Homeಕರ್ನಾಟಕಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

"ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡಿ, ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ".

- Advertisement -
- Advertisement -

ಜಾತಿ, ಧರ್ಮದ ಅಮಲನ್ನು ಜನರ ಮೆದುಳಿಗೆ ತುಂಬುವುದು, ಅಧಿಕಾರಕ್ಕೆ ಏರಲು ಜಾತಿಯನ್ನು ಬಳಸುವುದು. ಜಾತಿಗೊಂದು ನಿಗಮ ರಚನೆ, ಮೀಸಲಾತಿಯ ಘೋಷಣೆ, ಮಠಗಳಿಗೆ ಪುರಸ್ಕಾರ, ಇವೆಲ್ಲವೂ ತಮ್ಮ ಜಾತಿ ಬೆಂಬಲವನ್ನು ಘೋಷಿಸಿಕೊಳ್ಳುವುದು ರಾಜಕೀಯ ನಡೆಯಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿರುವ ಸೊಗಡು ಶಿವಣ್ಣ ಅವರ ಹೇಳಿಕೆ ಚರ್ಚೆಗೆ ಗ್ರಾಸ ಒದಗಿಸಿದೆ. ಈ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅಸಮಾಧಾನವನ್ನು ಹೊರಹಾಕಿರುವುದು ಸಪ್ಷವಾಗುತ್ತದೆ. ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಟೀಕಿಸುತ್ತಲೇ ಮುಖ್ಯಮಂತ್ರಿಗಳ ಇತ್ತೀಚಿನ ನಡೆಗಳನ್ನು ಸೊಗಡು ಶಿವಣ್ಣ ಟೀಕಿಸಿದ್ದಾರೆ.

ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು, ಕುಂಚಿಟಿಗರನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆ ನೀಡಿದ್ದು, ಮರಾಠ ಅಭಿವೃದ್ಧಿ ಪ್ರಾಧಿಕಾರ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ, ಒಳಮೀಸಲಾತಿ ಜಾರಿ, ಮಠಗಳಿಗೆ ಹೆಚ್ಚಿನ ಮನ್ನಣೆ ನೀಡಿದ್ದು -ಇವೆಲ್ಲವೂ ಮುಖ್ಯ ಮಂತ್ರಿಗಳು ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಅನುಸರಿಸಿದ ರಾಜಕೀಯ ನಡೆಗಳು. ಇದನ್ನೇ ಮಾಜಿ ಸಚಿವ ಸೊಗಡು ಶಿವಣ್ಣ ಟೀಕಿಸುತ್ತಿರುವುದು. ಅಂದರೆ ಮುಖ್ಯಮಂತ್ರಿಗಳು ಭಿನ್ನ ದಿಕ್ಕಿನಲ್ಲಿ ನಡೆಯುತ್ತಿದ್ದಾರೆ. ಅದು ಸಲ್ಲದ ನಡೆ ಎಂಬುದರದತ್ತ ಬೊಟ್ಟು ಮಾಡಿ ಮೂಲ ಬಿಜೆಪಿಯ ಮುಖಂಡ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ತೆಲುಗು, ತಮಿಳು, ಮರಾಠಿ, ಮಲಯಾಳಂ: ಇದು ಎಲ್ಲರ ಕರ್ನಾಟಕ – ಪ್ರೊ.ರಹಮತ್ ತರೀಕೆರೆ

