Homeಕರ್ನಾಟಕಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

"ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡಿ, ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ".

- Advertisement -
- Advertisement -

ಜಾತಿ, ಧರ್ಮದ ಅಮಲನ್ನು ಜನರ ಮೆದುಳಿಗೆ ತುಂಬುವುದು, ಅಧಿಕಾರಕ್ಕೆ ಏರಲು ಜಾತಿಯನ್ನು ಬಳಸುವುದು. ಜಾತಿಗೊಂದು ನಿಗಮ ರಚನೆ, ಮೀಸಲಾತಿಯ ಘೋಷಣೆ, ಮಠಗಳಿಗೆ ಪುರಸ್ಕಾರ, ಇವೆಲ್ಲವೂ ತಮ್ಮ ಜಾತಿ ಬೆಂಬಲವನ್ನು ಘೋಷಿಸಿಕೊಳ್ಳುವುದು ರಾಜಕೀಯ ನಡೆಯಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿರುವ ಸೊಗಡು ಶಿವಣ್ಣ ಅವರ ಹೇಳಿಕೆ ಚರ್ಚೆಗೆ ಗ್ರಾಸ ಒದಗಿಸಿದೆ. ಈ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಸಮಾಧಾನವನ್ನು ಹೊರಹಾಕಿರುವುದು ಸಪ್ಷವಾಗುತ್ತದೆ. ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಟೀಕಿಸುತ್ತಲೇ ಮುಖ್ಯಮಂತ್ರಿಗಳ ಇತ್ತೀಚಿನ ನಡೆಗಳನ್ನು ಸೊಗಡು ಶಿವಣ್ಣ ಟೀಕಿಸಿದ್ದಾರೆ.

ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಕುಂಚಿಟಿಗರನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆ ನೀಡಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ, ಒಳಮೀಸಲಾತಿ ಜಾರಿ, ಮಠಗಳಿಗೆ ಹೆಚ್ಚಿನ ಮನ್ನಣೆ ನೀಡಿದ್ದು -ಇವೆಲ್ಲವೂ ಮುಖ್ಯ ಮಂತ್ರಿಗಳು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಅನುಸರಿಸಿದ ರಾಜಕೀಯ ನಡೆಗಳು. ಇದನ್ನೇ ಮಾಜಿ ಸಚಿವ ಸೊಗಡು ಶಿವಣ್ಣ ಟೀಕಿಸುತ್ತಿರುವುದು. ಅಂದರೆ ಮುಖ್ಯಮಂತ್ರಿಗಳು ಭಿನ್ನ ದಿಕ್ಕಿನಲ್ಲಿ ನಡೆಯುತ್ತಿದ್ದಾರೆ. ಅದು ಸಲ್ಲದ ನಡೆ ಎಂಬುದರದತ್ತ ಬೊಟ್ಟು ಮಾಡಿ ಮೂಲ ಬಿಜೆಪಿಯ ಮುಖಂಡ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ತೆಲುಗು, ತಮಿಳು, ಮರಾಠಿ, ಮಲಯಾಳಂ: ಇದು ಎಲ್ಲರ ಕರ್ನಾಟಕ – ಪ್ರೊ.ರಹಮತ್ ತರೀಕೆರೆ

