Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

"ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು.... ಹಸಿದ ಅಥವಾ ಗಾಯಗೊಂಡ ಮಕ್ಕಳು... ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ" ಎಂದ ಕಾರ್ಟರ್‌ ಬರೆದಿದ್ದರು.

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಸ್ಥಳಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೆ ಉತ್ತರಿಸಿದ ಅವರು, ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. “ವಿನಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು”. ಅವರು ಆರಾಮ ಕುರ್ಚಿಗಳಲ್ಲಿ ಕುಳಿತು ಟೀಕಿಸುವುದನ್ನು ಬಿಟ್ಟು ತಾವೇನು ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಹೇಳಿದ್ದರು.

ಮುಂದುವರಿದು ತುಷಾರ್ ಮೆಹ್ತಾರವರು ರಣಹದ್ದು ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಕೆವಿನ್ ಕಾರ್ಟರ್ ಅವರು ಸುಡಾನ್‌ನಲ್ಲಿನ ಕ್ಷಾಮದ ಸಮಯದಲ್ಲಿ ತೆಗೆದ ಛಾಯಾಚಿತ್ರದ ಕಥೆಯನ್ನು ನಿರೂಪಿಸಲು ಹೋದರು.

“1983 ರಲ್ಲಿ ಸುಡಾನ್‌ಗೆ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕ ಹೋದರು. ತೀವ್ರ ಬರಗಾಲವಾದ್ದರಿಂದ ಅಲ್ಲೊಂದು ಅಪೌಷ್ಠಿಕತೆ, ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಇತ್ತು. ಅದರ ಹಿಂದೆ ಮಗು ಸಾಯುವುದನ್ನೇ ರಣಹದ್ದು ಕಾಯುತ್ತಿತ್ತು. ಅವರು ಆ ಫೋಟೊ ತೆಗೆದರು ಮತ್ತು ಅದನ್ನು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟಿಸಲಾಯಿತು. ಅವನಿಗೆ ಪುಲಿಟ್ಜೆರ್ ಪ್ರಶಸ್ತಿ ನೀಡಲಾಯಿತು. ಆತ 4 ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡ. ಅದಕ್ಕೂ ಮೊದಲು ಪತ್ರಕರ್ತರೊಬ್ಬರು ಮಗುವಿಗೆ ಏನಾಯಿತು ಎಂದು ಕೆವಿನ್ನನ್ನು ಕೇಳಿದರು? ನನಗೆ ಗೊತ್ತಿಲ್ಲ, ನಾನು ಮನೆಗೆ ಮರಳಿದೆ ಎಂದು ಆತ ಹೇಳಿದನು. ನಂತರ ಆ ಪತ್ರಕತ್ರ ಎಷ್ಟು ರಣಹದ್ದುಗಳಿದ್ದವು ಎಂದು ಕೇಳಿದನು. ಕೆವಿನ್ ಒಂದು ಎಂದನು. ಆಗ ಪತ್ರಕರ್ತ ಇಲ್ಲ, ಎರಡು ರಣಹದ್ದುಗಳಿದ್ದವು, ಅದರಲ್ಲಿ ಒಂದು ಕ್ಯಾಮೆರಾವನ್ನು ಹಿಡಿದಿತ್ತು ಎಂದನು” ಎಂಬ ಕತೆಯನ್ನು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ನಿರೂಪಿಸಿದ ಈ ಕಥೆಯು ಪ್ರಧಾನಿ ಮೋದಿ ಬೆಂಬಲಿಗರು ಹರಡಿದ ಸುಳ್ಳು ವಾಟ್ಸಾಪ್ ಸಂದೇಶವಾಗಿದೆ. ಯಾರಾದರೂ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರೆ ಈ ಕಥೆಯನ್ನು ಹೇಳಿ ನೀವೇನು ಮಾಡುತ್ತಿದ್ದೀರಿ ಎಂದು ಕೇಳುತ್ತಾರೆ.

ಸೂಡಾನ್‌ನಲ್ಲಿ ನಿಜವಾಗಿ ನಡೆದಿದ್ದೇನು?

