Homeಕರ್ನಾಟಕಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

"ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡಿ, ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ".

- Advertisement -
- Advertisement -

ಜಾತಿ, ಧರ್ಮದ ಅಮಲನ್ನು ಜನರ ಮೆದುಳಿಗೆ ತುಂಬುವುದು, ಅಧಿಕಾರಕ್ಕೆ ಏರಲು ಜಾತಿಯನ್ನು ಬಳಸುವುದು. ಜಾತಿಗೊಂದು ನಿಗಮ ರಚನೆ, ಮೀಸಲಾತಿಯ ಘೋಷಣೆ, ಮಠಗಳಿಗೆ ಪುರಸ್ಕಾರ, ಇವೆಲ್ಲವೂ ತಮ್ಮ ಜಾತಿ ಬೆಂಬಲವನ್ನು ಘೋಷಿಸಿಕೊಳ್ಳುವುದು ರಾಜಕೀಯ ನಡೆಯಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿರುವ ಸೊಗಡು ಶಿವಣ್ಣ ಅವರ ಹೇಳಿಕೆ ಚರ್ಚೆಗೆ ಗ್ರಾಸ ಒದಗಿಸಿದೆ. ಈ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಸಮಾಧಾನವನ್ನು ಹೊರಹಾಕಿರುವುದು ಸಪ್ಷವಾಗುತ್ತದೆ. ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಟೀಕಿಸುತ್ತಲೇ ಮುಖ್ಯಮಂತ್ರಿಗಳ ಇತ್ತೀಚಿನ ನಡೆಗಳನ್ನು ಸೊಗಡು ಶಿವಣ್ಣ ಟೀಕಿಸಿದ್ದಾರೆ.

ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಕುಂಚಿಟಿಗರನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆ ನೀಡಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ, ಒಳಮೀಸಲಾತಿ ಜಾರಿ, ಮಠಗಳಿಗೆ ಹೆಚ್ಚಿನ ಮನ್ನಣೆ ನೀಡಿದ್ದು -ಇವೆಲ್ಲವೂ ಮುಖ್ಯ ಮಂತ್ರಿಗಳು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಅನುಸರಿಸಿದ ರಾಜಕೀಯ ನಡೆಗಳು. ಇದನ್ನೇ ಮಾಜಿ ಸಚಿವ ಸೊಗಡು ಶಿವಣ್ಣ ಟೀಕಿಸುತ್ತಿರುವುದು. ಅಂದರೆ ಮುಖ್ಯಮಂತ್ರಿಗಳು ಭಿನ್ನ ದಿಕ್ಕಿನಲ್ಲಿ ನಡೆಯುತ್ತಿದ್ದಾರೆ. ಅದು ಸಲ್ಲದ ನಡೆ ಎಂಬುದರದತ್ತ ಬೊಟ್ಟು ಮಾಡಿ ಮೂಲ ಬಿಜೆಪಿಯ ಮುಖಂಡ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ತೆಲುಗು, ತಮಿಳು, ಮರಾಠಿ, ಮಲಯಾಳಂ: ಇದು ಎಲ್ಲರ ಕರ್ನಾಟಕ – ಪ್ರೊ.ರಹಮತ್ ತರೀಕೆರೆ

