಿನ್ನ ದಿಕ್ಕಿನಲ್ಲಿ ನಡೆಯುತ್ತಿದ್ದಾರೆ. ಅದು ಸಲ್ಲದ ನಡೆ ಎಂಬುದರದತ್ತ ಬೊಟ್ಟು ಮಾಡಿ ಮೂಲ ಬಿಜೆಪಿಯ ಮುಖಂಡ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ತೆಲುಗು, ತಮಿಳು, ಮರಾಠಿ, ಮಲಯಾಳಂ: ಇದು ಎಲ್ಲರ ಕರ್ನಾಟಕ – ಪ್ರೊ.ರಹಮತ್ ತರೀಕೆರೆ

ಸೊಗಡು ಶಿವಣ್ಣ ತಾವು ಬೆಂಬಲಿಸುವ ಕೆ.ಎಸ್.ಈಶ್ವರಪ್ಪ ಕೂಡ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಒತ್ತಾಯ ಮಾಡುತ್ತಿದ್ದು ಇದರ ಕುರಿತು ಮಾತ್ರ ಟೀಕೆ ವ್ಯಕ್ತಪಡಿಸಿಲ್ಲ. ಆದರೆ ಮುಖ್ಯಮಂತ್ರಿಗಳು ತನ್ನ ಬೆಂಬಲಿಗರಿಗೆ ಯಾವುದೇ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಮನಸು ಮಾಡಿಲ್ಲ ಎಂಬ ಬೇಸರ ಸೊಗಡು ಶಿವಣ್ಣ ಅವರನ್ನು ಕಾಡುತ್ತಿದೆ. ಇದೇ ಕಾರಣಕ್ಕೆ ಧರ್ಮ ಒಡೆಯುವ ವಿಷಯದ ಕುರಿತು ಹೇಳಿಕೆ ನೀಡಿ ಮುಖ್ಯಮಂತ್ರಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಬಿಜೆಪಿಯಲ್ಲಿ ಯಡಿಯೂರಪ್ಪ ವಿರುದ್ಧದ ದನಿಗಳು ಹೆಚ್ಚುವಂತೆ ನೋಡಿಕೊಳ್ಳಲಾಗುತ್ತಿದೆ. ಇಡೀ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿಗಳು ಧರ್ಮವನ್ನು ಪ್ರಚುರ ಪಡಿಸಬೇಕು. ಧರ್ಮದ ರಕ್ಷಣೆ ಮಾಡಬೇಕು. ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಹೇಳುತ್ತಾರೆಯೇ ವಿನಃ ಉತ್ತರಪ್ರದೇಶದಲ್ಲಿ ಸನ್ಯಾಸಿಯಾಗಿದ್ದುಕೊಂಡೇ ಕಾವಿಯೊಳಗೆ ಅಧಿಕೃತವಾಗಿ ರಾಜಕೀಯ ಮಾಡುತ್ತಿರುವ ಮುಖ್ಯಮಂತ್ರಿ ಆದಿತ್ಯನಾಥ್ ಬಗ್ಗೆ ಮೌನ ವಹಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುತ್ತಿರುವ ವೇಳೆ ತನ್ನನ್ನು ಪರಿಗಣಿಸಬೇಕು ಎಂದು ಸೊಗಡು ಶಿವಣ್ಣ ಬಯಸುತ್ತಿರಬಹುದು.ಇದನ್ನು ಬಹಿರಂಗವಾಗಿ ಎಲ್ಲಿಯೂ ತೋರ್ಪಡಿಕೊಳ್ಳುತ್ತಿಲ್ಲ. ಆದರೂ ಮುಖ್ಯಮಂತ್ರಿಗಳನ್ನು ಪರೋಕ್ಷವಾಗಿ ಟೀಕಿಸಿರುವುದಂತೂ ಸತ್ಯ. ಬಿಜೆಪಿ ಜಾತಿಯನ್ನೇ ಹೊದ್ದು ಮಲಗಿದೆ. ವರ್ಣಾಶ್ರಮ ಶ್ರೇಣೀಕರಣ ವ್ಯವಸ್ಥೆಯೇ ಬಿಜೆಪಿಯ ಧರ್ಮ. ಜಾತಿ ವ್ಯವಸ್ಥೆ ಯನ್ನು ಪೋಷಿಸಿಕೊಂಡು ಬರುತ್ತಿರುವ ಬಿಜೆಪಿಯ ಧರ್ಮಕ್ಕೆ ಒಗ್ಗಿಕೊಳ್ಳದವರು ದೇಶದ್ರೋಹಿಗಳೆಂಬಂತೆ ಬಿಂಬಿಸಲಾಗುತ್ತಿದೆ. ಇದು ಸೊಗಡು ಶಿವಣ್ಣ ಅವರಿಗೆ ಗೊತ್ತಿಲ್ಲದೆ ಇಲ್ಲ. ಸತ್ಯ ಗೊತ್ತಿದ್ದು ದ್ವಂದ್ವಮುಖಿಯಾಗಿ ಉಳಿಯಲು ಬಯಸುವುದು ಬಿಜೆಪಿಯ ಧರ್ಮದ ತಿರುಳು.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಬಸವಣ್ಣ, ಕನಕದಾಸ, ಬುದ್ದ, ಮಹಾವೀರ, ವಿವೇಕಾನಂದರು ತಮ್ಮ ಆದರ್ಶವೆಂದು ಹೇಳಿಕೊಂಡಿರುವ ಸೊಗಡು ಶಿವಣ್ಣ ಜಾತಿ ವ್ಯವಸ್ಥೆ ಪೋಷಿಸುವ ಹಿಂದೂ ಧರ್ಮದ ರಕ್ಷಣೆಗೆ ಬದ್ದರಾಗಬೇಕು ಎಂಬ ಬೇಡಿಕೆ ಇಟ್ಟಿರುವುದು ಇಲ್ಲಿ ಗಮನಿಸಬೇಕಾದ ಸಂಗತಿ. ಶೋಷಣೆಗೆ ಒಳಗಾದವರು, ಬಡವರ ರಕ್ಷಣೆಗೆ ಬರಬೇಕೆಂಬ ಶಿವಣ್ಣ ಅವರ ಮಾತು ಸತ್ಯ. ಆದರೆ ಬಿಜೆಪಿ ಸರ್ಕಾರ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಬಲಿಷ್ಠ ಜಾತಿಗಳ ಪರ ನಿಂತಿದ್ದು ನಮ್ಮ ಕಣ್ಣ ಮುಂದೆಯೇ ಇದೆ. ಅದರ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಲಿಲ್ಲ. ಈ ಬಗ್ಗೆ ಸೊಗಡು ಶಿವಣ್ಣನವರು ಚಕಾರ ಎತ್ತಲಿಲ್ಲ ಎಂಬುದೂ ಬೇರೆ ಮಾತು.

