Homeಮುಖಪುಟಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

ಸೂರ್ಯಗ್ರಹಣ: ರಾಜ್ಯದ ಹಲವು ಜಿಲ್ಲೆ ಸೇರಿದಂತೆ ಭಾರತದಾದ್ಯಂತ ಹೀಗಿತ್ತು ನೋಡಿ!

- Advertisement -
- Advertisement -

ಸೂರ್ಯಗ್ರಹಣವು ಭಾರತ ಸೇರಿದಂತೆ ವಿಶ್ವದ ಇತರ ಕೆಲವು ಭಾಗಗಳಲ್ಲಿ ಮಂಗಳವಾರ ಸಂಭವಿಸಿದೆ. ಈಶಾನ್ಯ ಪ್ರದೇಶದ ಕೆಲವು ಭಾಗಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳು ಗ್ರಹಣಕ್ಕೆ ಸಾಕ್ಷಿಯಾದವು. ಈ ಬಾರಿಯ ಸೂರ್ಯಗ್ರಹಣವು ಭಾರತದ ಬಹುತೇಕ ಎಲ್ಲ ಭಾಗಗಳಲ್ಲೂ ಗೋಚರಿಸಿದ್ದು ವಿಶೇಷವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10% ದಷ್ಟು ಮಾತ್ರ ಸೂರ್ಯಗ್ರಹಣ ಗೋಚರಿಸಲಿದೆ ಎಂದು ತಜ್ಞರು ತಿಳಿಸಿದ್ದರು. ಅದೇ ರೀತಿ ಸಂಜೆ 5:12 ರಿಂದ ಪ್ರಾರಂಭವಾದ ಗ್ರಹಣ 5:55 ರವರೆಗೆ, ಸುಮಾರು 45 ನಿಮಿಷಗಳ ಕಾಲ ಗೋಚರಿಸಿದೆ. ಬೆಂಗಳೂರಿನಲ್ಲಿ ಸಂಜೆ 5:56 ಕ್ಕೆ ಸೂರ್ಯ ಅಸ್ತಮಿಸುವುದರಿಂದ ಗ್ರಹಣ ವೀಕ್ಷಣೆಗೆ ಸ್ವಲ್ಪ ಸಮಯವಷ್ಟೆ ಸಿಕ್ಕಿದ್ದು ಆಸಕ್ತರಿಗೆ ನಿರಾಸೆ ಕೂಡಾ ಮೂಡಿಸಿದೆ. 1995 ರಲ್ಲಿ ಸಂಭವಿಸಿದ ಸೂರ್ಯಗ್ರಹಣ ಕೂಡಾ ದೀಪಾವಳಿಯ ದಿನದಂದೆ ಗೋಚರಿಸಿತ್ತು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ, ಸೂರ್ಯಗ್ರಹಣದ ಹೆಸರಿನಲ್ಲಿ ಮೂಡನಂಬಿಕೆ ಬಿತ್ತುವುದನ್ನು ವಿರೋಧಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ವಿಜ್ಞಾನದ ಕಡೆಗೆ ನಮ್ಮ ನಡಿಗೆ’ ಕಾರ್ಯಕ್ರಮ ಕೂಡಾ ಜನಪರ ಸಂಘಟನೆಗಳು ಆಯೋಜಿಸಿದ್ದವು. ಈ ವೇಳೆ ಅಲ್ಲಿ ಸೇರಿದ್ದ ಜನರು ಆಹಾರವನ್ನು ಸೇವಿಸಿ ಮೂಡನಂಬಿಕೆ ವಿರುದ್ಧ ಜಾಗೃತಿ ಮೂಡಿಸಿದರು.

ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಸುಮಾರು 55% ರಷ್ಟು ಸೂರ್ಯಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸಿದೆ. ಲೇಹ್‌ನಲ್ಲಿ 55%, ದೆಹಲಿಯಲ್ಲಿ 44%, ಮುಂಬೈನಲ್ಲಿ 25%, ಹೈದರಾಬಾದ್‌ನಲ್ಲಿ 19% ಮತ್ತು ಕಲ್ಕತ್ತಾದಲ್ಲಿ 4% ರಷ್ಟು ಗೋಚರಿಸಿದೆ. ಗುಜರಾತ್‌ನ ದ್ವಾರಕಾದಲ್ಲಿ ದೀರ್ಘ‌ಕಾಲ ಅಂದರೆ 1 ಗಂಟೆ 45 ನಿಮಿಷಗಳ ಕಾಲ ಗ್ರಹಣ ಗೋಚರಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ರಷ್ಯಾ ಮತ್ತು ಕಜಕಿಸ್ತಾನ್‌ನಲ್ಲಿ 80% ದಷ್ಟು ಗ್ರಹಣ ಗೋಚರಿಸಲಿದ್ದು, ಇದು ಗರಿಷ್ಠ ಪ್ರಮಾಣವಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದರು.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಗೋಚರಿಸಿದ ಭಾಗಶಃ ಸೂರ್ಯ ಗ್ರಹಣದ ಕೆಲವು ಝಲಕ್‌ಗಳು ಇಲ್ಲಿವೆ.

ಖ್ಯಾತ ಫೋಟೋಗ್ರಾಫರ್‌ ಮನೋಜ್ ಬೂಕನಕೆರೆ ಅವರು ಕ್ಲಿಕ್ ಮಾಡಿರುವ ಮೈಸೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಶಿಕ್ಷಕರಾದ ಉದಯ್ ಅವರು ಕ್ಲಿಕ್ ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗೋಚರಿಸಿದ ಸೂರ್ಯಗ್ರಹಣ.

ಪತ್ರಕರ್ತ ಎಸ್‌. ಶ್ಯಾಮ್ ಪ್ರಸಾದ್ ಅವರು ಬೆಂಗಳೂರಿನಲ್ಲಿ ರೆಕಾರ್ಡ್ ಮಾಡಿರುವ ಸೂರ್ಯಗ್ರಹಣದ ದೃಶ್ಯ.

ಮಂಗಳೂರಿನಲ್ಲಿ ಗೋಚರಿಸಿದ ಸೂರ್ಯಗ್ರಹಣ ಹೀಗಿತ್ತು.

ತಮಿಳುನಾಡಿನ ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಆಂಧ್ರಪ್ರದೇಶದ ವಿಶಾಕಪಟ್ಟಣಂ

ಮಧ್ಯಪ್ರದೇಶದ ಭೂಪಾಲ್‌ನಲ್ಲಿ ಕಂಡುಬಂದ ಸೂರ್ಯಗ್ರಹಣ

ಜಮ್ಮುಕಾಶ್ಮೀರದ ಲಡಾಖ್‌ನಲ್ಲಿ ಗೋಚರಿಸಿದ ಸೂರ್ಯಗ್ರಹಣ

ಬೆಂಗಳೂರು

ಚೆನ್ನೈನಲ್ಲಿ ಕಂಡ ಸೂರ್ಯಗ್ರಹಣ

ಬಿಹಾರದಲ್ಲಿ ಕಂಡ ಸೂರ್ಯಗ್ರಹಣ

ಮುಂಬೈನಲ್ಲಿ ಗೋಚರಿಸಿದ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...