ಸೊಗಡು ಶಿವಣ್ಣ ತಾವು ಬೆಂಬಲಿಸುವ ಕೆ.ಎಸ್.ಈಶ್ವರಪ್ಪ ಕೂಡ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಒತ್ತಾಯ ಮಾಡುತ್ತಿದ್ದು ಇದರ ಕುರಿತು ಮಾತ್ರ ಟೀಕೆ ವ್ಯಕ್ತಪಡಿಸಿಲ್ಲ. ಆದರೆ ಮುಖ್ಯಮಂತ್ರಿಗಳು ತನ್ನ ಬೆಂಬಲಿಗರಿಗೆ ಯಾವುದೇ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಮನಸು ಮಾಡಿಲ್ಲ ಎಂಬ ಬೇಸರ ಸೊಗಡು ಶಿವಣ್ಣ ಅವರನ್ನು ಕಾಡುತ್ತಿದೆ. ಇದೇ ಕಾರಣಕ್ಕೆ ಧರ್ಮ ಒಡೆಯುವ ವಿಷಯದ ಕುರಿತು ಹೇಳಿಕೆ ನೀಡಿ ಮುಖ್ಯಮಂತ್ರಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಬಿಜೆಪಿಯಲ್ಲಿ ಯಡಿಯೂರಪ್ಪ ವಿರುದ್ಧದ ದನಿಗಳು ಹೆಚ್ಚುವಂತೆ ನೋಡಿಕೊಳ್ಳಲಾಗುತ್ತಿದೆ. ಇಡೀ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿಗಳು ಧರ್ಮವನ್ನು ಪ್ರಚುರ ಪಡಿಸಬೇಕು. ಧರ್ಮದ ರಕ್ಷಣೆ ಮಾಡಬೇಕು. ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಹೇಳುತ್ತಾರೆಯೇ ವಿನಃ ಉತ್ತರಪ್ರದೇಶದಲ್ಲಿ ಸನ್ಯಾಸಿಯಾಗಿದ್ದುಕೊಂಡೇ ಕಾವಿಯೊಳಗೆ ಅಧಿಕೃತವಾಗಿ ರಾಜಕೀಯ ಮಾಡುತ್ತಿರುವ ಮುಖ್ಯಮಂತ್ರಿ ಆದಿತ್ಯನಾಥ್ ಬಗ್ಗೆ ಮೌನ ವಹಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುತ್ತಿರುವ ವೇಳೆ ತನ್ನನ್ನು ಪರಿಗಣಿಸಬೇಕು ಎಂದು ಸೊಗಡು ಶಿವಣ್ಣ ಬಯಸುತ್ತಿರಬಹುದು.ಇದನ್ನು ಬಹಿರಂಗವಾಗಿ ಎಲ್ಲಿಯೂ ತೋರ್ಪಡಿಕೊಳ್ಳುತ್ತಿಲ್ಲ. ಆದರೂ ಮುಖ್ಯಮಂತ್ರಿಗಳನ್ನು ಪರೋಕ್ಷವಾಗಿ ಟೀಕಿಸಿರುವುದಂತೂ ಸತ್ಯ. ಬಿಜೆಪಿ ಜಾತಿಯನ್ನೇ ಹೊದ್ದು ಮಲಗಿದೆ. ವರ್ಣಾಶ್ರಮ ಶ್ರೇಣೀಕರಣ ವ್ಯವಸ್ಥೆಯೇ ಬಿಜೆಪಿಯ ಧರ್ಮ. ಜಾತಿ ವ್ಯವಸ್ಥೆ ಯನ್ನು ಪೋಷಿಸಿಕೊಂಡು ಬರುತ್ತಿರುವ ಬಿಜೆಪಿಯ ಧರ್ಮಕ್ಕೆ ಒಗ್ಗಿಕೊಳ್ಳದವರು ದೇಶದ್ರೋಹಿಗಳೆಂಬಂತೆ ಬಿಂಬಿಸಲಾಗುತ್ತಿದೆ. ಇದು ಸೊಗಡು ಶಿವಣ್ಣ ಅವರಿಗೆ ಗೊತ್ತಿಲ್ಲದೆ ಇಲ್ಲ. ಸತ್ಯ ಗೊತ್ತಿದ್ದು ದ್ವಂದ್ವಮುಖಿಯಾಗಿ ಉಳಿಯಲು ಬಯಸುವುದು ಬಿಜೆಪಿಯ ಧರ್ಮದ ತಿರುಳು.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಬಸವಣ್ಣ, ಕನಕದಾಸ, ಬುದ್ದ, ಮಹಾವೀರ, ವಿವೇಕಾನಂದರು ತಮ್ಮ ಆದರ್ಶವೆಂದು ಹೇಳಿಕೊಂಡಿರುವ ಸೊಗಡು ಶಿವಣ್ಣ ಜಾತಿ ವ್ಯವಸ್ಥೆ ಪೋಷಿಸುವ ಹಿಂದೂ ಧರ್ಮದ ರಕ್ಷಣೆಗೆ ಬದ್ದರಾಗಬೇಕು ಎಂಬ ಬೇಡಿಕೆ ಇಟ್ಟಿರುವುದು ಇಲ್ಲಿ ಗಮನಿಸಬೇಕಾದ ಸಂಗತಿ. ಶೋಷಣೆಗೆ ಒಳಗಾದವರು, ಬಡವರ ರಕ್ಷಣೆಗೆ ಬರಬೇಕೆಂಬ ಶಿವಣ್ಣ ಅವರ ಮಾತು ಸತ್ಯ. ಆದರೆ ಬಿಜೆಪಿ ಸರ್ಕಾರ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಬಲಿಷ್ಠ ಜಾತಿಗಳ ಪರ ನಿಂತಿದ್ದು ನಮ್ಮ ಕಣ್ಣ ಮುಂದೆಯೇ ಇದೆ. ಅದರ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಲಿಲ್ಲ. ಈ ಬಗ್ಗೆ ಸೊಗಡು ಶಿವಣ್ಣನವರು ಚಕಾರ ಎತ್ತಲಿಲ್ಲ ಎಂಬುದೂ ಬೇರೆ ಮಾತು.