ಸೊಗಡು ಶಿವಣ್ಣ ತಾವು ಬೆಂಬಲಿಸುವ ಕೆ.ಎಸ್.ಈಶ್ವರಪ್ಪ ಕೂಡ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಒತ್ತಾಯ ಮಾಡುತ್ತಿದ್ದು ಇದರ ಕುರಿತು ಮಾತ್ರ ಟೀಕೆ ವ್ಯಕ್ತಪಡಿಸಿಲ್ಲ. ಆದರೆ ಮುಖ್ಯಮಂತ್ರಿಗಳು ತನ್ನ ಬೆಂಬಲಿಗರಿಗೆ ಯಾವುದೇ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಮನಸು ಮಾಡಿಲ್ಲ ಎಂಬ ಬೇಸರ ಸೊಗಡು ಶಿವಣ್ಣ ಅವರನ್ನು ಕಾಡುತ್ತಿದೆ. ಇದೇ ಕಾರಣಕ್ಕೆ ಧರ್ಮ ಒಡೆಯುವ ವಿಷಯದ ಕುರಿತು ಹೇಳಿಕೆ ನೀಡಿ ಮುಖ್ಯಮಂತ್ರಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಬಿಜೆಪಿಯಲ್ಲಿ ಯಡಿಯೂರಪ್ಪ ವಿರುದ್ಧದ ದನಿಗಳು ಹೆಚ್ಚುವಂತೆ ನೋಡಿಕೊಳ್ಳಲಾಗುತ್ತಿದೆ. ಇಡೀ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿಗಳು ಧರ್ಮವನ್ನು ಪ್ರಚುರ ಪಡಿಸಬೇಕು. ಧರ್ಮದ ರಕ್ಷಣೆ ಮಾಡಬೇಕು. ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಹೇಳುತ್ತಾರೆಯೇ ವಿನಃ ಉತ್ತರಪ್ರದೇಶದಲ್ಲಿ ಸನ್ಯಾಸಿಯಾಗಿದ್ದುಕೊಂಡೇ ಕಾವಿಯೊಳಗೆ ಅಧಿಕೃತವಾಗಿ ರಾಜಕೀಯ ಮಾಡುತ್ತಿರುವ ಮುಖ್ಯಮಂತ್ರಿ ಆದಿತ್ಯನಾಥ್ ಬಗ್ಗೆ ಮೌನ ವಹಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುತ್ತಿರುವ ವೇಳೆ ತನ್ನನ್ನು ಪರಿಗಣಿಸಬೇಕು ಎಂದು ಸೊಗಡು ಶಿವಣ್ಣ ಬಯಸುತ್ತಿರಬಹುದು.ಇದನ್ನು ಬಹಿರಂಗವಾಗಿ ಎಲ್ಲಿಯೂ ತೋರ್ಪಡಿಕೊಳ್ಳುತ್ತಿಲ್ಲ. ಆದರೂ ಮುಖ್ಯಮಂತ್ರಿಗಳನ್ನು ಪರೋಕ್ಷವಾಗಿ ಟೀಕಿಸಿರುವುದಂತೂ ಸತ್ಯ. ಬಿಜೆಪಿ ಜಾತಿಯನ್ನೇ ಹೊದ್ದು ಮಲಗಿದೆ. ವರ್ಣಾಶ್ರಮ ಶ್ರೇಣೀಕರಣ ವ್ಯವಸ್ಥೆಯೇ ಬಿಜೆಪಿಯ ಧರ್ಮ. ಜಾತಿ ವ್ಯವಸ್ಥೆ ಯನ್ನು ಪೋಷಿಸಿಕೊಂಡು ಬರುತ್ತಿರುವ ಬಿಜೆಪಿಯ ಧರ್ಮಕ್ಕೆ ಒಗ್ಗಿಕೊಳ್ಳದವರು ದೇಶದ್ರೋಹಿಗಳೆಂಬಂತೆ ಬಿಂಬಿಸಲಾಗುತ್ತಿದೆ. ಇದು ಸೊಗಡು ಶಿವಣ್ಣ ಅವರಿಗೆ ಗೊತ್ತಿಲ್ಲದೆ ಇಲ್ಲ. ಸತ್ಯ ಗೊತ್ತಿದ್ದು ದ್ವಂದ್ವಮುಖಿಯಾಗಿ ಉಳಿಯಲು ಬಯಸುವುದು ಬಿಜೆಪಿಯ ಧರ್ಮದ ತಿರುಳು.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಬಸವಣ್ಣ, ಕನಕದಾಸ, ಬುದ್ದ, ಮಹಾವೀರ, ವಿವೇಕಾನಂದರು ತಮ್ಮ ಆದರ್ಶವೆಂದು ಹೇಳಿಕೊಂಡಿರುವ ಸೊಗಡು ಶಿವಣ್ಣ ಜಾತಿ ವ್ಯವಸ್ಥೆ ಪೋಷಿಸುವ ಹಿಂದೂ ಧರ್ಮದ ರಕ್ಷಣೆಗೆ ಬದ್ದರಾಗಬೇಕು ಎಂಬ ಬೇಡಿಕೆ ಇಟ್ಟಿರುವುದು ಇಲ್ಲಿ ಗಮನಿಸಬೇಕಾದ ಸಂಗತಿ. ಶೋಷಣೆಗೆ ಒಳಗಾದವರು, ಬಡವರ ರಕ್ಷಣೆಗೆ ಬರಬೇಕೆಂಬ ಶಿವಣ್ಣ ಅವರ ಮಾತು ಸತ್ಯ. ಆದರೆ ಬಿಜೆಪಿ ಸರ್ಕಾರ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಬಲಿಷ್ಠ ಜಾತಿಗಳ ಪರ ನಿಂತಿದ್ದು ನಮ್ಮ ಕಣ್ಣ ಮುಂದೆಯೇ ಇದೆ. ಅದರ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಲಿಲ್ಲ. ಈ ಬಗ್ಗೆ ಸೊಗಡು ಶಿವಣ್ಣನವರು ಚಕಾರ ಎತ್ತಲಿಲ್ಲ ಎಂಬುದೂ ಬೇರೆ ಮಾತು.

