Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...