Homeಮುಖಪುಟಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

ಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

- Advertisement -
- Advertisement -

ಸೂರ್ಯಗ್ರಹಣವು ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮಂಗಳವಾರ ಸಂಭವಿಸಿದೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾದವು. ಈ ಬಾರಿಯ ಸೂರ್ಯಗ್ರಹಣವು ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಗೋಚರಿಸಿದ್ದು ವಿಶೇಷವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10% ದಷ್ಟು ಮಾತ್ರ ಸೂರ್ಯಗ್ರಹಣ ಗೋಚರಿಸಲಿದೆ ಎಂದು ತಜ್ಞರು ತಿಳಿಸಿದ್ದರು. ಅದೇ ರೀತಿ ಸಂಜೆ 5:12 ರಿಂದ ಪ್ರಾರಂಭವಾದ ಗ್ರಹಣ 5:55 ರವರೆಗೆ, ಸುಮಾರು 45 ನಿಮಿಷಗಳ ಕಾಲ ಗೋಚರಿಸಿದೆ. ಬೆಂಗಳೂರಿನಲ್ಲಿ ಸಂಜೆ 5:56 ಕ್ಕೆ ಸೂರ್ಯ ಅಸ್ತಮಿಸುವುದರಿಂದ ಗ್ರಹಣ ವೀಕ್ಷಣೆಗೆ ಸ್ವಲ್ಪ ಸಮಯವಷ್ಟೆ ಸಿಕ್ಕಿದ್ದು ಆಸಕ್ತರಿಗೆ ನಿರಾಸೆ ಕೂಡಾ ಮೂಡಿಸಿದೆ. 1995 ರಲ್ಲಿ ಸಂಭವಿಸಿದ ಸೂರ್ಯಗ್ರಹಣ ಕೂಡಾ ದೀಪಾವಳಿಯ ದಿನದಂದೆ ಗೋಚರಿಸಿತ್ತು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ, ಸೂರ್ಯಗ್ರಹಣದ ಹೆಸರಿನಲ್ಲಿ ಮೂಡನಂಬಿಕೆ ಬಿತ್ತುವುದನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ವಿಜ್ಞಾನದ ಕಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ಕೂಡಾ ಜನಪರ ಸಂಘಟನೆಗಳು ಆಯೋಜಿಸಿದ್ದವು. ಈ ವೇಳೆ ಅಲ್ಲಿ ಸೇರಿದ್ದ ಜನರು ಆಹಾರವನ್ನು ಸೇವಿಸಿ ಮೂಡನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದರು.

ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಸುಮಾರು 55% ರಷ್ಟು ಸೂರ್ಯಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸಿದೆ. ಲೇಹ್‌ನಲ್ಲಿ 55%, ದೆಹಲಿಯಲ್ಲಿ 44%, ಮುಂಬೈನಲ್ಲಿ 25%, ಹೈದರಾಬಾದ್‌ನಲ್ಲಿ 19% ಮತ್ತು ಕಲ್ಕತ್ತಾದಲ್ಲಿ 4% ರಷ್ಟು ಗೋಚರಿಸಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣ ಗೋಚರಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ರಷ್ಯಾ ಮತ್ತು ಕಜಕಿಸ್ತಾನ್‌ನಲ್ಲಿ 80% ದಷ್ಟು ಗ್ರಹಣ ಗೋಚರಿಸಲಿದ್ದು, ಇದು ಗರಿಷ್ಠ ಪ್ರಮಾಣವಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದರು.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಗೋಚರಿಸಿದ ಭಾಗಶಃ ಸೂರ್ಯ ಗ್ರಹಣದ ಕೆಲವು ಝಲಕ್‌ಗಳು ಇಲ್ಲಿವೆ.

ಖ್ಯಾತ ಫೋಟೋಗ್ರಾಫರ್‌ ಮನೋಜ್ ಬೂಕನಕೆರೆ ಅವರು ಕ್ಲಿಕ್ ಮಾಡಿರುವ ಮೈಸೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಶಿಕ್ಷಕರಾದ ಉದಯ್ ಅವರು ಕ್ಲಿಕ್ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಪತ್ರಕರ್ತ ಎಸ್‌. ಶ್ಯಾಮ್ ಪ್ರಸಾದ್ ಅವರು ಬೆಂಗಳೂರಿನಲ್ಲಿ ರೆಕಾರ್ಡ್ ಮಾಡಿರುವ ಸೂರ್ಯಗ್ರಹಣದ ದೃಶ್ಯ.

ಮಂಗಳೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ ಹೀಗಿತ್ತು.

ತಮಿಳುನಾಡಿನ ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಆಂಧ್ರಪ್ರದೇಶದ ವಿಶಾಕಪಟ್ಟಣಂ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಂಡುಬಂದ ಸೂರ್ಯಗ್ರಹಣ

ಜಮ್ಮುಕಾಶ್ಮೀರದ ಲಡಾಖ್‌ನಲ್ಲಿ ಗೋಚರಿಸಿದ ಸೂರ್ಯಗ್ರಹಣ

ಬೆಂಗಳೂರು

ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಬಿಹಾರದಲ್ಲಿ ಕಂಡ ಸೂರ್ಯಗ್ರಹಣ

ಮುಂಬೈನಲ್ಲಿ ಗೋಚರಿಸಿದ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...