Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...