ಸೊಗಡು ಶಿವಣ್ಣ ತಾವು ಬೆಂಬಲಿಸುವ ಕೆ.ಎಸ್.ಈಶ್ವರಪ್ಪ ಕೂಡ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಒತ್ತಾಯ ಮಾಡುತ್ತಿದ್ದು ಇದರ ಕುರಿತು ಮಾತ್ರ ಟೀಕೆ ವ್ಯಕ್ತಪಡಿಸಿಲ್ಲ. ಆದರೆ ಮುಖ್ಯಮಂತ್ರಿಗಳು ತನ್ನ ಬೆಂಬಲಿಗರಿಗೆ ಯಾವುದೇ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲು ಮನಸು ಮಾಡಿಲ್ಲ ಎಂಬ ಬೇಸರ ಸೊಗಡು ಶಿವಣ್ಣ ಅವರನ್ನು ಕಾಡುತ್ತಿದೆ. ಇದೇ ಕಾರಣಕ್ಕೆ ಧರ್ಮ ಒಡೆಯುವ ವಿಷಯದ ಕುರಿತು ಹೇಳಿಕೆ ನೀಡಿ ಮುಖ್ಯಮಂತ್ರಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಬಿಜೆಪಿಯಲ್ಲಿ ಯಡಿಯೂರಪ್ಪ ವಿರುದ್ಧದ ದನಿಗಳು ಹೆಚ್ಚುವಂತೆ ನೋಡಿಕೊಳ್ಳಲಾಗುತ್ತಿದೆ. ಇಡೀ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿಗಳು ಧರ್ಮವನ್ನು ಪ್ರಚುರ ಪಡಿಸಬೇಕು. ಧರ್ಮದ ರಕ್ಷಣೆ ಮಾಡಬೇಕು. ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಹೇಳುತ್ತಾರೆಯೇ ವಿನಃ ಉತ್ತರಪ್ರದೇಶದಲ್ಲಿ ಸನ್ಯಾಸಿಯಾಗಿದ್ದುಕೊಂಡೇ ಕಾವಿಯೊಳಗೆ ಅಧಿಕೃತವಾಗಿ ರಾಜಕೀಯ ಮಾಡುತ್ತಿರುವ ಮುಖ್ಯಮಂತ್ರಿ ಆದಿತ್ಯನಾಥ್ ಬಗ್ಗೆ ಮೌನ ವಹಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುತ್ತಿರುವ ವೇಳೆ ತನ್ನನ್ನು ಪರಿಗಣಿಸಬೇಕು ಎಂದು ಸೊಗಡು ಶಿವಣ್ಣ ಬಯಸುತ್ತಿರಬಹುದು.ಇದನ್ನು ಬಹಿರಂಗವಾಗಿ ಎಲ್ಲಿಯೂ ತೋರ್ಪಡಿಕೊಳ್ಳುತ್ತಿಲ್ಲ. ಆದರೂ ಮುಖ್ಯಮಂತ್ರಿಗಳನ್ನು ಪರೋಕ್ಷವಾಗಿ ಟೀಕಿಸಿರುವುದಂತೂ ಸತ್ಯ. ಬಿಜೆಪಿ ಜಾತಿಯನ್ನೇ ಹೊದ್ದು ಮಲಗಿದೆ. ವರ್ಣಾಶ್ರಮ ಶ್ರೇಣೀಕರಣ ವ್ಯವಸ್ಥೆಯೇ ಬಿಜೆಪಿಯ ಧರ್ಮ. ಜಾತಿ ವ್ಯವಸ್ಥೆ ಯನ್ನು ಪೋಷಿಸಿಕೊಂಡು ಬರುತ್ತಿರುವ ಬಿಜೆಪಿಯ ಧರ್ಮಕ್ಕೆ ಒಗ್ಗಿಕೊಳ್ಳದವರು ದೇಶದ್ರೋಹಿಗಳೆಂಬಂತೆ ಬಿಂಬಿಸಲಾಗುತ್ತಿದೆ. ಇದು ಸೊಗಡು ಶಿವಣ್ಣ ಅವರಿಗೆ ಗೊತ್ತಿಲ್ಲದೆ ಇಲ್ಲ. ಸತ್ಯ ಗೊತ್ತಿದ್ದು ದ್ವಂದ್ವಮುಖಿಯಾಗಿ ಉಳಿಯಲು ಬಯಸುವುದು ಬಿಜೆಪಿಯ ಧರ್ಮದ ತಿರುಳು.

ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಬಸವಣ್ಣ, ಕನಕದಾಸ, ಬುದ್ದ, ಮಹಾವೀರ, ವಿವೇಕಾನಂದರು ತಮ್ಮ ಆದರ್ಶವೆಂದು ಹೇಳಿಕೊಂಡಿರುವ ಸೊಗಡು ಶಿವಣ್ಣ ಜಾತಿ ವ್ಯವಸ್ಥೆ ಪೋಷಿಸುವ ಹಿಂದೂ ಧರ್ಮದ ರಕ್ಷಣೆಗೆ ಬದ್ದರಾಗಬೇಕು ಎಂಬ ಬೇಡಿಕೆ ಇಟ್ಟಿರುವುದು ಇಲ್ಲಿ ಗಮನಿಸಬೇಕಾದ ಸಂಗತಿ. ಶೋಷಣೆಗೆ ಒಳಗಾದವರು, ಬಡವರ ರಕ್ಷಣೆಗೆ ಬರಬೇಕೆಂಬ ಶಿವಣ್ಣ ಅವರ ಮಾತು ಸತ್ಯ. ಆದರೆ ಬಿಜೆಪಿ ಸರ್ಕಾರ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಬಲಿಷ್ಠ ಜಾತಿಗಳ ಪರ ನಿಂತಿದ್ದು ನಮ್ಮ ಕಣ್ಣ ಮುಂದೆಯೇ ಇದೆ. ಅದರ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಲಿಲ್ಲ. ಈ ಬಗ್ಗೆ ಸೊಗಡು ಶಿವಣ್ಣನವರು ಚಕಾರ ಎತ್ತಲಿಲ್ಲ ಎಂಬುದೂ ಬೇರೆ ಮಾತು.

ಎರಡು ಪುಟಗಳಷ್ಟು ಪತ್ರಿಕಾ ಹೇಳಿಕೆಯಲ್ಲಿ “ರಾಜಕೀಯ ನಡೆ”ಯಲ್ಲಿ ವ್ಯಕ್ತವಾಗಿರುವ ನಾಲ್ಕು ಅಂಶಗಳು ಸಿಎಂ ಯಡಿಯೂರಪ್ಪ ಅವರನ್ನೇ ಗುರಿಯಾಗಿಸಿಕೊಳ್ಳಲಾಗಿದೆ. ಇದು ಮೇಲ್ನೋಟಕ್ಕೆ ಸತ್ಯವಾದ ಅಂಶಗಳು. ಇದರಲ್ಲಿ ಯಾವುದೇ ತಕಾರು ಇಲ್ಲ. ಹೀಗೆಂದು ಸಿಎಂ ವಿರುದ್ದ ತೊಡೆ ತಟ್ಟಿ ನಿಂತಿರುವುದು ಸೊಗಡು ಶಿವಣ್ಣ ಅವರ ಮಾತುಗಳ ಹಿಂದಿದೆ.

ದುರ್ಬಲರಿಗೆ ಮೀಸಲಾತಿ ನೀಡುವುದು ಸಂವಿಧಾನದ ಆಶಯ. ಬಲಿಷ್ಠರಿಗೆ ನಿಗಮ ರಚನೆ ಮಾಡುವುದು ಜಾತಿ ರಾಜಕಾರಣ ಮಾಡುವುದು ಸಂವಿಧಾನ ವಿರೋಧಿ. ಮುಖ್ಯಮಂತ್ರಿ ಯಡಿಯೂರಪ್ಪ ನಡೆ ಸಂವಿಧಾನ ವಿರೋಧಿಯಾದುದು. ಹಾಗೆ ನೋಡಿದರೆ ಸೊಗಡು ಶಿವಣ್ಣ ಮುಖ್ಯಮಂತ್ರಿ ಗಳನ್ನು ಟೀಕಿಸಿರುವುದು ಸರಿಯಾಗಿಯೇ ಇದೆ. ಅದು ಬಾಯಿ ಮಾತು ಆಗಬಾರದು. ಹುದ್ದೆ ಹೊಡೆಯುವ ಉದ್ದೇಶ ಆಗಬಾರದು. ಆಗ ಮಾತ್ರ ಶಿವಣ್ಣ ಮಾತಿಗೆ ಬೆಲೆ ಬರುತ್ತದೆ.


ಇದನ್ನೂ ಓದಿ: ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...