Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

"ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು.... ಹಸಿದ ಅಥವಾ ಗಾಯಗೊಂಡ ಮಕ್ಕಳು... ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ" ಎಂದ ಕಾರ್ಟರ್‌ ಬರೆದಿದ್ದರು.

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಸ್ಥಳಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೆ ಉತ್ತರಿಸಿದ ಅವರು, ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. “ವಿನಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು”. ಅವರು ಆರಾಮ ಕುರ್ಚಿಗಳಲ್ಲಿ ಕುಳಿತು ಟೀಕಿಸುವುದನ್ನು ಬಿಟ್ಟು ತಾವೇನು ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಹೇಳಿದ್ದರು.

ಮುಂದುವರಿದು ತುಷಾರ್ ಮೆಹ್ತಾರವರು ರಣಹದ್ದು ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಕೆವಿನ್ ಕಾರ್ಟರ್ ಅವರು ಸುಡಾನ್‌ನಲ್ಲಿನ ಕ್ಷಾಮದ ಸಮಯದಲ್ಲಿ ತೆಗೆದ ಛಾಯಾಚಿತ್ರದ ಕಥೆಯನ್ನು ನಿರೂಪಿಸಲು ಹೋದರು.

“1983 ರಲ್ಲಿ ಸುಡಾನ್‌ಗೆ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕ ಹೋದರು. ತೀವ್ರ ಬರಗಾಲವಾದ್ದರಿಂದ ಅಲ್ಲೊಂದು ಅಪೌಷ್ಠಿಕತೆ, ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಇತ್ತು. ಅದರ ಹಿಂದೆ ಮಗು ಸಾಯುವುದನ್ನೇ ರಣಹದ್ದು ಕಾಯುತ್ತಿತ್ತು. ಅವರು ಆ ಫೋಟೊ ತೆಗೆದರು ಮತ್ತು ಅದನ್ನು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟಿಸಲಾಯಿತು. ಅವನಿಗೆ ಪುಲಿಟ್ಜೆರ್ ಪ್ರಶಸ್ತಿ ನೀಡಲಾಯಿತು. ಆತ 4 ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡ. ಅದಕ್ಕೂ ಮೊದಲು ಪತ್ರಕರ್ತರೊಬ್ಬರು ಮಗುವಿಗೆ ಏನಾಯಿತು ಎಂದು ಕೆವಿನ್ನನ್ನು ಕೇಳಿದರು? ನನಗೆ ಗೊತ್ತಿಲ್ಲ, ನಾನು ಮನೆಗೆ ಮರಳಿದೆ ಎಂದು ಆತ ಹೇಳಿದನು. ನಂತರ ಆ ಪತ್ರಕತ್ರ ಎಷ್ಟು ರಣಹದ್ದುಗಳಿದ್ದವು ಎಂದು ಕೇಳಿದನು. ಕೆವಿನ್ ಒಂದು ಎಂದನು. ಆಗ ಪತ್ರಕರ್ತ ಇಲ್ಲ, ಎರಡು ರಣಹದ್ದುಗಳಿದ್ದವು, ಅದರಲ್ಲಿ ಒಂದು ಕ್ಯಾಮೆರಾವನ್ನು ಹಿಡಿದಿತ್ತು ಎಂದನು” ಎಂಬ ಕತೆಯನ್ನು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ನಿರೂಪಿಸಿದ ಈ ಕಥೆಯು ಪ್ರಧಾನಿ ಮೋದಿ ಬೆಂಬಲಿಗರು ಹರಡಿದ ಸುಳ್ಳು ವಾಟ್ಸಾಪ್ ಸಂದೇಶವಾಗಿದೆ. ಯಾರಾದರೂ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರೆ ಈ ಕಥೆಯನ್ನು ಹೇಳಿ ನೀವೇನು ಮಾಡುತ್ತಿದ್ದೀರಿ ಎಂದು ಕೇಳುತ್ತಾರೆ.

ಸೂಡಾನ್‌ನಲ್ಲಿ ನಿಜವಾಗಿ ನಡೆದಿದ್ದೇನು?

