Homeಮುಖಪುಟಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ಅಂತರಿಕ್ಷದಲ್ಲಿ ಉಂಟಾಗಿರುವ ಕೆಲವು ವಿದ್ಯಮಾನಗಳು ಭೂಮಿಯ ಮೇಲಿರುವವರ ಅರಿವಿಗೆ ಬರುವುದಿಲ್ಲ. ಕೆಲವೊಮ್ಮೆ ಬಾಹ್ಯಾಕಾಶ ಮಂಡಲದ ಬೆಳವಣಿಗೆಗಳು ಭೂಮಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಉಲ್ಕಾಪಾತ, ಗ್ರಹಣ, ಗ್ರಹಗಳ ಮುಖಮುಖಿ ಇನ್ನು ಕೆಲವು ವಿದ್ಯಮಾನಗಳು ಭುಮಿಯ ವಾತಾವರಣದ ಮೇಲೆ ತೀವ್ರ ಪರಿಣಾಮವನ್ನು ಬೀರುತ್ತವೆ. ಈಗ ನಭೋ ಮಂಡಲದಲ್ಲಿ ಉಂಟಾಗಿರುವ ಸೌರ ಚಂಡಮಾರುತ ಭೂಮಿಗೆ ಅಪ್ಪಳಿಸುತ್ತಿದ್ದು ನಾಸಾ ವಿಜ್ಞಾನಿಗಳು ಸೋಲಾರ್‌ ಸ್ಟಾರ್ಮ್ ಅಪಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಪ್ರಕಾರ, ಸೌರ ಚಂಡಮಾರುತವು ಗಂಟೆಗೆ ಸುಮಾರು 1.6 ದಶಲಕ್ಷ ಕಿಲೋಮೀಟರ್ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಬಹುಶಃ ಅದರ ವೇಗ ಮತ್ತಷ್ಟು ಹೆಚ್ಚಾಗಲಿದೆ. ಸೌರ ಬಿರುಗಾಳಿ ಉಪಗ್ರಹ ಸಂಕೇತಗಳನ್ನು ಅಡ್ಡಿಪಡಿಸಬಹುದು. ಸೋಮವಾರ  ಅಥವಾ ಮಂಗಳವಾರ ಸೌರ ಬಿರುಗಾಳಿ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ನಾಸಾ ಹೇಳಿದೆ.

ಸ್ಪೇಸ್‌ವೆದರ್‌.ಕಾಮ್‌ ಸಂಸ್ಥೆ ಹೇಳುವ ಪ್ರಕಾರ ಸೌರ ಬಿರುಗಾಳಿ ವೇಳೆಯಲ್ಲಿ ಉತ್ತರ ಅಥವಾ ದಕ್ಷಿಣ ಧ್ರುವದ  ಜನರಿಗೆ ರಾತ್ರಿಯ ಸಮಯದಲ್ಲಿ ಪ್ರಕಾಶಮಾನವಾದ ಬೆಳಕು ಕಾಣಿಸಲಿದೆ. ಸೋಲಾರ್‌ ಸ್ಟಾರ್ಮ್ ಭೂಮಿಯ ಮೇಲಿನ ಜಿಪಿಎಸ್, ಮೊಬೈಲ್ ಫೋನ್ ಮತ್ತು ಉಪಗ್ರಹ ಸಂಪರ್ಕ ಜಾಲಕ್ಕೆ ಅಡಚಣೆ ಉಂಟಾಗಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಇತರ ರೇಡಿಯೋ ಫ್ರಿಕ್ವೆನ್ಸಿ ಸಂಚಾಲಿತ ಸಾಧನಗಳೂ ಕೂಡ ಕೆಲ ಹೊತ್ತು ಸ್ಥಗಿತವಾಗುವ ಸಾಧ್ಯತೆಗಳಿವೆ ಎಂದು ಅಂತರಾಷ್ಟ್ರೀಯ ವೆಬ್‌ಸೈಟ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಸೌರ ಬಿರುಗಾಳಿಯ ಹೊಡೆತದಿಂದ ಪವರ್‌ ಗ್ರಿಡ್‌ ಮತ್ತು ಅನಿಲ ಕೊಳವೆಗಳಿಗೂ ಇದೆ ಅಪಾಯ

ಸೌರ ಚಂಡಮಾರುತದ ಸಮಯದಲ್ಲಿ, ಬಲವಾದ ವಿದ್ಯುತ್ ಪ್ರವಾಹವು ಭೂಮಿಯ ಮೇಲ್ಮೈಗೆ ಹರಿಯುವುದರಿಂದ ಪವರ್ ಗ್ರಿಡ್ ವಿಫಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಭೂಮಿಯ ಹೊರಗಿನ ವಾತಾವರಣ ಬಿಸಿಯಾಗಬಹುದು. ಇದು ಉಪಗ್ರಹಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ವಿದ್ಯುತ್ ಲೈನ್‌ಗಳಲ್ಲಿ ಪ್ರವಾಹವು ಅಧಿಕವಾಗಿರಬಹುದು, ಇದು ಟ್ರಾನ್ಸ್‌ಫಾರ್ಮರ್‌ಗಳನ್ನು ಸಹ ಸ್ಫೋಟಿಸುವಷ್ಟು ಶಕ್ತಿಶಾಲಿಯಾಗಿರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಕೆಲವು ಸ್ಥಳಗಳಲ್ಲಿ, ತೈಲ ಮತ್ತು ಅನಿಲ ಪೈಪ್‌ಲೈನ್‌ಗಳ ಮೇಲೂ ಬಿರುಗಾಳಿ ಪರಿಣಾಮ ಉಂಟಾಗುತ್ತದೆ. ಹೈ ಫ್ರಿಕ್ವೆನ್ಸಿ ರೇಡಿಯೊ ಸಂವಹನದ ಮೇಲೆ ಸೋಲಾರ್‌ ಸ್ಟಾರ್ಮ್ ಪರಿಣಾಮ ಬೀರುವುದರಿಂದ ಜಿಪಿಎಸ್ ಮತ್ತು ಮೊಬೈಲ್‌ ನೆಟ್ವರ್ಕ್‌ಗಳು  ಸಹ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತವೆ.

ಸೌರ ಚಂಡಮಾರುತವು ಕೆಲವು ನಿಮಿಷಗಳಿಂದ ಕೆಲ ಗಂಟೆಗಳವರೆಗೆ ಪರಿಣಾಮ ಬೀರಲಿದೆ. ಭೂಮಿಯ ಕಾಂತೀಯ ಮೇಲ್ಮೈ ಮತ್ತು ವಾತಾವರಣದಲ್ಲಿ ಇದರ ಪರಿಣಾಮವು ಹಲವು ದಿನಗಳು ಅಥವಾ  ವಾರಗಳವರೆಗೆ ಇರುತ್ತದೆ ಎಂದು ಖಗೊಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

 ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...