Homeಮುಖಪುಟಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

ಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

- Advertisement -
- Advertisement -

ಸೂರ್ಯಗ್ರಹಣವು ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮಂಗಳವಾರ ಸಂಭವಿಸಿದೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾದವು. ಈ ಬಾರಿಯ ಸೂರ್ಯಗ್ರಹಣವು ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಗೋಚರಿಸಿದ್ದು ವಿಶೇಷವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10% ದಷ್ಟು ಮಾತ್ರ ಸೂರ್ಯಗ್ರಹಣ ಗೋಚರಿಸಲಿದೆ ಎಂದು ತಜ್ಞರು ತಿಳಿಸಿದ್ದರು. ಅದೇ ರೀತಿ ಸಂಜೆ 5:12 ರಿಂದ ಪ್ರಾರಂಭವಾದ ಗ್ರಹಣ 5:55 ರವರೆಗೆ, ಸುಮಾರು 45 ನಿಮಿಷಗಳ ಕಾಲ ಗೋಚರಿಸಿದೆ. ಬೆಂಗಳೂರಿನಲ್ಲಿ ಸಂಜೆ 5:56 ಕ್ಕೆ ಸೂರ್ಯ ಅಸ್ತಮಿಸುವುದರಿಂದ ಗ್ರಹಣ ವೀಕ್ಷಣೆಗೆ ಸ್ವಲ್ಪ ಸಮಯವಷ್ಟೆ ಸಿಕ್ಕಿದ್ದು ಆಸಕ್ತರಿಗೆ ನಿರಾಸೆ ಕೂಡಾ ಮೂಡಿಸಿದೆ. 1995 ರಲ್ಲಿ ಸಂಭವಿಸಿದ ಸೂರ್ಯಗ್ರಹಣ ಕೂಡಾ ದೀಪಾವಳಿಯ ದಿನದಂದೆ ಗೋಚರಿಸಿತ್ತು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ, ಸೂರ್ಯಗ್ರಹಣದ ಹೆಸರಿನಲ್ಲಿ ಮೂಡನಂಬಿಕೆ ಬಿತ್ತುವುದನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ವಿಜ್ಞಾನದ ಕಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ಕೂಡಾ ಜನಪರ ಸಂಘಟನೆಗಳು ಆಯೋಜಿಸಿದ್ದವು. ಈ ವೇಳೆ ಅಲ್ಲಿ ಸೇರಿದ್ದ ಜನರು ಆಹಾರವನ್ನು ಸೇವಿಸಿ ಮೂಡನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದರು.

ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಸುಮಾರು 55% ರಷ್ಟು ಸೂರ್ಯಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸಿದೆ. ಲೇಹ್‌ನಲ್ಲಿ 55%, ದೆಹಲಿಯಲ್ಲಿ 44%, ಮುಂಬೈನಲ್ಲಿ 25%, ಹೈದರಾಬಾದ್‌ನಲ್ಲಿ 19% ಮತ್ತು ಕಲ್ಕತ್ತಾದಲ್ಲಿ 4% ರಷ್ಟು ಗೋಚರಿಸಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣ ಗೋಚರಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ರಷ್ಯಾ ಮತ್ತು ಕಜಕಿಸ್ತಾನ್‌ನಲ್ಲಿ 80% ದಷ್ಟು ಗ್ರಹಣ ಗೋಚರಿಸಲಿದ್ದು, ಇದು ಗರಿಷ್ಠ ಪ್ರಮಾಣವಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದರು.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಗೋಚರಿಸಿದ ಭಾಗಶಃ ಸೂರ್ಯ ಗ್ರಹಣದ ಕೆಲವು ಝಲಕ್‌ಗಳು ಇಲ್ಲಿವೆ.

ಖ್ಯಾತ ಫೋಟೋಗ್ರಾಫರ್‌ ಮನೋಜ್ ಬೂಕನಕೆರೆ ಅವರು ಕ್ಲಿಕ್ ಮಾಡಿರುವ ಮೈಸೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಶಿಕ್ಷಕರಾದ ಉದಯ್ ಅವರು ಕ್ಲಿಕ್ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಪತ್ರಕರ್ತ ಎಸ್‌. ಶ್ಯಾಮ್ ಪ್ರಸಾದ್ ಅವರು ಬೆಂಗಳೂರಿನಲ್ಲಿ ರೆಕಾರ್ಡ್ ಮಾಡಿರುವ ಸೂರ್ಯಗ್ರಹಣದ ದೃಶ್ಯ.

ಮಂಗಳೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ ಹೀಗಿತ್ತು.

ತಮಿಳುನಾಡಿನ ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಆಂಧ್ರಪ್ರದೇಶದ ವಿಶಾಕಪಟ್ಟಣಂ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಂಡುಬಂದ ಸೂರ್ಯಗ್ರಹಣ

ಜಮ್ಮುಕಾಶ್ಮೀರದ ಲಡಾಖ್‌ನಲ್ಲಿ ಗೋಚರಿಸಿದ ಸೂರ್ಯಗ್ರಹಣ

ಬೆಂಗಳೂರು

ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಬಿಹಾರದಲ್ಲಿ ಕಂಡ ಸೂರ್ಯಗ್ರಹಣ

ಮುಂಬೈನಲ್ಲಿ ಗೋಚರಿಸಿದ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...