Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

"ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು.... ಹಸಿದ ಅಥವಾ ಗಾಯಗೊಂಡ ಮಕ್ಕಳು... ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ" ಎಂದ ಕಾರ್ಟರ್‌ ಬರೆದಿದ್ದರು.

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಸ್ಥಳಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೆ ಉತ್ತರಿಸಿದ ಅವರು, ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. “ವಿನಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು”. ಅವರು ಆರಾಮ ಕುರ್ಚಿಗಳಲ್ಲಿ ಕುಳಿತು ಟೀಕಿಸುವುದನ್ನು ಬಿಟ್ಟು ತಾವೇನು ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಹೇಳಿದ್ದರು.

ಮುಂದುವರಿದು ತುಷಾರ್ ಮೆಹ್ತಾರವರು ರಣಹದ್ದು ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಕೆವಿನ್ ಕಾರ್ಟರ್ ಅವರು ಸುಡಾನ್‌ನಲ್ಲಿನ ಕ್ಷಾಮದ ಸಮಯದಲ್ಲಿ ತೆಗೆದ ಛಾಯಾಚಿತ್ರದ ಕಥೆಯನ್ನು ನಿರೂಪಿಸಲು ಹೋದರು.

“1983 ರಲ್ಲಿ ಸುಡಾನ್‌ಗೆ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕ ಹೋದರು. ತೀವ್ರ ಬರಗಾಲವಾದ್ದರಿಂದ ಅಲ್ಲೊಂದು ಅಪೌಷ್ಠಿಕತೆ, ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಇತ್ತು. ಅದರ ಹಿಂದೆ ಮಗು ಸಾಯುವುದನ್ನೇ ರಣಹದ್ದು ಕಾಯುತ್ತಿತ್ತು. ಅವರು ಆ ಫೋಟೊ ತೆಗೆದರು ಮತ್ತು ಅದನ್ನು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟಿಸಲಾಯಿತು. ಅವನಿಗೆ ಪುಲಿಟ್ಜೆರ್ ಪ್ರಶಸ್ತಿ ನೀಡಲಾಯಿತು. ಆತ 4 ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡ. ಅದಕ್ಕೂ ಮೊದಲು ಪತ್ರಕರ್ತರೊಬ್ಬರು ಮಗುವಿಗೆ ಏನಾಯಿತು ಎಂದು ಕೆವಿನ್ನನ್ನು ಕೇಳಿದರು? ನನಗೆ ಗೊತ್ತಿಲ್ಲ, ನಾನು ಮನೆಗೆ ಮರಳಿದೆ ಎಂದು ಆತ ಹೇಳಿದನು. ನಂತರ ಆ ಪತ್ರಕತ್ರ ಎಷ್ಟು ರಣಹದ್ದುಗಳಿದ್ದವು ಎಂದು ಕೇಳಿದನು. ಕೆವಿನ್ ಒಂದು ಎಂದನು. ಆಗ ಪತ್ರಕರ್ತ ಇಲ್ಲ, ಎರಡು ರಣಹದ್ದುಗಳಿದ್ದವು, ಅದರಲ್ಲಿ ಒಂದು ಕ್ಯಾಮೆರಾವನ್ನು ಹಿಡಿದಿತ್ತು ಎಂದನು” ಎಂಬ ಕತೆಯನ್ನು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ನಿರೂಪಿಸಿದ ಈ ಕಥೆಯು ಪ್ರಧಾನಿ ಮೋದಿ ಬೆಂಬಲಿಗರು ಹರಡಿದ ಸುಳ್ಳು ವಾಟ್ಸಾಪ್ ಸಂದೇಶವಾಗಿದೆ. ಯಾರಾದರೂ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರೆ ಈ ಕಥೆಯನ್ನು ಹೇಳಿ ನೀವೇನು ಮಾಡುತ್ತಿದ್ದೀರಿ ಎಂದು ಕೇಳುತ್ತಾರೆ.

ಸೂಡಾನ್‌ನಲ್ಲಿ ನಿಜವಾಗಿ ನಡೆದಿದ್ದೇನು?

