Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

"ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು.... ಹಸಿದ ಅಥವಾ ಗಾಯಗೊಂಡ ಮಕ್ಕಳು... ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ" ಎಂದ ಕಾರ್ಟರ್‌ ಬರೆದಿದ್ದರು.

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಸ್ಥಳಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೆ ಉತ್ತರಿಸಿದ ಅವರು, ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. “ವಿನಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು”. ಅವರು ಆರಾಮ ಕುರ್ಚಿಗಳಲ್ಲಿ ಕುಳಿತು ಟೀಕಿಸುವುದನ್ನು ಬಿಟ್ಟು ತಾವೇನು ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಹೇಳಿದ್ದರು.

ಮುಂದುವರಿದು ತುಷಾರ್ ಮೆಹ್ತಾರವರು ರಣಹದ್ದು ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಕೆವಿನ್ ಕಾರ್ಟರ್ ಅವರು ಸುಡಾನ್‌ನಲ್ಲಿನ ಕ್ಷಾಮದ ಸಮಯದಲ್ಲಿ ತೆಗೆದ ಛಾಯಾಚಿತ್ರದ ಕಥೆಯನ್ನು ನಿರೂಪಿಸಲು ಹೋದರು.

“1983 ರಲ್ಲಿ ಸುಡಾನ್‌ಗೆ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕ ಹೋದರು. ತೀವ್ರ ಬರಗಾಲವಾದ್ದರಿಂದ ಅಲ್ಲೊಂದು ಅಪೌಷ್ಠಿಕತೆ, ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಇತ್ತು. ಅದರ ಹಿಂದೆ ಮಗು ಸಾಯುವುದನ್ನೇ ರಣಹದ್ದು ಕಾಯುತ್ತಿತ್ತು. ಅವರು ಆ ಫೋಟೊ ತೆಗೆದರು ಮತ್ತು ಅದನ್ನು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟಿಸಲಾಯಿತು. ಅವನಿಗೆ ಪುಲಿಟ್ಜೆರ್ ಪ್ರಶಸ್ತಿ ನೀಡಲಾಯಿತು. ಆತ 4 ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡ. ಅದಕ್ಕೂ ಮೊದಲು ಪತ್ರಕರ್ತರೊಬ್ಬರು ಮಗುವಿಗೆ ಏನಾಯಿತು ಎಂದು ಕೆವಿನ್ನನ್ನು ಕೇಳಿದರು? ನನಗೆ ಗೊತ್ತಿಲ್ಲ, ನಾನು ಮನೆಗೆ ಮರಳಿದೆ ಎಂದು ಆತ ಹೇಳಿದನು. ನಂತರ ಆ ಪತ್ರಕತ್ರ ಎಷ್ಟು ರಣಹದ್ದುಗಳಿದ್ದವು ಎಂದು ಕೇಳಿದನು. ಕೆವಿನ್ ಒಂದು ಎಂದನು. ಆಗ ಪತ್ರಕರ್ತ ಇಲ್ಲ, ಎರಡು ರಣಹದ್ದುಗಳಿದ್ದವು, ಅದರಲ್ಲಿ ಒಂದು ಕ್ಯಾಮೆರಾವನ್ನು ಹಿಡಿದಿತ್ತು ಎಂದನು” ಎಂಬ ಕತೆಯನ್ನು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ನಿರೂಪಿಸಿದ ಈ ಕಥೆಯು ಪ್ರಧಾನಿ ಮೋದಿ ಬೆಂಬಲಿಗರು ಹರಡಿದ ಸುಳ್ಳು ವಾಟ್ಸಾಪ್ ಸಂದೇಶವಾಗಿದೆ. ಯಾರಾದರೂ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರೆ ಈ ಕಥೆಯನ್ನು ಹೇಳಿ ನೀವೇನು ಮಾಡುತ್ತಿದ್ದೀರಿ ಎಂದು ಕೇಳುತ್ತಾರೆ.

ಸೂಡಾನ್‌ನಲ್ಲಿ ನಿಜವಾಗಿ ನಡೆದಿದ್ದೇನು?

