Homeಮುಖಪುಟಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ : ಜಿಪಿಎಸ್‌, ಮೊಬೈಲ್ ನೆಟ್ವರ್ಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ಅಂತರಿಕ್ಷದಲ್ಲಿ ಉಂಟಾಗಿರುವ ಕೆಲವು ವಿದ್ಯಮಾನಗಳು ಭೂಮಿಯ ಮೇಲಿರುವವರ ಅರಿವಿಗೆ ಬರುವುದಿಲ್ಲ. ಕೆಲವೊಮ್ಮೆ ಬಾಹ್ಯಾಕಾಶ ಮಂಡಲದ ಬೆಳವಣಿಗೆಗಳು ಭೂಮಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಉಲ್ಕಾಪಾತ, ಗ್ರಹಣ, ಗ್ರಹಗಳ ಮುಖಮುಖಿ ಇನ್ನು ಕೆಲವು ವಿದ್ಯಮಾನಗಳು ಭುಮಿಯ ವಾತಾವರಣದ ಮೇಲೆ ತೀವ್ರ ಪರಿಣಾಮವನ್ನು ಬೀರುತ್ತವೆ. ಈಗ ನಭೋ ಮಂಡಲದಲ್ಲಿ ಉಂಟಾಗಿರುವ ಸೌರ ಚಂಡಮಾರುತ ಭೂಮಿಗೆ ಅಪ್ಪಳಿಸುತ್ತಿದ್ದು ನಾಸಾ ವಿಜ್ಞಾನಿಗಳು ಸೋಲಾರ್‌ ಸ್ಟಾರ್ಮ್ ಅಪಾಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಪ್ರಕಾರ, ಸೌರ ಚಂಡಮಾರುತವು ಗಂಟೆಗೆ ಸುಮಾರು 1.6 ದಶಲಕ್ಷ ಕಿಲೋಮೀಟರ್ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಬಹುಶಃ ಅದರ ವೇಗ ಮತ್ತಷ್ಟು ಹೆಚ್ಚಾಗಲಿದೆ. ಸೌರ ಬಿರುಗಾಳಿ ಉಪಗ್ರಹ ಸಂಕೇತಗಳನ್ನು ಅಡ್ಡಿಪಡಿಸಬಹುದು. ಸೋಮವಾರ  ಅಥವಾ ಮಂಗಳವಾರ ಸೌರ ಬಿರುಗಾಳಿ ಭೂಮಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ನಾಸಾ ಹೇಳಿದೆ.

ಸ್ಪೇಸ್‌ವೆದರ್‌.ಕಾಮ್‌ ಸಂಸ್ಥೆ ಹೇಳುವ ಪ್ರಕಾರ ಸೌರ ಬಿರುಗಾಳಿ ವೇಳೆಯಲ್ಲಿ ಉತ್ತರ ಅಥವಾ ದಕ್ಷಿಣ ಧ್ರುವದ  ಜನರಿಗೆ ರಾತ್ರಿಯ ಸಮಯದಲ್ಲಿ ಪ್ರಕಾಶಮಾನವಾದ ಬೆಳಕು ಕಾಣಿಸಲಿದೆ. ಸೋಲಾರ್‌ ಸ್ಟಾರ್ಮ್ ಭೂಮಿಯ ಮೇಲಿನ ಜಿಪಿಎಸ್, ಮೊಬೈಲ್ ಫೋನ್ ಮತ್ತು ಉಪಗ್ರಹ ಸಂಪರ್ಕ ಜಾಲಕ್ಕೆ ಅಡಚಣೆ ಉಂಟಾಗಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಇತರ ರೇಡಿಯೋ ಫ್ರಿಕ್ವೆನ್ಸಿ ಸಂಚಾಲಿತ ಸಾಧನಗಳೂ ಕೂಡ ಕೆಲ ಹೊತ್ತು ಸ್ಥಗಿತವಾಗುವ ಸಾಧ್ಯತೆಗಳಿವೆ ಎಂದು ಅಂತರಾಷ್ಟ್ರೀಯ ವೆಬ್‌ಸೈಟ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಸೌರ ಬಿರುಗಾಳಿಯ ಹೊಡೆತದಿಂದ ಪವರ್‌ ಗ್ರಿಡ್‌ ಮತ್ತು ಅನಿಲ ಕೊಳವೆಗಳಿಗೂ ಇದೆ ಅಪಾಯ

ಸೌರ ಚಂಡಮಾರುತದ ಸಮಯದಲ್ಲಿ, ಬಲವಾದ ವಿದ್ಯುತ್ ಪ್ರವಾಹವು ಭೂಮಿಯ ಮೇಲ್ಮೈಗೆ ಹರಿಯುವುದರಿಂದ ಪವರ್ ಗ್ರಿಡ್ ವಿಫಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಭೂಮಿಯ ಹೊರಗಿನ ವಾತಾವರಣ ಬಿಸಿಯಾಗಬಹುದು. ಇದು ಉಪಗ್ರಹಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ವಿದ್ಯುತ್ ಲೈನ್‌ಗಳಲ್ಲಿ ಪ್ರವಾಹವು ಅಧಿಕವಾಗಿರಬಹುದು, ಇದು ಟ್ರಾನ್ಸ್‌ಫಾರ್ಮರ್‌ಗಳನ್ನು ಸಹ ಸ್ಫೋಟಿಸುವಷ್ಟು ಶಕ್ತಿಶಾಲಿಯಾಗಿರಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಕೆಲವು ಸ್ಥಳಗಳಲ್ಲಿ, ತೈಲ ಮತ್ತು ಅನಿಲ ಪೈಪ್‌ಲೈನ್‌ಗಳ ಮೇಲೂ ಬಿರುಗಾಳಿ ಪರಿಣಾಮ ಉಂಟಾಗುತ್ತದೆ. ಹೈ ಫ್ರಿಕ್ವೆನ್ಸಿ ರೇಡಿಯೊ ಸಂವಹನದ ಮೇಲೆ ಸೋಲಾರ್‌ ಸ್ಟಾರ್ಮ್ ಪರಿಣಾಮ ಬೀರುವುದರಿಂದ ಜಿಪಿಎಸ್ ಮತ್ತು ಮೊಬೈಲ್‌ ನೆಟ್ವರ್ಕ್‌ಗಳು  ಸಹ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತವೆ.

ಸೌರ ಚಂಡಮಾರುತವು ಕೆಲವು ನಿಮಿಷಗಳಿಂದ ಕೆಲ ಗಂಟೆಗಳವರೆಗೆ ಪರಿಣಾಮ ಬೀರಲಿದೆ. ಭೂಮಿಯ ಕಾಂತೀಯ ಮೇಲ್ಮೈ ಮತ್ತು ವಾತಾವರಣದಲ್ಲಿ ಇದರ ಪರಿಣಾಮವು ಹಲವು ದಿನಗಳು ಅಥವಾ  ವಾರಗಳವರೆಗೆ ಇರುತ್ತದೆ ಎಂದು ಖಗೊಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

 ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...