ಎರಡು ಪುಟಗಳಷ್ಟು ಪತ್ರಿಕಾ ಹೇಳಿಕೆಯಲ್ಲಿ “ರಾಜಕೀಯ ನಡೆ”ಯಲ್ಲಿ ವ್ಯಕ್ತವಾಗಿರುವ ನಾಲ್ಕು ಅಂಶಗಳು ಸಿಎಂ ಯಡಿಯೂರಪ್ಪ ಅವರನ್ನೇ ಗುರಿಯಾಗಿಸಿಕೊಳ್ಳಲಾಗಿದೆ. ಇದು ಮೇಲ್ನೋಟಕ್ಕೆ ಸತ್ಯವಾದ ಅಂಶಗಳು. ಇದರಲ್ಲಿ ಯಾವುದೇ ತಕಾರು ಇಲ್ಲ. ಹೀಗೆಂದು ಸಿಎಂ ವಿರುದ್ದ ತೊಡೆ ತಟ್ಟಿ ನಿಂತಿರುವುದು ಸೊಗಡು ಶಿವಣ್ಣ ಅವರ ಮಾತುಗಳ ಹಿಂದಿದೆ.

ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡುವುದು ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ. ಮುಖ್ಯಮಂತ್ರಿ ಯಡಿಯೂರಪ್ಪ ನಡೆ ಸಂವಿಧಾನ ವಿರೋಧಿಯಾದುದು. ಹಾಗೆ ನೋಡಿದರೆ ಸೊಗಡು ಶಿವಣ್ಣ ಮುಖ್ಯಮಂತ್ರಿ ಗಳನ್ನು ಟೀಕಿಸಿರುವುದು ಸರಿಯಾಗಿಯೇ ಇದೆ. ಅದು ಬಾಯಿ ಮಾತು ಆಗಬಾರದು. ಹುದ್ದೆ ಹೊಡೆಯುವ ಉದ್ದೇಶ ಆಗಬಾರದು. ಆಗ ಮಾತ್ರ ಶಿವಣ್ಣ ಮಾತಿಗೆ ಬೆಲೆ ಬರುತ್ತದೆ.


ಇದನ್ನೂ ಓದಿ: ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...