Homeಕರ್ನಾಟಕಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

"ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡಿ, ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ".

- Advertisement -
- Advertisement -

ಜಾತಿ, ಧರ್ಮದ ಅಮಲನ್ನು ಜನರ ಮೆದುಳಿಗೆ ತುಂಬುವುದು, ಅಧಿಕಾರಕ್ಕೆ ಏರಲು ಜಾತಿಯನ್ನು ಬಳಸುವುದು. ಜಾತಿಗೊಂದು ನಿಗಮ ರಚನೆ, ಮೀಸಲಾತಿಯ ಘೋಷಣೆ, ಮಠಗಳಿಗೆ ಪುರಸ್ಕಾರ, ಇವೆಲ್ಲವೂ ತಮ್ಮ ಜಾತಿ ಬೆಂಬಲವನ್ನು ಘೋಷಿಸಿಕೊಳ್ಳುವುದು ರಾಜಕೀಯ ನಡೆಯಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿರುವ ಸೊಗಡು ಶಿವಣ್ಣ ಅವರ ಹೇಳಿಕೆ ಚರ್ಚೆಗೆ ಗ್ರಾಸ ಒದಗಿಸಿದೆ. ಈ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಸಮಾಧಾನವನ್ನು ಹೊರಹಾಕಿರುವುದು ಸಪ್ಷವಾಗುತ್ತದೆ. ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಟೀಕಿಸುತ್ತಲೇ ಮುಖ್ಯಮಂತ್ರಿಗಳ ಇತ್ತೀಚಿನ ನಡೆಗಳನ್ನು ಸೊಗಡು ಶಿವಣ್ಣ ಟೀಕಿಸಿದ್ದಾರೆ.

ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಕುಂಚಿಟಿಗರನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆ ನೀಡಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ, ಒಳಮೀಸಲಾತಿ ಜಾರಿ, ಮಠಗಳಿಗೆ ಹೆಚ್ಚಿನ ಮನ್ನಣೆ ನೀಡಿದ್ದು -ಇವೆಲ್ಲವೂ ಮುಖ್ಯ ಮಂತ್ರಿಗಳು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಅನುಸರಿಸಿದ ರಾಜಕೀಯ ನಡೆಗಳು. ಇದನ್ನೇ ಮಾಜಿ ಸಚಿವ ಸೊಗಡು ಶಿವಣ್ಣ ಟೀಕಿಸುತ್ತಿರುವುದು. ಅಂದರೆ ಮುಖ್ಯಮಂತ್ರಿಗಳು ಭಿನ್ನ ದಿಕ್ಕಿನಲ್ಲಿ ನಡೆಯುತ್ತಿದ್ದಾರೆ. ಅದು ಸಲ್ಲದ ನಡೆ ಎಂಬುದರದತ್ತ ಬೊಟ್ಟು ಮಾಡಿ ಮೂಲ ಬಿಜೆಪಿಯ ಮುಖಂಡ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ತೆಲುಗು, ತಮಿಳು, ಮರಾಠಿ, ಮಲಯಾಳಂ: ಇದು ಎಲ್ಲರ ಕರ್ನಾಟಕ – ಪ್ರೊ.ರಹಮತ್ ತರೀಕೆರೆ

