Homeಮುಖಪುಟಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ಅಂತರಿಕ್ಷದಲ್ಲಿ ಉಂಟಾಗಿರುವ ಕೆಲವು ವಿದ್ಯಮಾನಗಳು ಭೂಮಿಯ ಮೇಲಿರುವವರ ಅರಿವಿಗೆ ಬರುವುದಿಲ್ಲ. ಕೆಲವೊಮ್ಮೆ ಬಾಹ್ಯಾಕಾಶ ಮಂಡಲದ ಬೆಳವಣಿಗೆಗಳು ಭೂಮಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಉಲ್ಕಾಪಾತ, ಗ್ರಹಣ, ಗ್ರಹಗಳ ಮುಖಮುಖಿ ಇನ್ನು ಕೆಲವು ವಿದ್ಯಮಾನಗಳು ಭುಮಿಯ ವಾತಾವರಣದ ಮೇಲೆ ತೀವ್ರ ಪರಿಣಾಮವನ್ನು ಬೀರುತ್ತವೆ. ಈಗ ನಭೋ ಮಂಡಲದಲ್ಲಿ ಉಂಟಾಗಿರುವ ಸೌರ ಚಂಡಮಾರುತ ಭೂಮಿಗೆ ಅಪ್ಪಳಿಸುತ್ತಿದ್ದು ನಾಸಾ ವಿಜ್ಞಾನಿಗಳು ಸೋಲಾರ್‌ ಸ್ಟಾರ್ಮ್ ಅಪಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಪ್ರಕಾರ, ಸೌರ ಚಂಡಮಾರುತವು ಗಂಟೆಗೆ ಸುಮಾರು 1.6 ದಶಲಕ್ಷ ಕಿಲೋಮೀಟರ್ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಬಹುಶಃ ಅದರ ವೇಗ ಮತ್ತಷ್ಟು ಹೆಚ್ಚಾಗಲಿದೆ. ಸೌರ ಬಿರುಗಾಳಿ ಉಪಗ್ರಹ ಸಂಕೇತಗಳನ್ನು ಅಡ್ಡಿಪಡಿಸಬಹುದು. ಸೋಮವಾರ  ಅಥವಾ ಮಂಗಳವಾರ ಸೌರ ಬಿರುಗಾಳಿ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ನಾಸಾ ಹೇಳಿದೆ.

ಸ್ಪೇಸ್‌ವೆದರ್‌.ಕಾಮ್‌ ಸಂಸ್ಥೆ ಹೇಳುವ ಪ್ರಕಾರ ಸೌರ ಬಿರುಗಾಳಿ ವೇಳೆಯಲ್ಲಿ ಉತ್ತರ ಅಥವಾ ದಕ್ಷಿಣ ಧ್ರುವದ  ಜನರಿಗೆ ರಾತ್ರಿಯ ಸಮಯದಲ್ಲಿ ಪ್ರಕಾಶಮಾನವಾದ ಬೆಳಕು ಕಾಣಿಸಲಿದೆ. ಸೋಲಾರ್‌ ಸ್ಟಾರ್ಮ್ ಭೂಮಿಯ ಮೇಲಿನ ಜಿಪಿಎಸ್, ಮೊಬೈಲ್ ಫೋನ್ ಮತ್ತು ಉಪಗ್ರಹ ಸಂಪರ್ಕ ಜಾಲಕ್ಕೆ ಅಡಚಣೆ ಉಂಟಾಗಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಇತರ ರೇಡಿಯೋ ಫ್ರಿಕ್ವೆನ್ಸಿ ಸಂಚಾಲಿತ ಸಾಧನಗಳೂ ಕೂಡ ಕೆಲ ಹೊತ್ತು ಸ್ಥಗಿತವಾಗುವ ಸಾಧ್ಯತೆಗಳಿವೆ ಎಂದು ಅಂತರಾಷ್ಟ್ರೀಯ ವೆಬ್‌ಸೈಟ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಸೌರ ಬಿರುಗಾಳಿಯ ಹೊಡೆತದಿಂದ ಪವರ್‌ ಗ್ರಿಡ್‌ ಮತ್ತು ಅನಿಲ ಕೊಳವೆಗಳಿಗೂ ಇದೆ ಅಪಾಯ

ಸೌರ ಚಂಡಮಾರುತದ ಸಮಯದಲ್ಲಿ, ಬಲವಾದ ವಿದ್ಯುತ್ ಪ್ರವಾಹವು ಭೂಮಿಯ ಮೇಲ್ಮೈಗೆ ಹರಿಯುವುದರಿಂದ ಪವರ್ ಗ್ರಿಡ್ ವಿಫಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಭೂಮಿಯ ಹೊರಗಿನ ವಾತಾವರಣ ಬಿಸಿಯಾಗಬಹುದು. ಇದು ಉಪಗ್ರಹಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ವಿದ್ಯುತ್ ಲೈನ್‌ಗಳಲ್ಲಿ ಪ್ರವಾಹವು ಅಧಿಕವಾಗಿರಬಹುದು, ಇದು ಟ್ರಾನ್ಸ್‌ಫಾರ್ಮರ್‌ಗಳನ್ನು ಸಹ ಸ್ಫೋಟಿಸುವಷ್ಟು ಶಕ್ತಿಶಾಲಿಯಾಗಿರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಕೆಲವು ಸ್ಥಳಗಳಲ್ಲಿ, ತೈಲ ಮತ್ತು ಅನಿಲ ಪೈಪ್‌ಲೈನ್‌ಗಳ ಮೇಲೂ ಬಿರುಗಾಳಿ ಪರಿಣಾಮ ಉಂಟಾಗುತ್ತದೆ. ಹೈ ಫ್ರಿಕ್ವೆನ್ಸಿ ರೇಡಿಯೊ ಸಂವಹನದ ಮೇಲೆ ಸೋಲಾರ್‌ ಸ್ಟಾರ್ಮ್ ಪರಿಣಾಮ ಬೀರುವುದರಿಂದ ಜಿಪಿಎಸ್ ಮತ್ತು ಮೊಬೈಲ್‌ ನೆಟ್ವರ್ಕ್‌ಗಳು  ಸಹ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತವೆ.

ಸೌರ ಚಂಡಮಾರುತವು ಕೆಲವು ನಿಮಿಷಗಳಿಂದ ಕೆಲ ಗಂಟೆಗಳವರೆಗೆ ಪರಿಣಾಮ ಬೀರಲಿದೆ. ಭೂಮಿಯ ಕಾಂತೀಯ ಮೇಲ್ಮೈ ಮತ್ತು ವಾತಾವರಣದಲ್ಲಿ ಇದರ ಪರಿಣಾಮವು ಹಲವು ದಿನಗಳು ಅಥವಾ  ವಾರಗಳವರೆಗೆ ಇರುತ್ತದೆ ಎಂದು ಖಗೊಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

 ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...