Homeಕರ್ನಾಟಕಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

ಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

- Advertisement -
- Advertisement -

ಜ್ಯೋತಿಷ್ಯವ್ಯಾದಿಗಳ ಅರಚುವಿಕೆಯ ನಡುವೆಯೂ ಮನೆಯಿಂದ ಹೊರಬಂದ ಸಾವಿರಾರು ಮಂದಿ ಜನರು ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನ ಆಟವನ್ನು ವೀಕ್ಷಿಸಿ ಆನಂದಪಟ್ಟರು. ತುಮಕೂರಿನ ಬಹುತೇಕ ಭಾಗಗಳಲ್ಲಿ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು. ಮಕ್ಕಳು, ವಿದ್ಯಾರ್ಥಿಗಳು, ಪೊಲೀಸರು, ಪೌರಕಾರ್ಮಿಕರು, ಆಟೋಚಾಲಕರು, ವೃದ್ಧರು ಹೀಗೆ ಎಲ್ಲಾ ಜನವಿಭಾಗದವರು ಕಂಕಣ ಸೂರ್ಯಗ್ರಹಣ ವೀಕ್ಷಿಸಿ ಪುರಿ, ತಿಂಡಿ ತಿಂದು ಕಾಫಿ ಕುಡಿದು ಮೌಢ್ಯದಿಂದ ಹೊರಬರುವಂತೆ ಎಲ್ಲರಿಗೂ ಮನವಿ ಮಾಡಿದರು.

ಬ್ರಾಹ್ಮಣರು ವಾಸಿಸುವ ಚಿಕ್ಕಪೇಟೆ, ಸೋಮೇಶ್ವರ ಹೀಗೆ ಹಲವು ಭಾಗಗಳಲ್ಲಿ ಜನ ಮನೆಯಿಂದಲೂ ಹೊರಗೆ ಬರಲು ಹೆದರಿಕೊಂಡಂತೆ ಕಂಡುಬಂತು. ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸನಾತನವಾದಿಗಳು ಗ್ರಹಣ ಬಿಡುವವರೆಗೂ ಏನೂ ತಿನ್ನದೆ ಮೌಢ್ಯವನ್ನು ಆಚರಿಸಿದರು. ಗ್ರಹಣ ಬಿಟ್ಟಮೇಲೆ ಸ್ನಾನ ಮಾಡಿದರು. ಆದರೆ ವಿಜ್ಞಾನ ಕೇಂದ್ರದ ಪದಾಧಿಕಾರಿಗಳನ್ನು ಇಂತಹ ಮೌಢ್ಯದಿಂದ ಹೊರಬರುವಂತೆ ಮನವಿ ಮಾಡಿಕೊಂಡರು. ಹೀಗಾಗಿ ಕೆಲಮಟ್ಟಿಗೆ ಜನರು ಸುರಕ್ಷಿತ ಸಾಧನಗಳಿಂದ ಸೂರ್ಯಗ್ರಹಣ ವೀಕ್ಷಿಸಿದರು. ಪದಾಧಿಕಾರಿಗಳು ಕೂಡ ಸೂರ್ಯಗ್ರಹಣ ವೀಕ್ಷಿಸುವುದರಿಂದ ಯಾವುದೇ ಅಪಾಯವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿದರು.

ವಿಜ್ಞಾನ ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಗಳ ಮೂಲಕ ಕಂಕಣ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಿದ್ದರು. ಹಿರೀಮಠದ ಡಾ.ಶಿವಾನಂದಶಿವಾಚಾರ್ಯ ಸ್ವಾಮಿ, ಮಹಿಳಾ ಪೊಲೀಸ್ ಅಧಿಕಾರಿಗಳು ಬಂದು ಸೂರ್ಯಗ್ರಹಣ ವೀಕ್ಷಿಸಿದರು.  ವಿಜ್ಞಾನ ಕೇಂದ್ರದ ಸಿ.ವಿಶ್ವನಾಥ್, ಸಿ.ಯತಿರಾಜ್, ಮಾಮ ರವಿ, ನಿತ್ಯಾನಂದ, ಸಾರ್ವಜನಿಕರಿಗೆ ವೈಚಾರಿಕ, ವೈಜ್ಞಾನಿಕವಾಗಿ ಸೂರ್ಯಗ್ರಹಣದ ಬಗ್ಗೆ ವಿವರಿಸಿ ಹೇಳಿದರು. ಪರಿಸರವಾದಿ ಸಿ.ಯತಿರಾಜು ಮಾತನಾಡಿ ಕೆಲವರು ಟಿವಿಗಳಲ್ಲಿ ಕುಳಿತು ಜನರಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಜನರು ಹೊರಬಂದು ಸೂರ್ಯಗ್ರಹಣ ವೀಕ್ಷಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಸೈಯದ್ ಮುಜೀಬ್ ಅವರು ಸೋಲಾರ್ ಫಿಲ್ಟರ್ ಗಳನ್ನು ಹಿಡಿದರು. ಆಟೋ ರಿಕ್ಷಾ ಚಾಲಕರು, ವೃದ್ದೆಯರು, ಪೌರಕಾರ್ಮಿಕರು, ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಿಸಲು ಮತ್ತು ವೈಜ್ಞಾನಿಕತೆಯನ್ನು ಹರಡಲು ಅವಕಾಶ ಮಾಡಿಕೊಟ್ಟರು. ರಾಮಾಜೋಯಿಸ್ ನಗರದಲ್ಲಿ ಆನಂದ್ ಅವರು ಮಕ್ಕಳಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ ಅಕ್ಕಮ್ಮ ಎಲ್ಲಾ ಸಾವಿರ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ವೀಕ್ಷಿಸಲು ಅನುಕೂಲ ಮಾಡಿಕೊಟ್ಟರು.

ಇಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಂಡಿತು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಂಡಿತು. ಮತ್ತೊಮ್ಮೆ ಇಂತಹ ಗ್ರಹಣ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ರವಿಶಂಕರ್ ತಿಳಿಸಿದರು.

ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಾಹನಗಳ ಓಡಾಟ ವಿರಳವಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಗಿನ ಚಹ, ಕಾಫಿ ಹೀರಲು ತುಂಬಿರುತ್ತಿದ್ದ ಹೋಟೆಲ್, ಕೆಫೆಗಳು ಖಾಲಿ ಖಾಲಿ ಇದ್ದುದು ಕಂಡು ಬಂತು. ಟಿವಿಯಲ್ಲಿ ಕುಳಿತ ಜ್ಯೋತಿಷಗಳು ಬ್ರಹ್ಮಾಂಡ ಮೌಢ್ಯ ಬಿತ್ತುವುದರಲ್ಲಿ ತೊಡಗಿದ್ದರು. ಆದರೆ ಲಕ್ಷಾಂತರವಲ್ಲದಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನ ಮನೆಗಳಿಂದ ಹೊರಬಂದಿದ್ದರು. ವಾಹನಗಳ ಚಾಲಕರು ಗ್ರಹಣವನ್ನು ನಂಬಿರಲಿಲ್ಲ. ಆದರೆ ನಗರವಾಸಿಗಳಲ್ಲೇ ಮೌಢ್ಯ ಹೆಚ್ಚಾಗಿರುವುದಂತು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...