ಎರಡು ಪುಟಗಳಷ್ಟು ಪತ್ರಿಕಾ ಹೇಳಿಕೆಯಲ್ಲಿ “ರಾಜಕೀಯ ನಡೆ”ಯಲ್ಲಿ ವ್ಯಕ್ತವಾಗಿರುವ ನಾಲ್ಕು ಅಂಶಗಳು ಸಿಎಂ ಯಡಿಯೂರಪ್ಪ ಅವರನ್ನೇ ಗುರಿಯಾಗಿಸಿಕೊಳ್ಳಲಾಗಿದೆ. ಇದು ಮೇಲ್ನೋಟಕ್ಕೆ ಸತ್ಯವಾದ ಅಂಶಗಳು. ಇದರಲ್ಲಿ ಯಾವುದೇ ತಕಾರು ಇಲ್ಲ. ಹೀಗೆಂದು ಸಿಎಂ ವಿರುದ್ದ ತೊಡೆ ತಟ್ಟಿ ನಿಂತಿರುವುದು ಸೊಗಡು ಶಿವಣ್ಣ ಅವರ ಮಾತುಗಳ ಹಿಂದಿದೆ.

ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡುವುದು ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ. ಮುಖ್ಯಮಂತ್ರಿ ಯಡಿಯೂರಪ್ಪ ನಡೆ ಸಂವಿಧಾನ ವಿರೋಧಿಯಾದುದು. ಹಾಗೆ ನೋಡಿದರೆ ಸೊಗಡು ಶಿವಣ್ಣ ಮುಖ್ಯಮಂತ್ರಿ ಗಳನ್ನು ಟೀಕಿಸಿರುವುದು ಸರಿಯಾಗಿಯೇ ಇದೆ. ಅದು ಬಾಯಿ ಮಾತು ಆಗಬಾರದು. ಹುದ್ದೆ ಹೊಡೆಯುವ ಉದ್ದೇಶ ಆಗಬಾರದು. ಆಗ ಮಾತ್ರ ಶಿವಣ್ಣ ಮಾತಿಗೆ ಬೆಲೆ ಬರುತ್ತದೆ.


ಇದನ್ನೂ ಓದಿ: ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...