Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...