1993ರಲ್ಲಿ ಆಹಾರ ಕ್ಯಾಂಪನ್ನು ತಲುಪಲು ತೆವಳುತ್ತಿರುವ ಸುಡಾನಿನ ನಿಶ್ಶಕ್ತ ಮಗುವೊಂದರ ಹತ್ತಿರ ರಣಹದ್ದು ಕಾಯುತ್ತಿರುವ ಚಿತ್ರ ತೆಗೆದ ಕೆವಿನ್ ನಂತರ ಆ ರಣಹದ್ದನ್ನು ಓಡಿಸಿದ್ದಾನೆ. ಆತ 20 ನಿಮಿಷ ಅಲ್ಲೆ ಕಾದಿದ್ದಾನೆ. ಆತನಿಗೆ ರೋಗದ ಕಾರಣಕ್ಕಾಗಿ ಮಗುವನ್ನು ಮುಟ್ಟಬಾರದೆಂದು ಸೂಚಿಸಲಾಗಿತ್ತು. ಆ ಮಗು ಕೋಂಗ್ ಎನ್‌ಯೋಂಗ್ ಈ ಘಟನೆ ನಡೆದ ಬಳಿಕ ಬದುಕುಳಿಯಿತು. 14 ವರ್ಷಗಳ ನಂತರ ಜ್ವರದಿಂದ ಸಾವಿಗೀಡಾಯಿತು.

ಆದರೆ ಎಲ್ಲಿಯೂ ಆ ಸಮಯದಲ್ಲಿ ಇನ್ನೊಬ್ಬ ಪತ್ರಕರ್ತ ಕೆವಿನ್‌ನನ್ನು ಪ್ರಶ್ನಿಸಿದ್ದರ ಉಲ್ಲೇಖವಿಲ್ಲ.
ಕಾರ್ಟರ್ ಆತ್ಮಹತ್ಯೆಯು ಆಘಾತದ ಬಳಿಕದ ಅಸ್ವಸ್ಥತೆ (post traumatic disorders)ಗಳಿಂದ ಉಂಟಾಗಿತ್ತೆಂದು ಅವರ ಅಂತಿಮ ಪತ್ರದಿಂದ ಗೊತ್ತಾಗುತ್ತದೆ. ಅವರು ತುಂಬಾ ನೊಂದಿದ್ದರು.

ಅವರ ಪತ್ರದ ಮುಖ್ಯಾಂಶ ಹೀಗಿದೆ: “ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು…. ಹಸಿದ ಅಥವಾ ಗಾಯಗೊಂಡ ಮಕ್ಕಳು… ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ”.

ಅವರ ಈ ಚಿತ್ರವು ಸುಡಾನಿನ ಭಯಂಕರ ಬರಗಾಲದ ಬಗ್ಗೆ ವಿಶ್ವಾದ್ಯಂತ ಗಮನ ಸೆಳೆದಿತ್ತು. ಕಾರ್ಟರ್ ಅವರನ್ನು ಇಂದಿಗೂ ಅವರ ವೃತ್ತಿಯಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತಿದೆ. ಅಂತವರ ಮೇಲೆ ಮತ್ತು ವಲಸಿಗರ ಪರವಾಗಿ ಧ್ವನಿ ಎತ್ತಿರುವವರ ಮೇಲೆ ಹಿಂಸಾಸಂತೋಷ, ಅವಕಾಶವಾದ, ಅಸಹಾನುಭೂತಿ ಇಂತಹಾ ಆರೋಪ ಮಾಡಿ ಇಂತಹಾ ವರದಿಗಳ ಮೇಲೆಯೇ ಅವಲಂಬಿಸಿದ್ದಾರೆ ಎಂದು ತುಷಾರ್ ಮೆಹ್ತಾ ಆರೋಪಣೆ ಮಾಡುವುದು ಕೆಟ್ಟ ಅಭಿರುಚಿ ಮಾತ್ರವಲ್ಲ ನೈತಿಕವಾಗಿಯೂ ತಪ್ಪು.

ಒಂದು ನಿರ್ಭೀತ, ಸ್ವತಂತ್ರ ಮಾಧ್ಯಮವು ಒಂದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ನಿರ್ಣಾಯಕವಾದುದು. ಅಂತವರ ಜವಾಬ್ದಾರಿಯುತ ವರದಿಗಾರಿಕೆಯೇ ವಲಸೆ ಕಾರ್ಮಿಕರ ಘೋರ ಸಂಕಷ್ಟಗಳನ್ನು ಬೆಳಕಿಗೆ ತಂದಿರುವುದು ಎಂಬುದನ್ನು ಮರೆಯಬಾರದು.


ಇದನ್ನೂ ಓದಿ: ಪತ್ರಕರ್ತರು, ರಣಹದ್ದುಗಳು ಹಾಗೂ ಮತ್ತೊಬ್ಬ ಸಾಲಿಸಿಟರ್ ಜನರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...