Homeಮುಖಪುಟಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ಅಂತರಿಕ್ಷದಲ್ಲಿ ಉಂಟಾಗಿರುವ ಕೆಲವು ವಿದ್ಯಮಾನಗಳು ಭೂಮಿಯ ಮೇಲಿರುವವರ ಅರಿವಿಗೆ ಬರುವುದಿಲ್ಲ. ಕೆಲವೊಮ್ಮೆ ಬಾಹ್ಯಾಕಾಶ ಮಂಡಲದ ಬೆಳವಣಿಗೆಗಳು ಭೂಮಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಉಲ್ಕಾಪಾತ, ಗ್ರಹಣ, ಗ್ರಹಗಳ ಮುಖಮುಖಿ ಇನ್ನು ಕೆಲವು ವಿದ್ಯಮಾನಗಳು ಭುಮಿಯ ವಾತಾವರಣದ ಮೇಲೆ ತೀವ್ರ ಪರಿಣಾಮವನ್ನು ಬೀರುತ್ತವೆ. ಈಗ ನಭೋ ಮಂಡಲದಲ್ಲಿ ಉಂಟಾಗಿರುವ ಸೌರ ಚಂಡಮಾರುತ ಭೂಮಿಗೆ ಅಪ್ಪಳಿಸುತ್ತಿದ್ದು ನಾಸಾ ವಿಜ್ಞಾನಿಗಳು ಸೋಲಾರ್‌ ಸ್ಟಾರ್ಮ್ ಅಪಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಪ್ರಕಾರ, ಸೌರ ಚಂಡಮಾರುತವು ಗಂಟೆಗೆ ಸುಮಾರು 1.6 ದಶಲಕ್ಷ ಕಿಲೋಮೀಟರ್ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಬಹುಶಃ ಅದರ ವೇಗ ಮತ್ತಷ್ಟು ಹೆಚ್ಚಾಗಲಿದೆ. ಸೌರ ಬಿರುಗಾಳಿ ಉಪಗ್ರಹ ಸಂಕೇತಗಳನ್ನು ಅಡ್ಡಿಪಡಿಸಬಹುದು. ಸೋಮವಾರ  ಅಥವಾ ಮಂಗಳವಾರ ಸೌರ ಬಿರುಗಾಳಿ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ನಾಸಾ ಹೇಳಿದೆ.

ಸ್ಪೇಸ್‌ವೆದರ್‌.ಕಾಮ್‌ ಸಂಸ್ಥೆ ಹೇಳುವ ಪ್ರಕಾರ ಸೌರ ಬಿರುಗಾಳಿ ವೇಳೆಯಲ್ಲಿ ಉತ್ತರ ಅಥವಾ ದಕ್ಷಿಣ ಧ್ರುವದ  ಜನರಿಗೆ ರಾತ್ರಿಯ ಸಮಯದಲ್ಲಿ ಪ್ರಕಾಶಮಾನವಾದ ಬೆಳಕು ಕಾಣಿಸಲಿದೆ. ಸೋಲಾರ್‌ ಸ್ಟಾರ್ಮ್ ಭೂಮಿಯ ಮೇಲಿನ ಜಿಪಿಎಸ್, ಮೊಬೈಲ್ ಫೋನ್ ಮತ್ತು ಉಪಗ್ರಹ ಸಂಪರ್ಕ ಜಾಲಕ್ಕೆ ಅಡಚಣೆ ಉಂಟಾಗಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಇತರ ರೇಡಿಯೋ ಫ್ರಿಕ್ವೆನ್ಸಿ ಸಂಚಾಲಿತ ಸಾಧನಗಳೂ ಕೂಡ ಕೆಲ ಹೊತ್ತು ಸ್ಥಗಿತವಾಗುವ ಸಾಧ್ಯತೆಗಳಿವೆ ಎಂದು ಅಂತರಾಷ್ಟ್ರೀಯ ವೆಬ್‌ಸೈಟ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಸೌರ ಬಿರುಗಾಳಿಯ ಹೊಡೆತದಿಂದ ಪವರ್‌ ಗ್ರಿಡ್‌ ಮತ್ತು ಅನಿಲ ಕೊಳವೆಗಳಿಗೂ ಇದೆ ಅಪಾಯ

ಸೌರ ಚಂಡಮಾರುತದ ಸಮಯದಲ್ಲಿ, ಬಲವಾದ ವಿದ್ಯುತ್ ಪ್ರವಾಹವು ಭೂಮಿಯ ಮೇಲ್ಮೈಗೆ ಹರಿಯುವುದರಿಂದ ಪವರ್ ಗ್ರಿಡ್ ವಿಫಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಭೂಮಿಯ ಹೊರಗಿನ ವಾತಾವರಣ ಬಿಸಿಯಾಗಬಹುದು. ಇದು ಉಪಗ್ರಹಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ವಿದ್ಯುತ್ ಲೈನ್‌ಗಳಲ್ಲಿ ಪ್ರವಾಹವು ಅಧಿಕವಾಗಿರಬಹುದು, ಇದು ಟ್ರಾನ್ಸ್‌ಫಾರ್ಮರ್‌ಗಳನ್ನು ಸಹ ಸ್ಫೋಟಿಸುವಷ್ಟು ಶಕ್ತಿಶಾಲಿಯಾಗಿರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಕೆಲವು ಸ್ಥಳಗಳಲ್ಲಿ, ತೈಲ ಮತ್ತು ಅನಿಲ ಪೈಪ್‌ಲೈನ್‌ಗಳ ಮೇಲೂ ಬಿರುಗಾಳಿ ಪರಿಣಾಮ ಉಂಟಾಗುತ್ತದೆ. ಹೈ ಫ್ರಿಕ್ವೆನ್ಸಿ ರೇಡಿಯೊ ಸಂವಹನದ ಮೇಲೆ ಸೋಲಾರ್‌ ಸ್ಟಾರ್ಮ್ ಪರಿಣಾಮ ಬೀರುವುದರಿಂದ ಜಿಪಿಎಸ್ ಮತ್ತು ಮೊಬೈಲ್‌ ನೆಟ್ವರ್ಕ್‌ಗಳು  ಸಹ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತವೆ.

ಸೌರ ಚಂಡಮಾರುತವು ಕೆಲವು ನಿಮಿಷಗಳಿಂದ ಕೆಲ ಗಂಟೆಗಳವರೆಗೆ ಪರಿಣಾಮ ಬೀರಲಿದೆ. ಭೂಮಿಯ ಕಾಂತೀಯ ಮೇಲ್ಮೈ ಮತ್ತು ವಾತಾವರಣದಲ್ಲಿ ಇದರ ಪರಿಣಾಮವು ಹಲವು ದಿನಗಳು ಅಥವಾ  ವಾರಗಳವರೆಗೆ ಇರುತ್ತದೆ ಎಂದು ಖಗೊಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

 ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...