Homeಮುಖಪುಟಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

ಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

- Advertisement -
- Advertisement -

ಸೂರ್ಯಗ್ರಹಣವು ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮಂಗಳವಾರ ಸಂಭವಿಸಿದೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾದವು. ಈ ಬಾರಿಯ ಸೂರ್ಯಗ್ರಹಣವು ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಗೋಚರಿಸಿದ್ದು ವಿಶೇಷವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10% ದಷ್ಟು ಮಾತ್ರ ಸೂರ್ಯಗ್ರಹಣ ಗೋಚರಿಸಲಿದೆ ಎಂದು ತಜ್ಞರು ತಿಳಿಸಿದ್ದರು. ಅದೇ ರೀತಿ ಸಂಜೆ 5:12 ರಿಂದ ಪ್ರಾರಂಭವಾದ ಗ್ರಹಣ 5:55 ರವರೆಗೆ, ಸುಮಾರು 45 ನಿಮಿಷಗಳ ಕಾಲ ಗೋಚರಿಸಿದೆ. ಬೆಂಗಳೂರಿನಲ್ಲಿ ಸಂಜೆ 5:56 ಕ್ಕೆ ಸೂರ್ಯ ಅಸ್ತಮಿಸುವುದರಿಂದ ಗ್ರಹಣ ವೀಕ್ಷಣೆಗೆ ಸ್ವಲ್ಪ ಸಮಯವಷ್ಟೆ ಸಿಕ್ಕಿದ್ದು ಆಸಕ್ತರಿಗೆ ನಿರಾಸೆ ಕೂಡಾ ಮೂಡಿಸಿದೆ. 1995 ರಲ್ಲಿ ಸಂಭವಿಸಿದ ಸೂರ್ಯಗ್ರಹಣ ಕೂಡಾ ದೀಪಾವಳಿಯ ದಿನದಂದೆ ಗೋಚರಿಸಿತ್ತು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ, ಸೂರ್ಯಗ್ರಹಣದ ಹೆಸರಿನಲ್ಲಿ ಮೂಡನಂಬಿಕೆ ಬಿತ್ತುವುದನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ವಿಜ್ಞಾನದ ಕಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ಕೂಡಾ ಜನಪರ ಸಂಘಟನೆಗಳು ಆಯೋಜಿಸಿದ್ದವು. ಈ ವೇಳೆ ಅಲ್ಲಿ ಸೇರಿದ್ದ ಜನರು ಆಹಾರವನ್ನು ಸೇವಿಸಿ ಮೂಡನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದರು.

ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಸುಮಾರು 55% ರಷ್ಟು ಸೂರ್ಯಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸಿದೆ. ಲೇಹ್‌ನಲ್ಲಿ 55%, ದೆಹಲಿಯಲ್ಲಿ 44%, ಮುಂಬೈನಲ್ಲಿ 25%, ಹೈದರಾಬಾದ್‌ನಲ್ಲಿ 19% ಮತ್ತು ಕಲ್ಕತ್ತಾದಲ್ಲಿ 4% ರಷ್ಟು ಗೋಚರಿಸಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣ ಗೋಚರಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ರಷ್ಯಾ ಮತ್ತು ಕಜಕಿಸ್ತಾನ್‌ನಲ್ಲಿ 80% ದಷ್ಟು ಗ್ರಹಣ ಗೋಚರಿಸಲಿದ್ದು, ಇದು ಗರಿಷ್ಠ ಪ್ರಮಾಣವಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದರು.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಗೋಚರಿಸಿದ ಭಾಗಶಃ ಸೂರ್ಯ ಗ್ರಹಣದ ಕೆಲವು ಝಲಕ್‌ಗಳು ಇಲ್ಲಿವೆ.

ಖ್ಯಾತ ಫೋಟೋಗ್ರಾಫರ್‌ ಮನೋಜ್ ಬೂಕನಕೆರೆ ಅವರು ಕ್ಲಿಕ್ ಮಾಡಿರುವ ಮೈಸೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಶಿಕ್ಷಕರಾದ ಉದಯ್ ಅವರು ಕ್ಲಿಕ್ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಪತ್ರಕರ್ತ ಎಸ್‌. ಶ್ಯಾಮ್ ಪ್ರಸಾದ್ ಅವರು ಬೆಂಗಳೂರಿನಲ್ಲಿ ರೆಕಾರ್ಡ್ ಮಾಡಿರುವ ಸೂರ್ಯಗ್ರಹಣದ ದೃಶ್ಯ.

ಮಂಗಳೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ ಹೀಗಿತ್ತು.

ತಮಿಳುನಾಡಿನ ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಆಂಧ್ರಪ್ರದೇಶದ ವಿಶಾಕಪಟ್ಟಣಂ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಂಡುಬಂದ ಸೂರ್ಯಗ್ರಹಣ

ಜಮ್ಮುಕಾಶ್ಮೀರದ ಲಡಾಖ್‌ನಲ್ಲಿ ಗೋಚರಿಸಿದ ಸೂರ್ಯಗ್ರಹಣ

ಬೆಂಗಳೂರು

ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಬಿಹಾರದಲ್ಲಿ ಕಂಡ ಸೂರ್ಯಗ್ರಹಣ

ಮುಂಬೈನಲ್ಲಿ ಗೋಚರಿಸಿದ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....