Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...