ಶೋಪಿಯಾನದಲ್ಲಿ ಮೂವರು ಯುವಕರನ್ನು ಹತ್ಯೆ ಮಾಡಿದ್ದ ಘಟನೆಯಲ್ಲಿ ಕಾನೂನು ಉಲ್ಲಂಘನೆ ಕಂಡುಬಂದಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಸೈನಿಕರು ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ(AFSPA) ಉಲ್ಲಂಘಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಿಲಿಟರಿ ಮೂಲಗಳು ತಿಳಿಸಿವೆ.
ಜುಲೈ 18 ರಂದು ಸೈನ್ಯವು ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಎಂಬ ಅನುಮಾನದ ಮೇಲೆ ಮೂವರು ಯುವಕರನ್ನು ಕೊಂದಿತ್ತು. ಈ ಘಟನೆಯ ತನಿಖೆ ನಡೆಸಲಾಗಿತ್ತು.
ಇದನ್ನೂ ಓದಿ: ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ
ಮಿಲಿಟರಿ ದಳದಲ್ಲಿ ನಡೆಸಿದ ಆಂತರಿಕ ತನಿಖೆಯಲ್ಲಿ ಈ ವಿಷಯ ಕಂಡುಕೊಂಡಿದ್ದು, ಯುವಕರನ್ನು ನಕಲಿ ಎನ್ಕೌಂಟರ್ ಮೂಲಕ ಹತ್ಯೆಗೈಯ್ಯಲಾಗಿತ್ತು ಎಂಬ ಆರೋಪವನ್ನು ಅವರ ಕುಟುಂಬಗಳು ಮಾಡಿದ್ದವು. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದರು. ಆಗ ಸೈನ್ಯವು ಈ ವಿಷಯವನ್ನು ಪರಿಶೀಲಿಸಿತ್ತು.
1990 ರ AFSPA ಕಾಯ್ದೆಯು ಸೈನ್ಯವು ಏನು ಮಾಡಬಹುದು ಮತ್ತು ಏನು ಮಾಡಬಾರದು ಎಂಬ ಬಗ್ಗೆ ಸ್ಪಷ್ಟವಾಗಿ ವ್ಯಾಖ್ಯಾನಿಸುತ್ತದೆ. ಈ ಕಾಯ್ದೆಯ ಉಲ್ಲಂಘನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ಕಂಡುಬಂದಿದೆ ಎಂದು ಸೈನ್ಯವು ತಿಳಿಸಿದೆ.
ರಾಜೌರಿಯ ನಿವಾಸಿಗಳಾದ ಇಮ್ತಿಯಾಜ್ ಅಹ್ಮದ್, ಅಕ್ಬರ್ ಅಹ್ಮದ್ ಮತ್ತು ಮೊಹಾದ್ ಇಬಾರ್ ಎಂಬವರನ್ನು ಸೈನ್ಯದಿಂದ ಕೊಲ್ಲಲ್ಪಟ್ಟಿದ್ದರು.
ಇದನ್ನೂ ಓದಿ: ಲಡಾಖ್ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