Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...