1993ರಲ್ಲಿ ಆಹಾರ ಕ್ಯಾಂಪನ್ನು ತಲುಪಲು ತೆವಳುತ್ತಿರುವ ಸುಡಾನಿನ ನಿಶ್ಶಕ್ತ ಮಗುವೊಂದರ ಹತ್ತಿರ ರಣಹದ್ದು ಕಾಯುತ್ತಿರುವ ಚಿತ್ರ ತೆಗೆದ ಕೆವಿನ್ ನಂತರ ಆ ರಣಹದ್ದನ್ನು ಓಡಿಸಿದ್ದಾನೆ. ಆತ 20 ನಿಮಿಷ ಅಲ್ಲೆ ಕಾದಿದ್ದಾನೆ. ಆತನಿಗೆ ರೋಗದ ಕಾರಣಕ್ಕಾಗಿ ಮಗುವನ್ನು ಮುಟ್ಟಬಾರದೆಂದು ಸೂಚಿಸಲಾಗಿತ್ತು. ಆ ಮಗು ಕೋಂಗ್ ಎನ್‌ಯೋಂಗ್ ಈ ಘಟನೆ ನಡೆದ ಬಳಿಕ ಬದುಕುಳಿಯಿತು. 14 ವರ್ಷಗಳ ನಂತರ ಜ್ವರದಿಂದ ಸಾವಿಗೀಡಾಯಿತು.

ಆದರೆ ಎಲ್ಲಿಯೂ ಆ ಸಮಯದಲ್ಲಿ ಇನ್ನೊಬ್ಬ ಪತ್ರಕರ್ತ ಕೆವಿನ್‌ನನ್ನು ಪ್ರಶ್ನಿಸಿದ್ದರ ಉಲ್ಲೇಖವಿಲ್ಲ.
ಕಾರ್ಟರ್ ಆತ್ಮಹತ್ಯೆಯು ಆಘಾತದ ಬಳಿಕದ ಅಸ್ವಸ್ಥತೆ (post traumatic disorders)ಗಳಿಂದ ಉಂಟಾಗಿತ್ತೆಂದು ಅವರ ಅಂತಿಮ ಪತ್ರದಿಂದ ಗೊತ್ತಾಗುತ್ತದೆ. ಅವರು ತುಂಬಾ ನೊಂದಿದ್ದರು.

ಅವರ ಪತ್ರದ ಮುಖ್ಯಾಂಶ ಹೀಗಿದೆ: “ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು…. ಹಸಿದ ಅಥವಾ ಗಾಯಗೊಂಡ ಮಕ್ಕಳು… ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ”.

ಅವರ ಈ ಚಿತ್ರವು ಸುಡಾನಿನ ಭಯಂಕರ ಬರಗಾಲದ ಬಗ್ಗೆ ವಿಶ್ವಾದ್ಯಂತ ಗಮನ ಸೆಳೆದಿತ್ತು. ಕಾರ್ಟರ್ ಅವರನ್ನು ಇಂದಿಗೂ ಅವರ ವೃತ್ತಿಯಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತಿದೆ. ಅಂತವರ ಮೇಲೆ ಮತ್ತು ವಲಸಿಗರ ಪರವಾಗಿ ಧ್ವನಿ ಎತ್ತಿರುವವರ ಮೇಲೆ ಹಿಂಸಾಸಂತೋಷ, ಅವಕಾಶವಾದ, ಅಸಹಾನುಭೂತಿ ಇಂತಹಾ ಆರೋಪ ಮಾಡಿ ಇಂತಹಾ ವರದಿಗಳ ಮೇಲೆಯೇ ಅವಲಂಬಿಸಿದ್ದಾರೆ ಎಂದು ತುಷಾರ್ ಮೆಹ್ತಾ ಆರೋಪಣೆ ಮಾಡುವುದು ಕೆಟ್ಟ ಅಭಿರುಚಿ ಮಾತ್ರವಲ್ಲ ನೈತಿಕವಾಗಿಯೂ ತಪ್ಪು.

ಒಂದು ನಿರ್ಭೀತ, ಸ್ವತಂತ್ರ ಮಾಧ್ಯಮವು ಒಂದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ನಿರ್ಣಾಯಕವಾದುದು. ಅಂತವರ ಜವಾಬ್ದಾರಿಯುತ ವರದಿಗಾರಿಕೆಯೇ ವಲಸೆ ಕಾರ್ಮಿಕರ ಘೋರ ಸಂಕಷ್ಟಗಳನ್ನು ಬೆಳಕಿಗೆ ತಂದಿರುವುದು ಎಂಬುದನ್ನು ಮರೆಯಬಾರದು.


ಇದನ್ನೂ ಓದಿ: ಪತ್ರಕರ್ತರು, ರಣಹದ್ದುಗಳು ಹಾಗೂ ಮತ್ತೊಬ್ಬ ಸಾಲಿಸಿಟರ್ ಜನರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...