Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...