Homeಮುಖಪುಟಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ಅಂತರಿಕ್ಷದಲ್ಲಿ ಉಂಟಾಗಿರುವ ಕೆಲವು ವಿದ್ಯಮಾನಗಳು ಭೂಮಿಯ ಮೇಲಿರುವವರ ಅರಿವಿಗೆ ಬರುವುದಿಲ್ಲ. ಕೆಲವೊಮ್ಮೆ ಬಾಹ್ಯಾಕಾಶ ಮಂಡಲದ ಬೆಳವಣಿಗೆಗಳು ಭೂಮಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಉಲ್ಕಾಪಾತ, ಗ್ರಹಣ, ಗ್ರಹಗಳ ಮುಖಮುಖಿ ಇನ್ನು ಕೆಲವು ವಿದ್ಯಮಾನಗಳು ಭುಮಿಯ ವಾತಾವರಣದ ಮೇಲೆ ತೀವ್ರ ಪರಿಣಾಮವನ್ನು ಬೀರುತ್ತವೆ. ಈಗ ನಭೋ ಮಂಡಲದಲ್ಲಿ ಉಂಟಾಗಿರುವ ಸೌರ ಚಂಡಮಾರುತ ಭೂಮಿಗೆ ಅಪ್ಪಳಿಸುತ್ತಿದ್ದು ನಾಸಾ ವಿಜ್ಞಾನಿಗಳು ಸೋಲಾರ್‌ ಸ್ಟಾರ್ಮ್ ಅಪಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಪ್ರಕಾರ, ಸೌರ ಚಂಡಮಾರುತವು ಗಂಟೆಗೆ ಸುಮಾರು 1.6 ದಶಲಕ್ಷ ಕಿಲೋಮೀಟರ್ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಬಹುಶಃ ಅದರ ವೇಗ ಮತ್ತಷ್ಟು ಹೆಚ್ಚಾಗಲಿದೆ. ಸೌರ ಬಿರುಗಾಳಿ ಉಪಗ್ರಹ ಸಂಕೇತಗಳನ್ನು ಅಡ್ಡಿಪಡಿಸಬಹುದು. ಸೋಮವಾರ  ಅಥವಾ ಮಂಗಳವಾರ ಸೌರ ಬಿರುಗಾಳಿ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ನಾಸಾ ಹೇಳಿದೆ.

ಸ್ಪೇಸ್‌ವೆದರ್‌.ಕಾಮ್‌ ಸಂಸ್ಥೆ ಹೇಳುವ ಪ್ರಕಾರ ಸೌರ ಬಿರುಗಾಳಿ ವೇಳೆಯಲ್ಲಿ ಉತ್ತರ ಅಥವಾ ದಕ್ಷಿಣ ಧ್ರುವದ  ಜನರಿಗೆ ರಾತ್ರಿಯ ಸಮಯದಲ್ಲಿ ಪ್ರಕಾಶಮಾನವಾದ ಬೆಳಕು ಕಾಣಿಸಲಿದೆ. ಸೋಲಾರ್‌ ಸ್ಟಾರ್ಮ್ ಭೂಮಿಯ ಮೇಲಿನ ಜಿಪಿಎಸ್, ಮೊಬೈಲ್ ಫೋನ್ ಮತ್ತು ಉಪಗ್ರಹ ಸಂಪರ್ಕ ಜಾಲಕ್ಕೆ ಅಡಚಣೆ ಉಂಟಾಗಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಇತರ ರೇಡಿಯೋ ಫ್ರಿಕ್ವೆನ್ಸಿ ಸಂಚಾಲಿತ ಸಾಧನಗಳೂ ಕೂಡ ಕೆಲ ಹೊತ್ತು ಸ್ಥಗಿತವಾಗುವ ಸಾಧ್ಯತೆಗಳಿವೆ ಎಂದು ಅಂತರಾಷ್ಟ್ರೀಯ ವೆಬ್‌ಸೈಟ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಸೌರ ಬಿರುಗಾಳಿಯ ಹೊಡೆತದಿಂದ ಪವರ್‌ ಗ್ರಿಡ್‌ ಮತ್ತು ಅನಿಲ ಕೊಳವೆಗಳಿಗೂ ಇದೆ ಅಪಾಯ

ಸೌರ ಚಂಡಮಾರುತದ ಸಮಯದಲ್ಲಿ, ಬಲವಾದ ವಿದ್ಯುತ್ ಪ್ರವಾಹವು ಭೂಮಿಯ ಮೇಲ್ಮೈಗೆ ಹರಿಯುವುದರಿಂದ ಪವರ್ ಗ್ರಿಡ್ ವಿಫಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಭೂಮಿಯ ಹೊರಗಿನ ವಾತಾವರಣ ಬಿಸಿಯಾಗಬಹುದು. ಇದು ಉಪಗ್ರಹಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ವಿದ್ಯುತ್ ಲೈನ್‌ಗಳಲ್ಲಿ ಪ್ರವಾಹವು ಅಧಿಕವಾಗಿರಬಹುದು, ಇದು ಟ್ರಾನ್ಸ್‌ಫಾರ್ಮರ್‌ಗಳನ್ನು ಸಹ ಸ್ಫೋಟಿಸುವಷ್ಟು ಶಕ್ತಿಶಾಲಿಯಾಗಿರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಕೆಲವು ಸ್ಥಳಗಳಲ್ಲಿ, ತೈಲ ಮತ್ತು ಅನಿಲ ಪೈಪ್‌ಲೈನ್‌ಗಳ ಮೇಲೂ ಬಿರುಗಾಳಿ ಪರಿಣಾಮ ಉಂಟಾಗುತ್ತದೆ. ಹೈ ಫ್ರಿಕ್ವೆನ್ಸಿ ರೇಡಿಯೊ ಸಂವಹನದ ಮೇಲೆ ಸೋಲಾರ್‌ ಸ್ಟಾರ್ಮ್ ಪರಿಣಾಮ ಬೀರುವುದರಿಂದ ಜಿಪಿಎಸ್ ಮತ್ತು ಮೊಬೈಲ್‌ ನೆಟ್ವರ್ಕ್‌ಗಳು  ಸಹ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತವೆ.

ಸೌರ ಚಂಡಮಾರುತವು ಕೆಲವು ನಿಮಿಷಗಳಿಂದ ಕೆಲ ಗಂಟೆಗಳವರೆಗೆ ಪರಿಣಾಮ ಬೀರಲಿದೆ. ಭೂಮಿಯ ಕಾಂತೀಯ ಮೇಲ್ಮೈ ಮತ್ತು ವಾತಾವರಣದಲ್ಲಿ ಇದರ ಪರಿಣಾಮವು ಹಲವು ದಿನಗಳು ಅಥವಾ  ವಾರಗಳವರೆಗೆ ಇರುತ್ತದೆ ಎಂದು ಖಗೊಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

 ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...