Homeಕರ್ನಾಟಕಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

ಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

- Advertisement -
- Advertisement -

ಜ್ಯೋತಿಷ್ಯವ್ಯಾದಿಗಳ ಅರಚುವಿಕೆಯ ನಡುವೆಯೂ ಮನೆಯಿಂದ ಹೊರಬಂದ ಸಾವಿರಾರು ಮಂದಿ ಜನರು ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನ ಆಟವನ್ನು ವೀಕ್ಷಿಸಿ ಆನಂದಪಟ್ಟರು. ತುಮಕೂರಿನ ಬಹುತೇಕ ಭಾಗಗಳಲ್ಲಿ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು. ಮಕ್ಕಳು, ವಿದ್ಯಾರ್ಥಿಗಳು, ಪೊಲೀಸರು, ಪೌರಕಾರ್ಮಿಕರು, ಆಟೋಚಾಲಕರು, ವೃದ್ಧರು ಹೀಗೆ ಎಲ್ಲಾ ಜನವಿಭಾಗದವರು ಕಂಕಣ ಸೂರ್ಯಗ್ರಹಣ ವೀಕ್ಷಿಸಿ ಪುರಿ, ತಿಂಡಿ ತಿಂದು ಕಾಫಿ ಕುಡಿದು ಮೌಢ್ಯದಿಂದ ಹೊರಬರುವಂತೆ ಎಲ್ಲರಿಗೂ ಮನವಿ ಮಾಡಿದರು.

ಬ್ರಾಹ್ಮಣರು ವಾಸಿಸುವ ಚಿಕ್ಕಪೇಟೆ, ಸೋಮೇಶ್ವರ ಹೀಗೆ ಹಲವು ಭಾಗಗಳಲ್ಲಿ ಜನ ಮನೆಯಿಂದಲೂ ಹೊರಗೆ ಬರಲು ಹೆದರಿಕೊಂಡಂತೆ ಕಂಡುಬಂತು. ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸನಾತನವಾದಿಗಳು ಗ್ರಹಣ ಬಿಡುವವರೆಗೂ ಏನೂ ತಿನ್ನದೆ ಮೌಢ್ಯವನ್ನು ಆಚರಿಸಿದರು. ಗ್ರಹಣ ಬಿಟ್ಟಮೇಲೆ ಸ್ನಾನ ಮಾಡಿದರು. ಆದರೆ ವಿಜ್ಞಾನ ಕೇಂದ್ರದ ಪದಾಧಿಕಾರಿಗಳನ್ನು ಇಂತಹ ಮೌಢ್ಯದಿಂದ ಹೊರಬರುವಂತೆ ಮನವಿ ಮಾಡಿಕೊಂಡರು. ಹೀಗಾಗಿ ಕೆಲಮಟ್ಟಿಗೆ ಜನರು ಸುರಕ್ಷಿತ ಸಾಧನಗಳಿಂದ ಸೂರ್ಯಗ್ರಹಣ ವೀಕ್ಷಿಸಿದರು. ಪದಾಧಿಕಾರಿಗಳು ಕೂಡ ಸೂರ್ಯಗ್ರಹಣ ವೀಕ್ಷಿಸುವುದರಿಂದ ಯಾವುದೇ ಅಪಾಯವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿದರು.

ವಿಜ್ಞಾನ ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಗಳ ಮೂಲಕ ಕಂಕಣ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಿದ್ದರು. ಹಿರೀಮಠದ ಡಾ.ಶಿವಾನಂದಶಿವಾಚಾರ್ಯ ಸ್ವಾಮಿ, ಮಹಿಳಾ ಪೊಲೀಸ್ ಅಧಿಕಾರಿಗಳು ಬಂದು ಸೂರ್ಯಗ್ರಹಣ ವೀಕ್ಷಿಸಿದರು.  ವಿಜ್ಞಾನ ಕೇಂದ್ರದ ಸಿ.ವಿಶ್ವನಾಥ್, ಸಿ.ಯತಿರಾಜ್, ಮಾಮ ರವಿ, ನಿತ್ಯಾನಂದ, ಸಾರ್ವಜನಿಕರಿಗೆ ವೈಚಾರಿಕ, ವೈಜ್ಞಾನಿಕವಾಗಿ ಸೂರ್ಯಗ್ರಹಣದ ಬಗ್ಗೆ ವಿವರಿಸಿ ಹೇಳಿದರು. ಪರಿಸರವಾದಿ ಸಿ.ಯತಿರಾಜು ಮಾತನಾಡಿ ಕೆಲವರು ಟಿವಿಗಳಲ್ಲಿ ಕುಳಿತು ಜನರಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಜನರು ಹೊರಬಂದು ಸೂರ್ಯಗ್ರಹಣ ವೀಕ್ಷಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಸೈಯದ್ ಮುಜೀಬ್ ಅವರು ಸೋಲಾರ್ ಫಿಲ್ಟರ್ ಗಳನ್ನು ಹಿಡಿದರು. ಆಟೋ ರಿಕ್ಷಾ ಚಾಲಕರು, ವೃದ್ದೆಯರು, ಪೌರಕಾರ್ಮಿಕರು, ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಿಸಲು ಮತ್ತು ವೈಜ್ಞಾನಿಕತೆಯನ್ನು ಹರಡಲು ಅವಕಾಶ ಮಾಡಿಕೊಟ್ಟರು. ರಾಮಾಜೋಯಿಸ್ ನಗರದಲ್ಲಿ ಆನಂದ್ ಅವರು ಮಕ್ಕಳಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ ಅಕ್ಕಮ್ಮ ಎಲ್ಲಾ ಸಾವಿರ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ವೀಕ್ಷಿಸಲು ಅನುಕೂಲ ಮಾಡಿಕೊಟ್ಟರು.

ಇಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಂಡಿತು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಂಡಿತು. ಮತ್ತೊಮ್ಮೆ ಇಂತಹ ಗ್ರಹಣ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ರವಿಶಂಕರ್ ತಿಳಿಸಿದರು.

ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಾಹನಗಳ ಓಡಾಟ ವಿರಳವಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಗಿನ ಚಹ, ಕಾಫಿ ಹೀರಲು ತುಂಬಿರುತ್ತಿದ್ದ ಹೋಟೆಲ್, ಕೆಫೆಗಳು ಖಾಲಿ ಖಾಲಿ ಇದ್ದುದು ಕಂಡು ಬಂತು. ಟಿವಿಯಲ್ಲಿ ಕುಳಿತ ಜ್ಯೋತಿಷಗಳು ಬ್ರಹ್ಮಾಂಡ ಮೌಢ್ಯ ಬಿತ್ತುವುದರಲ್ಲಿ ತೊಡಗಿದ್ದರು. ಆದರೆ ಲಕ್ಷಾಂತರವಲ್ಲದಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನ ಮನೆಗಳಿಂದ ಹೊರಬಂದಿದ್ದರು. ವಾಹನಗಳ ಚಾಲಕರು ಗ್ರಹಣವನ್ನು ನಂಬಿರಲಿಲ್ಲ. ಆದರೆ ನಗರವಾಸಿಗಳಲ್ಲೇ ಮೌಢ್ಯ ಹೆಚ್ಚಾಗಿರುವುದಂತು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...