Homeಕರ್ನಾಟಕಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

ಟಿವಿ ಜ್ಯೋತಿಷ್ಯ ನಂಬದೆ ತುಮಕೂರಿನ ವಿವಿಧೆಡೆ ಸಾವಿರಾರು ಜನರಿಂದ ಸೂರ್ಯಗ್ರಹಣ ವಿಕ್ಷಣೆ

- Advertisement -
- Advertisement -

ಜ್ಯೋತಿಷ್ಯವ್ಯಾದಿಗಳ ಅರಚುವಿಕೆಯ ನಡುವೆಯೂ ಮನೆಯಿಂದ ಹೊರಬಂದ ಸಾವಿರಾರು ಮಂದಿ ಜನರು ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನ ಆಟವನ್ನು ವೀಕ್ಷಿಸಿ ಆನಂದಪಟ್ಟರು. ತುಮಕೂರಿನ ಬಹುತೇಕ ಭಾಗಗಳಲ್ಲಿ ವಿಜ್ಞಾನ ಕೇಂದ್ರದ ಪದಾಧಿಕಾರಿಗಳು ಸುರಕ್ಷಿತ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟರು. ಮಕ್ಕಳು, ವಿದ್ಯಾರ್ಥಿಗಳು, ಪೊಲೀಸರು, ಪೌರಕಾರ್ಮಿಕರು, ಆಟೋಚಾಲಕರು, ವೃದ್ಧರು ಹೀಗೆ ಎಲ್ಲಾ ಜನವಿಭಾಗದವರು ಕಂಕಣ ಸೂರ್ಯಗ್ರಹಣ ವೀಕ್ಷಿಸಿ ಪುರಿ, ತಿಂಡಿ ತಿಂದು ಕಾಫಿ ಕುಡಿದು ಮೌಢ್ಯದಿಂದ ಹೊರಬರುವಂತೆ ಎಲ್ಲರಿಗೂ ಮನವಿ ಮಾಡಿದರು.

ಬ್ರಾಹ್ಮಣರು ವಾಸಿಸುವ ಚಿಕ್ಕಪೇಟೆ, ಸೋಮೇಶ್ವರ ಹೀಗೆ ಹಲವು ಭಾಗಗಳಲ್ಲಿ ಜನ ಮನೆಯಿಂದಲೂ ಹೊರಗೆ ಬರಲು ಹೆದರಿಕೊಂಡಂತೆ ಕಂಡುಬಂತು. ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗಿತ್ತು. ಸನಾತನವಾದಿಗಳು ಗ್ರಹಣ ಬಿಡುವವರೆಗೂ ಏನೂ ತಿನ್ನದೆ ಮೌಢ್ಯವನ್ನು ಆಚರಿಸಿದರು. ಗ್ರಹಣ ಬಿಟ್ಟಮೇಲೆ ಸ್ನಾನ ಮಾಡಿದರು. ಆದರೆ ವಿಜ್ಞಾನ ಕೇಂದ್ರದ ಪದಾಧಿಕಾರಿಗಳನ್ನು ಇಂತಹ ಮೌಢ್ಯದಿಂದ ಹೊರಬರುವಂತೆ ಮನವಿ ಮಾಡಿಕೊಂಡರು. ಹೀಗಾಗಿ ಕೆಲಮಟ್ಟಿಗೆ ಜನರು ಸುರಕ್ಷಿತ ಸಾಧನಗಳಿಂದ ಸೂರ್ಯಗ್ರಹಣ ವೀಕ್ಷಿಸಿದರು. ಪದಾಧಿಕಾರಿಗಳು ಕೂಡ ಸೂರ್ಯಗ್ರಹಣ ವೀಕ್ಷಿಸುವುದರಿಂದ ಯಾವುದೇ ಅಪಾಯವಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿದರು.

ವಿಜ್ಞಾನ ಕೇಂದ್ರದ ಆವರಣದಲ್ಲಿ ದೂರದರ್ಶಕ, ಸೂಜಿರಂಧ್ರ ಬಿಂಬಗ್ರಾಹಿ, ಸನ್ ಪ್ರೊಜೆಕ್ಟರ್ ಹಾಗೂ ಸೋಲಾರ್ ಫಿಲ್ಟರ್ ಗಳ ಮೂಲಕ ಕಂಕಣ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಿದ್ದರು. ಹಿರೀಮಠದ ಡಾ.ಶಿವಾನಂದಶಿವಾಚಾರ್ಯ ಸ್ವಾಮಿ, ಮಹಿಳಾ ಪೊಲೀಸ್ ಅಧಿಕಾರಿಗಳು ಬಂದು ಸೂರ್ಯಗ್ರಹಣ ವೀಕ್ಷಿಸಿದರು.  ವಿಜ್ಞಾನ ಕೇಂದ್ರದ ಸಿ.ವಿಶ್ವನಾಥ್, ಸಿ.ಯತಿರಾಜ್, ಮಾಮ ರವಿ, ನಿತ್ಯಾನಂದ, ಸಾರ್ವಜನಿಕರಿಗೆ ವೈಚಾರಿಕ, ವೈಜ್ಞಾನಿಕವಾಗಿ ಸೂರ್ಯಗ್ರಹಣದ ಬಗ್ಗೆ ವಿವರಿಸಿ ಹೇಳಿದರು. ಪರಿಸರವಾದಿ ಸಿ.ಯತಿರಾಜು ಮಾತನಾಡಿ ಕೆಲವರು ಟಿವಿಗಳಲ್ಲಿ ಕುಳಿತು ಜನರಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡದೆ ಜನರು ಹೊರಬಂದು ಸೂರ್ಯಗ್ರಹಣ ವೀಕ್ಷಿಸಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಹೇಳಿದರು.

