Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...