Homeಕರ್ನಾಟಕಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

ಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

- Advertisement -
- Advertisement -

ಜ್ಯೋತಿಷ್ಯವ್ಯಾದಿಗಳ ಅರಚುವಿಕೆಯ ನಡುವೆಯೂ ಮನೆಯಿಂದ ಹೊರಬಂದ ಸಾವಿರಾರು ಮಂದಿ ಜನರು ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನ ಆಟವನ್ನು ವೀಕ್ಷಿಸಿ ಆನಂದಪಟ್ಟರು. ತುಮಕೂರಿನ ಬಹುತೇಕ ಭಾಗಗಳಲ್ಲಿ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು. ಮಕ್ಕಳು, ವಿದ್ಯಾರ್ಥಿಗಳು, ಪೊಲೀಸರು, ಪೌರಕಾರ್ಮಿಕರು, ಆಟೋಚಾಲಕರು, ವೃದ್ಧರು ಹೀಗೆ ಎಲ್ಲಾ ಜನವಿಭಾಗದವರು ಕಂಕಣ ಸೂರ್ಯಗ್ರಹಣ ವೀಕ್ಷಿಸಿ ಪುರಿ, ತಿಂಡಿ ತಿಂದು ಕಾಫಿ ಕುಡಿದು ಮೌಢ್ಯದಿಂದ ಹೊರಬರುವಂತೆ ಎಲ್ಲರಿಗೂ ಮನವಿ ಮಾಡಿದರು.

ಬ್ರಾಹ್ಮಣರು ವಾಸಿಸುವ ಚಿಕ್ಕಪೇಟೆ, ಸೋಮೇಶ್ವರ ಹೀಗೆ ಹಲವು ಭಾಗಗಳಲ್ಲಿ ಜನ ಮನೆಯಿಂದಲೂ ಹೊರಗೆ ಬರಲು ಹೆದರಿಕೊಂಡಂತೆ ಕಂಡುಬಂತು. ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸನಾತನವಾದಿಗಳು ಗ್ರಹಣ ಬಿಡುವವರೆಗೂ ಏನೂ ತಿನ್ನದೆ ಮೌಢ್ಯವನ್ನು ಆಚರಿಸಿದರು. ಗ್ರಹಣ ಬಿಟ್ಟಮೇಲೆ ಸ್ನಾನ ಮಾಡಿದರು. ಆದರೆ ವಿಜ್ಞಾನ ಕೇಂದ್ರದ ಪದಾಧಿಕಾರಿಗಳನ್ನು ಇಂತಹ ಮೌಢ್ಯದಿಂದ ಹೊರಬರುವಂತೆ ಮನವಿ ಮಾಡಿಕೊಂಡರು. ಹೀಗಾಗಿ ಕೆಲಮಟ್ಟಿಗೆ ಜನರು ಸುರಕ್ಷಿತ ಸಾಧನಗಳಿಂದ ಸೂರ್ಯಗ್ರಹಣ ವೀಕ್ಷಿಸಿದರು. ಪದಾಧಿಕಾರಿಗಳು ಕೂಡ ಸೂರ್ಯಗ್ರಹಣ ವೀಕ್ಷಿಸುವುದರಿಂದ ಯಾವುದೇ ಅಪಾಯವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿದರು.

ವಿಜ್ಞಾನ ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಗಳ ಮೂಲಕ ಕಂಕಣ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಿದ್ದರು. ಹಿರೀಮಠದ ಡಾ.ಶಿವಾನಂದಶಿವಾಚಾರ್ಯ ಸ್ವಾಮಿ, ಮಹಿಳಾ ಪೊಲೀಸ್ ಅಧಿಕಾರಿಗಳು ಬಂದು ಸೂರ್ಯಗ್ರಹಣ ವೀಕ್ಷಿಸಿದರು.  ವಿಜ್ಞಾನ ಕೇಂದ್ರದ ಸಿ.ವಿಶ್ವನಾಥ್, ಸಿ.ಯತಿರಾಜ್, ಮಾಮ ರವಿ, ನಿತ್ಯಾನಂದ, ಸಾರ್ವಜನಿಕರಿಗೆ ವೈಚಾರಿಕ, ವೈಜ್ಞಾನಿಕವಾಗಿ ಸೂರ್ಯಗ್ರಹಣದ ಬಗ್ಗೆ ವಿವರಿಸಿ ಹೇಳಿದರು. ಪರಿಸರವಾದಿ ಸಿ.ಯತಿರಾಜು ಮಾತನಾಡಿ ಕೆಲವರು ಟಿವಿಗಳಲ್ಲಿ ಕುಳಿತು ಜನರಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಜನರು ಹೊರಬಂದು ಸೂರ್ಯಗ್ರಹಣ ವೀಕ್ಷಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಸೈಯದ್ ಮುಜೀಬ್ ಅವರು ಸೋಲಾರ್ ಫಿಲ್ಟರ್ ಗಳನ್ನು ಹಿಡಿದರು. ಆಟೋ ರಿಕ್ಷಾ ಚಾಲಕರು, ವೃದ್ದೆಯರು, ಪೌರಕಾರ್ಮಿಕರು, ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಿಸಲು ಮತ್ತು ವೈಜ್ಞಾನಿಕತೆಯನ್ನು ಹರಡಲು ಅವಕಾಶ ಮಾಡಿಕೊಟ್ಟರು. ರಾಮಾಜೋಯಿಸ್ ನಗರದಲ್ಲಿ ಆನಂದ್ ಅವರು ಮಕ್ಕಳಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ ಅಕ್ಕಮ್ಮ ಎಲ್ಲಾ ಸಾವಿರ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ವೀಕ್ಷಿಸಲು ಅನುಕೂಲ ಮಾಡಿಕೊಟ್ಟರು.

ಇಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಂಡಿತು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಂಡಿತು. ಮತ್ತೊಮ್ಮೆ ಇಂತಹ ಗ್ರಹಣ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ರವಿಶಂಕರ್ ತಿಳಿಸಿದರು.

ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಾಹನಗಳ ಓಡಾಟ ವಿರಳವಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಗಿನ ಚಹ, ಕಾಫಿ ಹೀರಲು ತುಂಬಿರುತ್ತಿದ್ದ ಹೋಟೆಲ್, ಕೆಫೆಗಳು ಖಾಲಿ ಖಾಲಿ ಇದ್ದುದು ಕಂಡು ಬಂತು. ಟಿವಿಯಲ್ಲಿ ಕುಳಿತ ಜ್ಯೋತಿಷಗಳು ಬ್ರಹ್ಮಾಂಡ ಮೌಢ್ಯ ಬಿತ್ತುವುದರಲ್ಲಿ ತೊಡಗಿದ್ದರು. ಆದರೆ ಲಕ್ಷಾಂತರವಲ್ಲದಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನ ಮನೆಗಳಿಂದ ಹೊರಬಂದಿದ್ದರು. ವಾಹನಗಳ ಚಾಲಕರು ಗ್ರಹಣವನ್ನು ನಂಬಿರಲಿಲ್ಲ. ಆದರೆ ನಗರವಾಸಿಗಳಲ್ಲೇ ಮೌಢ್ಯ ಹೆಚ್ಚಾಗಿರುವುದಂತು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...