Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...