Homeಮುಖಪುಟಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

ಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

- Advertisement -
- Advertisement -

ಸೂರ್ಯಗ್ರಹಣವು ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮಂಗಳವಾರ ಸಂಭವಿಸಿದೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾದವು. ಈ ಬಾರಿಯ ಸೂರ್ಯಗ್ರಹಣವು ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಗೋಚರಿಸಿದ್ದು ವಿಶೇಷವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10% ದಷ್ಟು ಮಾತ್ರ ಸೂರ್ಯಗ್ರಹಣ ಗೋಚರಿಸಲಿದೆ ಎಂದು ತಜ್ಞರು ತಿಳಿಸಿದ್ದರು. ಅದೇ ರೀತಿ ಸಂಜೆ 5:12 ರಿಂದ ಪ್ರಾರಂಭವಾದ ಗ್ರಹಣ 5:55 ರವರೆಗೆ, ಸುಮಾರು 45 ನಿಮಿಷಗಳ ಕಾಲ ಗೋಚರಿಸಿದೆ. ಬೆಂಗಳೂರಿನಲ್ಲಿ ಸಂಜೆ 5:56 ಕ್ಕೆ ಸೂರ್ಯ ಅಸ್ತಮಿಸುವುದರಿಂದ ಗ್ರಹಣ ವೀಕ್ಷಣೆಗೆ ಸ್ವಲ್ಪ ಸಮಯವಷ್ಟೆ ಸಿಕ್ಕಿದ್ದು ಆಸಕ್ತರಿಗೆ ನಿರಾಸೆ ಕೂಡಾ ಮೂಡಿಸಿದೆ. 1995 ರಲ್ಲಿ ಸಂಭವಿಸಿದ ಸೂರ್ಯಗ್ರಹಣ ಕೂಡಾ ದೀಪಾವಳಿಯ ದಿನದಂದೆ ಗೋಚರಿಸಿತ್ತು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ, ಸೂರ್ಯಗ್ರಹಣದ ಹೆಸರಿನಲ್ಲಿ ಮೂಡನಂಬಿಕೆ ಬಿತ್ತುವುದನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ವಿಜ್ಞಾನದ ಕಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ಕೂಡಾ ಜನಪರ ಸಂಘಟನೆಗಳು ಆಯೋಜಿಸಿದ್ದವು. ಈ ವೇಳೆ ಅಲ್ಲಿ ಸೇರಿದ್ದ ಜನರು ಆಹಾರವನ್ನು ಸೇವಿಸಿ ಮೂಡನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದರು.

ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಸುಮಾರು 55% ರಷ್ಟು ಸೂರ್ಯಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸಿದೆ. ಲೇಹ್‌ನಲ್ಲಿ 55%, ದೆಹಲಿಯಲ್ಲಿ 44%, ಮುಂಬೈನಲ್ಲಿ 25%, ಹೈದರಾಬಾದ್‌ನಲ್ಲಿ 19% ಮತ್ತು ಕಲ್ಕತ್ತಾದಲ್ಲಿ 4% ರಷ್ಟು ಗೋಚರಿಸಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣ ಗೋಚರಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ರಷ್ಯಾ ಮತ್ತು ಕಜಕಿಸ್ತಾನ್‌ನಲ್ಲಿ 80% ದಷ್ಟು ಗ್ರಹಣ ಗೋಚರಿಸಲಿದ್ದು, ಇದು ಗರಿಷ್ಠ ಪ್ರಮಾಣವಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದರು.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಗೋಚರಿಸಿದ ಭಾಗಶಃ ಸೂರ್ಯ ಗ್ರಹಣದ ಕೆಲವು ಝಲಕ್‌ಗಳು ಇಲ್ಲಿವೆ.

ಖ್ಯಾತ ಫೋಟೋಗ್ರಾಫರ್‌ ಮನೋಜ್ ಬೂಕನಕೆರೆ ಅವರು ಕ್ಲಿಕ್ ಮಾಡಿರುವ ಮೈಸೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಶಿಕ್ಷಕರಾದ ಉದಯ್ ಅವರು ಕ್ಲಿಕ್ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಪತ್ರಕರ್ತ ಎಸ್‌. ಶ್ಯಾಮ್ ಪ್ರಸಾದ್ ಅವರು ಬೆಂಗಳೂರಿನಲ್ಲಿ ರೆಕಾರ್ಡ್ ಮಾಡಿರುವ ಸೂರ್ಯಗ್ರಹಣದ ದೃಶ್ಯ.

ಮಂಗಳೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ ಹೀಗಿತ್ತು.

ತಮಿಳುನಾಡಿನ ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಆಂಧ್ರಪ್ರದೇಶದ ವಿಶಾಕಪಟ್ಟಣಂ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಂಡುಬಂದ ಸೂರ್ಯಗ್ರಹಣ

ಜಮ್ಮುಕಾಶ್ಮೀರದ ಲಡಾಖ್‌ನಲ್ಲಿ ಗೋಚರಿಸಿದ ಸೂರ್ಯಗ್ರಹಣ

ಬೆಂಗಳೂರು

ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಬಿಹಾರದಲ್ಲಿ ಕಂಡ ಸೂರ್ಯಗ್ರಹಣ

ಮುಂಬೈನಲ್ಲಿ ಗೋಚರಿಸಿದ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...