ಸೊಗಡು ಶಿವಣ್ಣ ತಾವು ಬೆಂಬಲಿಸುವ ಕೆ.ಎಸ್.ಈಶ್ವರಪ್ಪ ಕೂಡ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಒತ್ತಾಯ ಮಾಡುತ್ತಿದ್ದು ಇದರ ಕುರಿತು ಮಾತ್ರ ಟೀಕೆ ವ್ಯಕ್ತಪಡಿಸಿಲ್ಲ. ಆದರೆ ಮುಖ್ಯಮಂತ್ರಿಗಳು ತನ್ನ ಬೆಂಬಲಿಗರಿಗೆ ಯಾವುದೇ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಮನಸು ಮಾಡಿಲ್ಲ ಎಂಬ ಬೇಸರ ಸೊಗಡು ಶಿವಣ್ಣ ಅವರನ್ನು ಕಾಡುತ್ತಿದೆ. ಇದೇ ಕಾರಣಕ್ಕೆ ಧರ್ಮ ಒಡೆಯುವ ವಿಷಯದ ಕುರಿತು ಹೇಳಿಕೆ ನೀಡಿ ಮುಖ್ಯಮಂತ್ರಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಬಿಜೆಪಿಯಲ್ಲಿ ಯಡಿಯೂರಪ್ಪ ವಿರುದ್ಧದ ದನಿಗಳು ಹೆಚ್ಚುವಂತೆ ನೋಡಿಕೊಳ್ಳಲಾಗುತ್ತಿದೆ. ಇಡೀ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿಗಳು ಧರ್ಮವನ್ನು ಪ್ರಚುರ ಪಡಿಸಬೇಕು. ಧರ್ಮದ ರಕ್ಷಣೆ ಮಾಡಬೇಕು. ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಹೇಳುತ್ತಾರೆಯೇ ವಿನಃ ಉತ್ತರಪ್ರದೇಶದಲ್ಲಿ ಸನ್ಯಾಸಿಯಾಗಿದ್ದುಕೊಂಡೇ ಕಾವಿಯೊಳಗೆ ಅಧಿಕೃತವಾಗಿ ರಾಜಕೀಯ ಮಾಡುತ್ತಿರುವ ಮುಖ್ಯಮಂತ್ರಿ ಆದಿತ್ಯನಾಥ್ ಬಗ್ಗೆ ಮೌನ ವಹಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುತ್ತಿರುವ ವೇಳೆ ತನ್ನನ್ನು ಪರಿಗಣಿಸಬೇಕು ಎಂದು ಸೊಗಡು ಶಿವಣ್ಣ ಬಯಸುತ್ತಿರಬಹುದು.ಇದನ್ನು ಬಹಿರಂಗವಾಗಿ ಎಲ್ಲಿಯೂ ತೋರ್ಪಡಿಕೊಳ್ಳುತ್ತಿಲ್ಲ. ಆದರೂ ಮುಖ್ಯಮಂತ್ರಿಗಳನ್ನು ಪರೋಕ್ಷವಾಗಿ ಟೀಕಿಸಿರುವುದಂತೂ ಸತ್ಯ. ಬಿಜೆಪಿ ಜಾತಿಯನ್ನೇ ಹೊದ್ದು ಮಲಗಿದೆ. ವರ್ಣಾಶ್ರಮ ಶ್ರೇಣೀಕರಣ ವ್ಯವಸ್ಥೆಯೇ ಬಿಜೆಪಿಯ ಧರ್ಮ. ಜಾತಿ ವ್ಯವಸ್ಥೆ ಯನ್ನು ಪೋಷಿಸಿಕೊಂಡು ಬರುತ್ತಿರುವ ಬಿಜೆಪಿಯ ಧರ್ಮಕ್ಕೆ ಒಗ್ಗಿಕೊಳ್ಳದವರು ದೇಶದ್ರೋಹಿಗಳೆಂಬಂತೆ ಬಿಂಬಿಸಲಾಗುತ್ತಿದೆ. ಇದು ಸೊಗಡು ಶಿವಣ್ಣ ಅವರಿಗೆ ಗೊತ್ತಿಲ್ಲದೆ ಇಲ್ಲ. ಸತ್ಯ ಗೊತ್ತಿದ್ದು ದ್ವಂದ್ವಮುಖಿಯಾಗಿ ಉಳಿಯಲು ಬಯಸುವುದು ಬಿಜೆಪಿಯ ಧರ್ಮದ ತಿರುಳು.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಬಸವಣ್ಣ, ಕನಕದಾಸ, ಬುದ್ದ, ಮಹಾವೀರ, ವಿವೇಕಾನಂದರು ತಮ್ಮ ಆದರ್ಶವೆಂದು ಹೇಳಿಕೊಂಡಿರುವ ಸೊಗಡು ಶಿವಣ್ಣ ಜಾತಿ ವ್ಯವಸ್ಥೆ ಪೋಷಿಸುವ ಹಿಂದೂ ಧರ್ಮದ ರಕ್ಷಣೆಗೆ ಬದ್ದರಾಗಬೇಕು ಎಂಬ ಬೇಡಿಕೆ ಇಟ್ಟಿರುವುದು ಇಲ್ಲಿ ಗಮನಿಸಬೇಕಾದ ಸಂಗತಿ. ಶೋಷಣೆಗೆ ಒಳಗಾದವರು, ಬಡವರ ರಕ್ಷಣೆಗೆ ಬರಬೇಕೆಂಬ ಶಿವಣ್ಣ ಅವರ ಮಾತು ಸತ್ಯ. ಆದರೆ ಬಿಜೆಪಿ ಸರ್ಕಾರ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಬಲಿಷ್ಠ ಜಾತಿಗಳ ಪರ ನಿಂತಿದ್ದು ನಮ್ಮ ಕಣ್ಣ ಮುಂದೆಯೇ ಇದೆ. ಅದರ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಲಿಲ್ಲ. ಈ ಬಗ್ಗೆ ಸೊಗಡು ಶಿವಣ್ಣನವರು ಚಕಾರ ಎತ್ತಲಿಲ್ಲ ಎಂಬುದೂ ಬೇರೆ ಮಾತು.

