Homeಕರ್ನಾಟಕಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

ಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

- Advertisement -
- Advertisement -

ಜ್ಯೋತಿಷ್ಯವ್ಯಾದಿಗಳ ಅರಚುವಿಕೆಯ ನಡುವೆಯೂ ಮನೆಯಿಂದ ಹೊರಬಂದ ಸಾವಿರಾರು ಮಂದಿ ಜನರು ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನ ಆಟವನ್ನು ವೀಕ್ಷಿಸಿ ಆನಂದಪಟ್ಟರು. ತುಮಕೂರಿನ ಬಹುತೇಕ ಭಾಗಗಳಲ್ಲಿ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು. ಮಕ್ಕಳು, ವಿದ್ಯಾರ್ಥಿಗಳು, ಪೊಲೀಸರು, ಪೌರಕಾರ್ಮಿಕರು, ಆಟೋಚಾಲಕರು, ವೃದ್ಧರು ಹೀಗೆ ಎಲ್ಲಾ ಜನವಿಭಾಗದವರು ಕಂಕಣ ಸೂರ್ಯಗ್ರಹಣ ವೀಕ್ಷಿಸಿ ಪುರಿ, ತಿಂಡಿ ತಿಂದು ಕಾಫಿ ಕುಡಿದು ಮೌಢ್ಯದಿಂದ ಹೊರಬರುವಂತೆ ಎಲ್ಲರಿಗೂ ಮನವಿ ಮಾಡಿದರು.

ಬ್ರಾಹ್ಮಣರು ವಾಸಿಸುವ ಚಿಕ್ಕಪೇಟೆ, ಸೋಮೇಶ್ವರ ಹೀಗೆ ಹಲವು ಭಾಗಗಳಲ್ಲಿ ಜನ ಮನೆಯಿಂದಲೂ ಹೊರಗೆ ಬರಲು ಹೆದರಿಕೊಂಡಂತೆ ಕಂಡುಬಂತು. ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸನಾತನವಾದಿಗಳು ಗ್ರಹಣ ಬಿಡುವವರೆಗೂ ಏನೂ ತಿನ್ನದೆ ಮೌಢ್ಯವನ್ನು ಆಚರಿಸಿದರು. ಗ್ರಹಣ ಬಿಟ್ಟಮೇಲೆ ಸ್ನಾನ ಮಾಡಿದರು. ಆದರೆ ವಿಜ್ಞಾನ ಕೇಂದ್ರದ ಪದಾಧಿಕಾರಿಗಳನ್ನು ಇಂತಹ ಮೌಢ್ಯದಿಂದ ಹೊರಬರುವಂತೆ ಮನವಿ ಮಾಡಿಕೊಂಡರು. ಹೀಗಾಗಿ ಕೆಲಮಟ್ಟಿಗೆ ಜನರು ಸುರಕ್ಷಿತ ಸಾಧನಗಳಿಂದ ಸೂರ್ಯಗ್ರಹಣ ವೀಕ್ಷಿಸಿದರು. ಪದಾಧಿಕಾರಿಗಳು ಕೂಡ ಸೂರ್ಯಗ್ರಹಣ ವೀಕ್ಷಿಸುವುದರಿಂದ ಯಾವುದೇ ಅಪಾಯವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿದರು.

ವಿಜ್ಞಾನ ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಗಳ ಮೂಲಕ ಕಂಕಣ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಿದ್ದರು. ಹಿರೀಮಠದ ಡಾ.ಶಿವಾನಂದಶಿವಾಚಾರ್ಯ ಸ್ವಾಮಿ, ಮಹಿಳಾ ಪೊಲೀಸ್ ಅಧಿಕಾರಿಗಳು ಬಂದು ಸೂರ್ಯಗ್ರಹಣ ವೀಕ್ಷಿಸಿದರು.  ವಿಜ್ಞಾನ ಕೇಂದ್ರದ ಸಿ.ವಿಶ್ವನಾಥ್, ಸಿ.ಯತಿರಾಜ್, ಮಾಮ ರವಿ, ನಿತ್ಯಾನಂದ, ಸಾರ್ವಜನಿಕರಿಗೆ ವೈಚಾರಿಕ, ವೈಜ್ಞಾನಿಕವಾಗಿ ಸೂರ್ಯಗ್ರಹಣದ ಬಗ್ಗೆ ವಿವರಿಸಿ ಹೇಳಿದರು. ಪರಿಸರವಾದಿ ಸಿ.ಯತಿರಾಜು ಮಾತನಾಡಿ ಕೆಲವರು ಟಿವಿಗಳಲ್ಲಿ ಕುಳಿತು ಜನರಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಜನರು ಹೊರಬಂದು ಸೂರ್ಯಗ್ರಹಣ ವೀಕ್ಷಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಸೈಯದ್ ಮುಜೀಬ್ ಅವರು ಸೋಲಾರ್ ಫಿಲ್ಟರ್ ಗಳನ್ನು ಹಿಡಿದರು. ಆಟೋ ರಿಕ್ಷಾ ಚಾಲಕರು, ವೃದ್ದೆಯರು, ಪೌರಕಾರ್ಮಿಕರು, ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಿಸಲು ಮತ್ತು ವೈಜ್ಞಾನಿಕತೆಯನ್ನು ಹರಡಲು ಅವಕಾಶ ಮಾಡಿಕೊಟ್ಟರು. ರಾಮಾಜೋಯಿಸ್ ನಗರದಲ್ಲಿ ಆನಂದ್ ಅವರು ಮಕ್ಕಳಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ ಅಕ್ಕಮ್ಮ ಎಲ್ಲಾ ಸಾವಿರ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ವೀಕ್ಷಿಸಲು ಅನುಕೂಲ ಮಾಡಿಕೊಟ್ಟರು.

ಇಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಂಡಿತು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಂಡಿತು. ಮತ್ತೊಮ್ಮೆ ಇಂತಹ ಗ್ರಹಣ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ರವಿಶಂಕರ್ ತಿಳಿಸಿದರು.

ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಾಹನಗಳ ಓಡಾಟ ವಿರಳವಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಗಿನ ಚಹ, ಕಾಫಿ ಹೀರಲು ತುಂಬಿರುತ್ತಿದ್ದ ಹೋಟೆಲ್, ಕೆಫೆಗಳು ಖಾಲಿ ಖಾಲಿ ಇದ್ದುದು ಕಂಡು ಬಂತು. ಟಿವಿಯಲ್ಲಿ ಕುಳಿತ ಜ್ಯೋತಿಷಗಳು ಬ್ರಹ್ಮಾಂಡ ಮೌಢ್ಯ ಬಿತ್ತುವುದರಲ್ಲಿ ತೊಡಗಿದ್ದರು. ಆದರೆ ಲಕ್ಷಾಂತರವಲ್ಲದಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನ ಮನೆಗಳಿಂದ ಹೊರಬಂದಿದ್ದರು. ವಾಹನಗಳ ಚಾಲಕರು ಗ್ರಹಣವನ್ನು ನಂಬಿರಲಿಲ್ಲ. ಆದರೆ ನಗರವಾಸಿಗಳಲ್ಲೇ ಮೌಢ್ಯ ಹೆಚ್ಚಾಗಿರುವುದಂತು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...