1993ರಲ್ಲಿ ಆಹಾರ ಕ್ಯಾಂಪನ್ನು ತಲುಪಲು ತೆವಳುತ್ತಿರುವ ಸುಡಾನಿನ ನಿಶ್ಶಕ್ತ ಮಗುವೊಂದರ ಹತ್ತಿರ ರಣಹದ್ದು ಕಾಯುತ್ತಿರುವ ಚಿತ್ರ ತೆಗೆದ ಕೆವಿನ್ ನಂತರ ಆ ರಣಹದ್ದನ್ನು ಓಡಿಸಿದ್ದಾನೆ. ಆತ 20 ನಿಮಿಷ ಅಲ್ಲೆ ಕಾದಿದ್ದಾನೆ. ಆತನಿಗೆ ರೋಗದ ಕಾರಣಕ್ಕಾಗಿ ಮಗುವನ್ನು ಮುಟ್ಟಬಾರದೆಂದು ಸೂಚಿಸಲಾಗಿತ್ತು. ಆ ಮಗು ಕೋಂಗ್ ಎನ್‌ಯೋಂಗ್ ಈ ಘಟನೆ ನಡೆದ ಬಳಿಕ ಬದುಕುಳಿಯಿತು. 14 ವರ್ಷಗಳ ನಂತರ ಜ್ವರದಿಂದ ಸಾವಿಗೀಡಾಯಿತು.

ಆದರೆ ಎಲ್ಲಿಯೂ ಆ ಸಮಯದಲ್ಲಿ ಇನ್ನೊಬ್ಬ ಪತ್ರಕರ್ತ ಕೆವಿನ್‌ನನ್ನು ಪ್ರಶ್ನಿಸಿದ್ದರ ಉಲ್ಲೇಖವಿಲ್ಲ.
ಕಾರ್ಟರ್ ಆತ್ಮಹತ್ಯೆಯು ಆಘಾತದ ಬಳಿಕದ ಅಸ್ವಸ್ಥತೆ (post traumatic disorders)ಗಳಿಂದ ಉಂಟಾಗಿತ್ತೆಂದು ಅವರ ಅಂತಿಮ ಪತ್ರದಿಂದ ಗೊತ್ತಾಗುತ್ತದೆ. ಅವರು ತುಂಬಾ ನೊಂದಿದ್ದರು.

ಅವರ ಪತ್ರದ ಮುಖ್ಯಾಂಶ ಹೀಗಿದೆ: “ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು…. ಹಸಿದ ಅಥವಾ ಗಾಯಗೊಂಡ ಮಕ್ಕಳು… ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ”.

ಅವರ ಈ ಚಿತ್ರವು ಸುಡಾನಿನ ಭಯಂಕರ ಬರಗಾಲದ ಬಗ್ಗೆ ವಿಶ್ವಾದ್ಯಂತ ಗಮನ ಸೆಳೆದಿತ್ತು. ಕಾರ್ಟರ್ ಅವರನ್ನು ಇಂದಿಗೂ ಅವರ ವೃತ್ತಿಯಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತಿದೆ. ಅಂತವರ ಮೇಲೆ ಮತ್ತು ವಲಸಿಗರ ಪರವಾಗಿ ಧ್ವನಿ ಎತ್ತಿರುವವರ ಮೇಲೆ ಹಿಂಸಾಸಂತೋಷ, ಅವಕಾಶವಾದ, ಅಸಹಾನುಭೂತಿ ಇಂತಹಾ ಆರೋಪ ಮಾಡಿ ಇಂತಹಾ ವರದಿಗಳ ಮೇಲೆಯೇ ಅವಲಂಬಿಸಿದ್ದಾರೆ ಎಂದು ತುಷಾರ್ ಮೆಹ್ತಾ ಆರೋಪಣೆ ಮಾಡುವುದು ಕೆಟ್ಟ ಅಭಿರುಚಿ ಮಾತ್ರವಲ್ಲ ನೈತಿಕವಾಗಿಯೂ ತಪ್ಪು.

ಒಂದು ನಿರ್ಭೀತ, ಸ್ವತಂತ್ರ ಮಾಧ್ಯಮವು ಒಂದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ನಿರ್ಣಾಯಕವಾದುದು. ಅಂತವರ ಜವಾಬ್ದಾರಿಯುತ ವರದಿಗಾರಿಕೆಯೇ ವಲಸೆ ಕಾರ್ಮಿಕರ ಘೋರ ಸಂಕಷ್ಟಗಳನ್ನು ಬೆಳಕಿಗೆ ತಂದಿರುವುದು ಎಂಬುದನ್ನು ಮರೆಯಬಾರದು.


ಇದನ್ನೂ ಓದಿ: ಪತ್ರಕರ್ತರು, ರಣಹದ್ದುಗಳು ಹಾಗೂ ಮತ್ತೊಬ್ಬ ಸಾಲಿಸಿಟರ್ ಜನರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...