Homeಮುಖಪುಟಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

ಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

- Advertisement -
- Advertisement -

ಸೂರ್ಯಗ್ರಹಣವು ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮಂಗಳವಾರ ಸಂಭವಿಸಿದೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾದವು. ಈ ಬಾರಿಯ ಸೂರ್ಯಗ್ರಹಣವು ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಗೋಚರಿಸಿದ್ದು ವಿಶೇಷವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10% ದಷ್ಟು ಮಾತ್ರ ಸೂರ್ಯಗ್ರಹಣ ಗೋಚರಿಸಲಿದೆ ಎಂದು ತಜ್ಞರು ತಿಳಿಸಿದ್ದರು. ಅದೇ ರೀತಿ ಸಂಜೆ 5:12 ರಿಂದ ಪ್ರಾರಂಭವಾದ ಗ್ರಹಣ 5:55 ರವರೆಗೆ, ಸುಮಾರು 45 ನಿಮಿಷಗಳ ಕಾಲ ಗೋಚರಿಸಿದೆ. ಬೆಂಗಳೂರಿನಲ್ಲಿ ಸಂಜೆ 5:56 ಕ್ಕೆ ಸೂರ್ಯ ಅಸ್ತಮಿಸುವುದರಿಂದ ಗ್ರಹಣ ವೀಕ್ಷಣೆಗೆ ಸ್ವಲ್ಪ ಸಮಯವಷ್ಟೆ ಸಿಕ್ಕಿದ್ದು ಆಸಕ್ತರಿಗೆ ನಿರಾಸೆ ಕೂಡಾ ಮೂಡಿಸಿದೆ. 1995 ರಲ್ಲಿ ಸಂಭವಿಸಿದ ಸೂರ್ಯಗ್ರಹಣ ಕೂಡಾ ದೀಪಾವಳಿಯ ದಿನದಂದೆ ಗೋಚರಿಸಿತ್ತು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ, ಸೂರ್ಯಗ್ರಹಣದ ಹೆಸರಿನಲ್ಲಿ ಮೂಡನಂಬಿಕೆ ಬಿತ್ತುವುದನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ವಿಜ್ಞಾನದ ಕಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ಕೂಡಾ ಜನಪರ ಸಂಘಟನೆಗಳು ಆಯೋಜಿಸಿದ್ದವು. ಈ ವೇಳೆ ಅಲ್ಲಿ ಸೇರಿದ್ದ ಜನರು ಆಹಾರವನ್ನು ಸೇವಿಸಿ ಮೂಡನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದರು.

ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಸುಮಾರು 55% ರಷ್ಟು ಸೂರ್ಯಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸಿದೆ. ಲೇಹ್‌ನಲ್ಲಿ 55%, ದೆಹಲಿಯಲ್ಲಿ 44%, ಮುಂಬೈನಲ್ಲಿ 25%, ಹೈದರಾಬಾದ್‌ನಲ್ಲಿ 19% ಮತ್ತು ಕಲ್ಕತ್ತಾದಲ್ಲಿ 4% ರಷ್ಟು ಗೋಚರಿಸಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣ ಗೋಚರಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ರಷ್ಯಾ ಮತ್ತು ಕಜಕಿಸ್ತಾನ್‌ನಲ್ಲಿ 80% ದಷ್ಟು ಗ್ರಹಣ ಗೋಚರಿಸಲಿದ್ದು, ಇದು ಗರಿಷ್ಠ ಪ್ರಮಾಣವಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದರು.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಗೋಚರಿಸಿದ ಭಾಗಶಃ ಸೂರ್ಯ ಗ್ರಹಣದ ಕೆಲವು ಝಲಕ್‌ಗಳು ಇಲ್ಲಿವೆ.

ಖ್ಯಾತ ಫೋಟೋಗ್ರಾಫರ್‌ ಮನೋಜ್ ಬೂಕನಕೆರೆ ಅವರು ಕ್ಲಿಕ್ ಮಾಡಿರುವ ಮೈಸೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಶಿಕ್ಷಕರಾದ ಉದಯ್ ಅವರು ಕ್ಲಿಕ್ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಪತ್ರಕರ್ತ ಎಸ್‌. ಶ್ಯಾಮ್ ಪ್ರಸಾದ್ ಅವರು ಬೆಂಗಳೂರಿನಲ್ಲಿ ರೆಕಾರ್ಡ್ ಮಾಡಿರುವ ಸೂರ್ಯಗ್ರಹಣದ ದೃಶ್ಯ.

ಮಂಗಳೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ ಹೀಗಿತ್ತು.

ತಮಿಳುನಾಡಿನ ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಆಂಧ್ರಪ್ರದೇಶದ ವಿಶಾಕಪಟ್ಟಣಂ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಂಡುಬಂದ ಸೂರ್ಯಗ್ರಹಣ

ಜಮ್ಮುಕಾಶ್ಮೀರದ ಲಡಾಖ್‌ನಲ್ಲಿ ಗೋಚರಿಸಿದ ಸೂರ್ಯಗ್ರಹಣ

ಬೆಂಗಳೂರು

ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಬಿಹಾರದಲ್ಲಿ ಕಂಡ ಸೂರ್ಯಗ್ರಹಣ

ಮುಂಬೈನಲ್ಲಿ ಗೋಚರಿಸಿದ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...