ಎರಡು ಪುಟಗಳಷ್ಟು ಪತ್ರಿಕಾ ಹೇಳಿಕೆಯಲ್ಲಿ “ರಾಜಕೀಯ ನಡೆ”ಯಲ್ಲಿ ವ್ಯಕ್ತವಾಗಿರುವ ನಾಲ್ಕು ಅಂಶಗಳು ಸಿಎಂ ಯಡಿಯೂರಪ್ಪ ಅವರನ್ನೇ ಗುರಿಯಾಗಿಸಿಕೊಳ್ಳಲಾಗಿದೆ. ಇದು ಮೇಲ್ನೋಟಕ್ಕೆ ಸತ್ಯವಾದ ಅಂಶಗಳು. ಇದರಲ್ಲಿ ಯಾವುದೇ ತಕಾರು ಇಲ್ಲ. ಹೀಗೆಂದು ಸಿಎಂ ವಿರುದ್ದ ತೊಡೆ ತಟ್ಟಿ ನಿಂತಿರುವುದು ಸೊಗಡು ಶಿವಣ್ಣ ಅವರ ಮಾತುಗಳ ಹಿಂದಿದೆ.

ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡುವುದು ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ. ಮುಖ್ಯಮಂತ್ರಿ ಯಡಿಯೂರಪ್ಪ ನಡೆ ಸಂವಿಧಾನ ವಿರೋಧಿಯಾದುದು. ಹಾಗೆ ನೋಡಿದರೆ ಸೊಗಡು ಶಿವಣ್ಣ ಮುಖ್ಯಮಂತ್ರಿ ಗಳನ್ನು ಟೀಕಿಸಿರುವುದು ಸರಿಯಾಗಿಯೇ ಇದೆ. ಅದು ಬಾಯಿ ಮಾತು ಆಗಬಾರದು. ಹುದ್ದೆ ಹೊಡೆಯುವ ಉದ್ದೇಶ ಆಗಬಾರದು. ಆಗ ಮಾತ್ರ ಶಿವಣ್ಣ ಮಾತಿಗೆ ಬೆಲೆ ಬರುತ್ತದೆ.


ಇದನ್ನೂ ಓದಿ: ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...