Homeಕರ್ನಾಟಕಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

ಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

- Advertisement -
- Advertisement -

ಜ್ಯೋತಿಷ್ಯವ್ಯಾದಿಗಳ ಅರಚುವಿಕೆಯ ನಡುವೆಯೂ ಮನೆಯಿಂದ ಹೊರಬಂದ ಸಾವಿರಾರು ಮಂದಿ ಜನರು ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನ ಆಟವನ್ನು ವೀಕ್ಷಿಸಿ ಆನಂದಪಟ್ಟರು. ತುಮಕೂರಿನ ಬಹುತೇಕ ಭಾಗಗಳಲ್ಲಿ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು. ಮಕ್ಕಳು, ವಿದ್ಯಾರ್ಥಿಗಳು, ಪೊಲೀಸರು, ಪೌರಕಾರ್ಮಿಕರು, ಆಟೋಚಾಲಕರು, ವೃದ್ಧರು ಹೀಗೆ ಎಲ್ಲಾ ಜನವಿಭಾಗದವರು ಕಂಕಣ ಸೂರ್ಯಗ್ರಹಣ ವೀಕ್ಷಿಸಿ ಪುರಿ, ತಿಂಡಿ ತಿಂದು ಕಾಫಿ ಕುಡಿದು ಮೌಢ್ಯದಿಂದ ಹೊರಬರುವಂತೆ ಎಲ್ಲರಿಗೂ ಮನವಿ ಮಾಡಿದರು.

ಬ್ರಾಹ್ಮಣರು ವಾಸಿಸುವ ಚಿಕ್ಕಪೇಟೆ, ಸೋಮೇಶ್ವರ ಹೀಗೆ ಹಲವು ಭಾಗಗಳಲ್ಲಿ ಜನ ಮನೆಯಿಂದಲೂ ಹೊರಗೆ ಬರಲು ಹೆದರಿಕೊಂಡಂತೆ ಕಂಡುಬಂತು. ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸನಾತನವಾದಿಗಳು ಗ್ರಹಣ ಬಿಡುವವರೆಗೂ ಏನೂ ತಿನ್ನದೆ ಮೌಢ್ಯವನ್ನು ಆಚರಿಸಿದರು. ಗ್ರಹಣ ಬಿಟ್ಟಮೇಲೆ ಸ್ನಾನ ಮಾಡಿದರು. ಆದರೆ ವಿಜ್ಞಾನ ಕೇಂದ್ರದ ಪದಾಧಿಕಾರಿಗಳನ್ನು ಇಂತಹ ಮೌಢ್ಯದಿಂದ ಹೊರಬರುವಂತೆ ಮನವಿ ಮಾಡಿಕೊಂಡರು. ಹೀಗಾಗಿ ಕೆಲಮಟ್ಟಿಗೆ ಜನರು ಸುರಕ್ಷಿತ ಸಾಧನಗಳಿಂದ ಸೂರ್ಯಗ್ರಹಣ ವೀಕ್ಷಿಸಿದರು. ಪದಾಧಿಕಾರಿಗಳು ಕೂಡ ಸೂರ್ಯಗ್ರಹಣ ವೀಕ್ಷಿಸುವುದರಿಂದ ಯಾವುದೇ ಅಪಾಯವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿದರು.

ವಿಜ್ಞಾನ ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಗಳ ಮೂಲಕ ಕಂಕಣ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಿದ್ದರು. ಹಿರೀಮಠದ ಡಾ.ಶಿವಾನಂದಶಿವಾಚಾರ್ಯ ಸ್ವಾಮಿ, ಮಹಿಳಾ ಪೊಲೀಸ್ ಅಧಿಕಾರಿಗಳು ಬಂದು ಸೂರ್ಯಗ್ರಹಣ ವೀಕ್ಷಿಸಿದರು.  ವಿಜ್ಞಾನ ಕೇಂದ್ರದ ಸಿ.ವಿಶ್ವನಾಥ್, ಸಿ.ಯತಿರಾಜ್, ಮಾಮ ರವಿ, ನಿತ್ಯಾನಂದ, ಸಾರ್ವಜನಿಕರಿಗೆ ವೈಚಾರಿಕ, ವೈಜ್ಞಾನಿಕವಾಗಿ ಸೂರ್ಯಗ್ರಹಣದ ಬಗ್ಗೆ ವಿವರಿಸಿ ಹೇಳಿದರು. ಪರಿಸರವಾದಿ ಸಿ.ಯತಿರಾಜು ಮಾತನಾಡಿ ಕೆಲವರು ಟಿವಿಗಳಲ್ಲಿ ಕುಳಿತು ಜನರಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಜನರು ಹೊರಬಂದು ಸೂರ್ಯಗ್ರಹಣ ವೀಕ್ಷಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಸೈಯದ್ ಮುಜೀಬ್ ಅವರು ಸೋಲಾರ್ ಫಿಲ್ಟರ್ ಗಳನ್ನು ಹಿಡಿದರು. ಆಟೋ ರಿಕ್ಷಾ ಚಾಲಕರು, ವೃದ್ದೆಯರು, ಪೌರಕಾರ್ಮಿಕರು, ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಿಸಲು ಮತ್ತು ವೈಜ್ಞಾನಿಕತೆಯನ್ನು ಹರಡಲು ಅವಕಾಶ ಮಾಡಿಕೊಟ್ಟರು. ರಾಮಾಜೋಯಿಸ್ ನಗರದಲ್ಲಿ ಆನಂದ್ ಅವರು ಮಕ್ಕಳಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ ಅಕ್ಕಮ್ಮ ಎಲ್ಲಾ ಸಾವಿರ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ವೀಕ್ಷಿಸಲು ಅನುಕೂಲ ಮಾಡಿಕೊಟ್ಟರು.

ಇಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಂಡಿತು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಂಡಿತು. ಮತ್ತೊಮ್ಮೆ ಇಂತಹ ಗ್ರಹಣ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ರವಿಶಂಕರ್ ತಿಳಿಸಿದರು.

ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಾಹನಗಳ ಓಡಾಟ ವಿರಳವಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಗಿನ ಚಹ, ಕಾಫಿ ಹೀರಲು ತುಂಬಿರುತ್ತಿದ್ದ ಹೋಟೆಲ್, ಕೆಫೆಗಳು ಖಾಲಿ ಖಾಲಿ ಇದ್ದುದು ಕಂಡು ಬಂತು. ಟಿವಿಯಲ್ಲಿ ಕುಳಿತ ಜ್ಯೋತಿಷಗಳು ಬ್ರಹ್ಮಾಂಡ ಮೌಢ್ಯ ಬಿತ್ತುವುದರಲ್ಲಿ ತೊಡಗಿದ್ದರು. ಆದರೆ ಲಕ್ಷಾಂತರವಲ್ಲದಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನ ಮನೆಗಳಿಂದ ಹೊರಬಂದಿದ್ದರು. ವಾಹನಗಳ ಚಾಲಕರು ಗ್ರಹಣವನ್ನು ನಂಬಿರಲಿಲ್ಲ. ಆದರೆ ನಗರವಾಸಿಗಳಲ್ಲೇ ಮೌಢ್ಯ ಹೆಚ್ಚಾಗಿರುವುದಂತು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...