Homeಮುಖಪುಟ35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು...

35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕ ವಿದ್ಯುತ್ ಬಿಲ್ 35000 ದಾಟುತ್ತಿತ್ತು. ಅದನ್ನು ತಪ್ಪಿಸಲು ಅಲ್ಲಿನ ಆಮ್ ಆದ್ಮಿ ಪಕ್ಷ ನೇತೃತ್ವದ ಮಾಡಿದ ಪ್ರಯೋಗ ಫಲ ನೀಡಿದೆ. ಹಾಲಿ 21 ಶಾಲೆಗಳಲ್ಲಿ ವಿದ್ಯುತ್ ಬಿಲ್ ಸೊನ್ನೆ ರೂಗಿಳಿದಿದೆ ಮಾತ್ರವಲ್ಲ ಹೆಚ್ಚುವರಿ ವಿದ್ಯುತ್ ಅನ್ನು ಉತ್ಪಾದಿಸುವ ಮಟ್ಟಕ್ಕೆ ಇಳಿದಿವೆ.

ಇದಕ್ಕಾಗಿ ಅವರೇನು ಹೋಮ ಹವನ ಮಾಡಲಿಲ್ಲ. ಮ್ಯಾಜಿಕ್ ಮಾಡಲಿಲ್ಲ, ಫ್ರಿ ವಿದ್ಯುತ್ ಸಹ ನೀಡಲಿಲ್ಲ. ವೈಜ್ಞಾನಿಕ ವಿಧಾನದಲ್ಲಿ 21 ಶಾಲೆಗಳ ಮಹಡಿ ಮೇಲೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿದ್ದಾರೆ. ಈ ಪ್ರಯೋಗ ಯಶಸ್ವಿಯಾಗಿದ್ದು ಆ ಶಾಲೆಗಳು ಬಳಸಿ ಮಿಗುವಷ್ಟು ಸೋಲಾರ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಶಿಕ್ಷಣ ಮಂತ್ರಿ ಮನೀಶ್ ಸಿಸೋಡಿಯಾ “21 ಶಾಲೆಗಳ ನಮ್ಮ ಪ್ರಯೋಗ ಸಫಲವಾಗಿದೆ. 100 ಶಾಲೆಗಳಲ್ಲಿ ಸೋಲಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. 500 ಶಾಲೆಗಳಿಗೆ ಶೀಘ್ರದಲ್ಲಿಯೇ ವಿಸ್ತರಿಸುತ್ತೇವೆ ಎಂದಿದ್ದಾರೆ.” ದೆಹಲಿಯು ಪೂರ್ಣ ವಿದ್ಯುತ್ ಸ್ವಾವಲಂಬಿಯಾಗುವತ್ತ ಇದೊಂದು ದೃಢ ಹೆಜ್ಜೆ ಎಂದು ಸಹ ಹೇಳಿದ್ದಾರೆ.

ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016-17ರಲ್ಲಿ ದೆಹಲಿಯ ಪ್ರತಿ ಮಗಿವಿನ ವಾರ್ಷಿಕ ಶಿಕ್ಷಣ ವೆಚ್ಚ 54,910/- ಗಳಿದ್ದು 2018-19ರ ವೇಳೆಗೆ 66,038/- ರೂಗಳಿಗೆ ಏರಿಕೆಯಾಗಿದೆ. ಹೊಸದಾಗಿ 300 ನರ್ಸರಿ ತರಗತಿಗಳನ್ನು ಆರಂಭಿಸಿರುವ ಅವರು 12,748 ಹೊಸ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಹಲವು ಹೊಸ ಕಟ್ಟಡಗಳ ಜೊತೆಗೇನೆ 52 ಶಾಲೆಗಳ ದುರಸ್ಥಿ ಕಾರ್ಯವನ್ನು ಸದ್ದಿಲ್ಲದೆ ಮುಗಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಈಜುಕೊಳ

ದೆಹಲಿಯಲ್ಲಿ ಈ ಬಾರಿ ಬಿಸಿಲು ಮತ್ತು ಉಷ್ಣಾಂಶ ಮಿತಿ ಮೀರಿ ಏರಿಕೆಯಾಗಿದೆ. ಸಹಜವಾಗಿ ಸೆಕೆಯೂ ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಶಾಲೆಗಳಲ್ಲಿ ಉತ್ತಮ ಫ್ಯಾನ್ ಗಳು ಮತ್ತು ಕೂಲರ್ ಗಳನ್ನು ಅಳವಡಿಸಿ ಮಕ್ಕಳ ಹಿತ ಕಾಯಲಾಗುತ್ತಿದೆ. ಕರ್ನಾಟಕದಲ್ಲಿ ಎಷ್ಟೋ ಶಾಲೆಗಳಿಗೆ ವಿದ್ಯುತ್ ಸಹ ಇಲ್ಲದಿರುವ ಸಂಧರ್ಭದಲ್ಲಿ ನಾವು ಇದನ್ನೂ ಊಹಿಸಿಕೊಳ್ಳುವುದು ಸಹ ಕಷ್ಟವೇನೋ?

ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ದೆಹಲಿ ಸರ್ಕಾರ ಕೈಗೊಂಡಿದೆ. ಶಿಕ್ಷಕರಿಗೆ ವಿದೇಶಗಳಲ್ಲಿಯೂ ತರಬೇತಿ ನೀಡಲಾಗಿದೆ. ಸತತ ಪರಿಶ್ರಮದ ನಂತರ ದೆಹಲಿಯ ಮಕ್ಕಳು ಎಸ್‍ಎಸ್‍ಎಲ್‍ಸಿ, ಸಿಬಿಎಸ್‍ಸಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದರ ಹಿಂದೆ ಅತಿಶಿ ಮರ್ಲೀನಾ, ಮನೀಶ್ ಸಿಸೋಡಿಯ, ಅರವಿಂದ್ ಕೇಜ್ರಿವಾಲ್‍ರವರ ಇಚ್ಛಾಶಕ್ತಿ ಕೆಲಸ ಮಾಡಿತ್ತು.

ಸೆಕೆ ತಡೆಯಲು ಕೂಲರ್ ಗಳು

ಸರ್ಕಾರಿ ಶಾಲೆಗಳನ್ನು ವಿಶ್ವದರ್ಜೆಗೆ ಏರಿಸಿದ್ದು, ಹೊಸ ಹೈಟೆಕ್ ಶಾಲೆಗಳನ್ನು ಸ್ಥಾಪಿಸಿದ್ದು, ಮೊಹಲ್ಲ ಕ್ಲಿನಿಕ್‍ಗಳು, ಹೈಟೆಕ್ ಸರ್ಕಾರಿ ಆಸ್ಪತ್ರೆಗಳನ್ನು ಕಟ್ಟಿದ್ದು, ವಿದ್ಯುತ್ ದರ ಅರ್ಧಕ್ಕೆ ಇಳಿಸಿದ್ದು, ನೀರಿನ ದರ ಸಂಪೂರ್ಣ ಕಡಿತಗೊಳಿಸಿ ಉಚಿತ ಮಾಡಿದ್ದು, ಆಯುಸ್ಮಾನ್ ಭಾರತ್‍ನ ಸುಲಭ ಯೋಜನೆ, ಮೆಟ್ರೊ ಮತ್ತು ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇನ್ನಿತರ ಹತ್ತಾರು ದೆಹಲಿಯ ಜನಪರ ಯೋಜನೆಗಳ ಸಾಲಿಗೆ ಈ ಸೋಲಾರ್ ಘಟಕಗಳು ಸೇರುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಿಸಿತ್ತು. ಯಾರು ಫ್ರಿಡ್ಜ್ ಹೊಂದಿದ್ದಾರೆ, ಟೆಲಿಫೋನ್ ಹೊಂದಿದ್ದಾರೋ ಅಥವಾ ಬೈಕ್ ಹೊಂದಿರುವವರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎಂಬ ಕಠಿಣ ನಿಯಮವನ್ನು ರೂಪಿಸಿತ್ತು. ಇವೆಲ್ಲವೂ ಇಲ್ಲದೇ ಇರುವವರಿಗೆ ಮಾತ್ರ 5 ಲಕ್ಷ ರೂವರೆಗಿನ ಚಿಕಿತ್ಸೆ ಉಚಿತವಾಗಿತ್ತು.

ಇದಕ್ಕೆ ಸೆಡ್ಡು ಹೊಡೆದ ದೆಹಲಿ ಸರ್ಕಾರ ದೆಹಲಿಯ ನಿವಾಸಿಗಳು ಫ್ರಿಡ್ಜ್, ಟೆಲಿಫೋನ್, ಬೈಕ್ ಇದ್ದರೂ ಎಲ್ಲರೂ ಸಹ ಹೊಸ ಆರೋಗ್ಯ ಯೋಜನೆಯ ಫಲಾನುಭವಿಗಳಾಗಿದ್ದು ಸಂಪೂರ್ಣ ಉಚಿತ ಚಿಕಿತ್ಸೆ ಮಾತ್ರವಲ್ಲದೇ, ಚಿಕಿತ್ಸೆಯ ಮಿತಿಯನ್ನು ಸಹ ತೆಗೆದುಹಾಕಿ ಮಾದರಿ ಯೋಜನೆ ಎನಿಸಿಕೊಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಒಟ್ಟಿನಲ್ಲಿ ಜನರಿಗೆ ಏನೆಲ್ಲಾ ಮೂಲಭೂತ ಅವಶ್ಯಕತೆಗಳಿವೆಯೇ ಅವೆಲ್ಲವನ್ನು ಪೂರೈಸಲು ದೆಹಲಿಯ ಆಪ್ ಒಂದೊಂದೇ ದೃಢ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಅದೊಂದು ಮಾದರಿ ಸರ್ಕಾರವಾಗಿದೆ. ಅಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯ, ಅತಿಶಿ ಮರ್ಲೀನಾ ಇವರನ್ನು ಈ ಕಾರಣಕ್ಕೆ ಅಭಿನಂದಿಸಬೇಕಿದೆ. ದೆಹಲಿ ಸರ್ಕಾರಕ್ಕೆ ಮಾಡಲಾಗುವ ಕೆಲಸಗಳನ್ನು ಉಳಿದ ಸರ್ಕಾರಗಳು ಯಾಕೆ ಮಾಡಲಾಗುವುದಿಲ್ಲ ಎಂಬ ಪ್ರಶ್ನೆಯನ್ನು ಜನತೆ ಕೇಳಬೇಕಿದೆ ಮತ್ತು ಅದೇ ಮಾದರಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...