ಖಾಸಗಿ ಬಸ್ ನಿಲ್ದಾಣದಲ್ಲಿ ಸೈಯದ್ ಮುಜೀಬ್ ಅವರು ಸೋಲಾರ್ ಫಿಲ್ಟರ್ ಗಳನ್ನು ಹಿಡಿದರು. ಆಟೋ ರಿಕ್ಷಾ ಚಾಲಕರು, ವೃದ್ದೆಯರು, ಪೌರಕಾರ್ಮಿಕರು, ಸಾರ್ವಜನಿಕರಿಗೆ ಸೂರ್ಯಗ್ರಹಣ ವೀಕ್ಷಿಸಲು ಮತ್ತು ವೈಜ್ಞಾನಿಕತೆಯನ್ನು ಹರಡಲು ಅವಕಾಶ ಮಾಡಿಕೊಟ್ಟರು. ರಾಮಾಜೋಯಿಸ್ ನಗರದಲ್ಲಿ ಆನಂದ್ ಅವರು ಮಕ್ಕಳಿಗೆ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ ಅಕ್ಕಮ್ಮ ಎಲ್ಲಾ ಸಾವಿರ ವಿದ್ಯಾರ್ಥಿಗಳಿಗೆ ಸೂರ್ಯಗ್ರಹಣ ವೀಕ್ಷಿಸಲು ಅನುಕೂಲ ಮಾಡಿಕೊಟ್ಟರು.

ಇಂದು ಬೆಳಗ್ಗೆ 8.06 ಗಂಟೆಗೆ ಗ್ರಹಣದ ಪ್ರಥಮ ಸ್ಪರ್ಶ ನಂತರ ಗರಿಷ್ಠ ಗ್ರಹಣವು 9.27ರಿಂದ 9.30ರವರೆಗೆ ಶೇಕಡ 89.1ರಷ್ಟು ಗ್ರಹಣ ಆವರಿಸಿಕೊಂಡಿತು. 11 ಗಂಟೆ, 9 ನಿಮಿಷ 48 ಸೆಕೆಂಡ್ ಗೆ ಗ್ರಹಣ ಮುಕ್ತಾಯಗೊಂಡಿತು. ಮತ್ತೊಮ್ಮೆ ಇಂತಹ ಗ್ರಹಣ ನೋಡಲು 17ನೇ ಫೆಬ್ರವರಿ 2064ನೇ ಇಸವಿಯವರೆಗೆ ಕಾಯಬೇಕಾಗುತ್ತದೆ ಎಂದು ರವಿಶಂಕರ್ ತಿಳಿಸಿದರು.

ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ವಾಹನಗಳ ಓಡಾಟ ವಿರಳವಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಗಿನ ಚಹ, ಕಾಫಿ ಹೀರಲು ತುಂಬಿರುತ್ತಿದ್ದ ಹೋಟೆಲ್, ಕೆಫೆಗಳು ಖಾಲಿ ಖಾಲಿ ಇದ್ದುದು ಕಂಡು ಬಂತು. ಟಿವಿಯಲ್ಲಿ ಕುಳಿತ ಜ್ಯೋತಿಷಗಳು ಬ್ರಹ್ಮಾಂಡ ಮೌಢ್ಯ ಬಿತ್ತುವುದರಲ್ಲಿ ತೊಡಗಿದ್ದರು. ಆದರೆ ಲಕ್ಷಾಂತರವಲ್ಲದಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಜನ ಮನೆಗಳಿಂದ ಹೊರಬಂದಿದ್ದರು. ವಾಹನಗಳ ಚಾಲಕರು ಗ್ರಹಣವನ್ನು ನಂಬಿರಲಿಲ್ಲ. ಆದರೆ ನಗರವಾಸಿಗಳಲ್ಲೇ ಮೌಢ್ಯ ಹೆಚ್ಚಾಗಿರುವುದಂತು ಸತ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...