ಎರಡು ಪುಟಗಳಷ್ಟು ಪತ್ರಿಕಾ ಹೇಳಿಕೆಯಲ್ಲಿ “ರಾಜಕೀಯ ನಡೆ”ಯಲ್ಲಿ ವ್ಯಕ್ತವಾಗಿರುವ ನಾಲ್ಕು ಅಂಶಗಳು ಸಿಎಂ ಯಡಿಯೂರಪ್ಪ ಅವರನ್ನೇ ಗುರಿಯಾಗಿಸಿಕೊಳ್ಳಲಾಗಿದೆ. ಇದು ಮೇಲ್ನೋಟಕ್ಕೆ ಸತ್ಯವಾದ ಅಂಶಗಳು. ಇದರಲ್ಲಿ ಯಾವುದೇ ತಕಾರು ಇಲ್ಲ. ಹೀಗೆಂದು ಸಿಎಂ ವಿರುದ್ದ ತೊಡೆ ತಟ್ಟಿ ನಿಂತಿರುವುದು ಸೊಗಡು ಶಿವಣ್ಣ ಅವರ ಮಾತುಗಳ ಹಿಂದಿದೆ.

ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡುವುದು ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ. ಮುಖ್ಯಮಂತ್ರಿ ಯಡಿಯೂರಪ್ಪ ನಡೆ ಸಂವಿಧಾನ ವಿರೋಧಿಯಾದುದು. ಹಾಗೆ ನೋಡಿದರೆ ಸೊಗಡು ಶಿವಣ್ಣ ಮುಖ್ಯಮಂತ್ರಿ ಗಳನ್ನು ಟೀಕಿಸಿರುವುದು ಸರಿಯಾಗಿಯೇ ಇದೆ. ಅದು ಬಾಯಿ ಮಾತು ಆಗಬಾರದು. ಹುದ್ದೆ ಹೊಡೆಯುವ ಉದ್ದೇಶ ಆಗಬಾರದು. ಆಗ ಮಾತ್ರ ಶಿವಣ್ಣ ಮಾತಿಗೆ ಬೆಲೆ ಬರುತ್ತದೆ.


ಇದನ್ನೂ ಓದಿ: ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...