1993ರಲ್ಲಿ ಆಹಾರ ಕ್ಯಾಂಪನ್ನು ತಲುಪಲು ತೆವಳುತ್ತಿರುವ ಸುಡಾನಿನ ನಿಶ್ಶಕ್ತ ಮಗುವೊಂದರ ಹತ್ತಿರ ರಣಹದ್ದು ಕಾಯುತ್ತಿರುವ ಚಿತ್ರ ತೆಗೆದ ಕೆವಿನ್ ನಂತರ ಆ ರಣಹದ್ದನ್ನು ಓಡಿಸಿದ್ದಾನೆ. ಆತ 20 ನಿಮಿಷ ಅಲ್ಲೆ ಕಾದಿದ್ದಾನೆ. ಆತನಿಗೆ ರೋಗದ ಕಾರಣಕ್ಕಾಗಿ ಮಗುವನ್ನು ಮುಟ್ಟಬಾರದೆಂದು ಸೂಚಿಸಲಾಗಿತ್ತು. ಆ ಮಗು ಕೋಂಗ್ ಎನ್‌ಯೋಂಗ್ ಈ ಘಟನೆ ನಡೆದ ಬಳಿಕ ಬದುಕುಳಿಯಿತು. 14 ವರ್ಷಗಳ ನಂತರ ಜ್ವರದಿಂದ ಸಾವಿಗೀಡಾಯಿತು.

ಆದರೆ ಎಲ್ಲಿಯೂ ಆ ಸಮಯದಲ್ಲಿ ಇನ್ನೊಬ್ಬ ಪತ್ರಕರ್ತ ಕೆವಿನ್‌ನನ್ನು ಪ್ರಶ್ನಿಸಿದ್ದರ ಉಲ್ಲೇಖವಿಲ್ಲ.
ಕಾರ್ಟರ್ ಆತ್ಮಹತ್ಯೆಯು ಆಘಾತದ ಬಳಿಕದ ಅಸ್ವಸ್ಥತೆ (post traumatic disorders)ಗಳಿಂದ ಉಂಟಾಗಿತ್ತೆಂದು ಅವರ ಅಂತಿಮ ಪತ್ರದಿಂದ ಗೊತ್ತಾಗುತ್ತದೆ. ಅವರು ತುಂಬಾ ನೊಂದಿದ್ದರು.

ಅವರ ಪತ್ರದ ಮುಖ್ಯಾಂಶ ಹೀಗಿದೆ: “ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು…. ಹಸಿದ ಅಥವಾ ಗಾಯಗೊಂಡ ಮಕ್ಕಳು… ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ”.

ಅವರ ಈ ಚಿತ್ರವು ಸುಡಾನಿನ ಭಯಂಕರ ಬರಗಾಲದ ಬಗ್ಗೆ ವಿಶ್ವಾದ್ಯಂತ ಗಮನ ಸೆಳೆದಿತ್ತು. ಕಾರ್ಟರ್ ಅವರನ್ನು ಇಂದಿಗೂ ಅವರ ವೃತ್ತಿಯಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತಿದೆ. ಅಂತವರ ಮೇಲೆ ಮತ್ತು ವಲಸಿಗರ ಪರವಾಗಿ ಧ್ವನಿ ಎತ್ತಿರುವವರ ಮೇಲೆ ಹಿಂಸಾಸಂತೋಷ, ಅವಕಾಶವಾದ, ಅಸಹಾನುಭೂತಿ ಇಂತಹಾ ಆರೋಪ ಮಾಡಿ ಇಂತಹಾ ವರದಿಗಳ ಮೇಲೆಯೇ ಅವಲಂಬಿಸಿದ್ದಾರೆ ಎಂದು ತುಷಾರ್ ಮೆಹ್ತಾ ಆರೋಪಣೆ ಮಾಡುವುದು ಕೆಟ್ಟ ಅಭಿರುಚಿ ಮಾತ್ರವಲ್ಲ ನೈತಿಕವಾಗಿಯೂ ತಪ್ಪು.

ಒಂದು ನಿರ್ಭೀತ, ಸ್ವತಂತ್ರ ಮಾಧ್ಯಮವು ಒಂದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ನಿರ್ಣಾಯಕವಾದುದು. ಅಂತವರ ಜವಾಬ್ದಾರಿಯುತ ವರದಿಗಾರಿಕೆಯೇ ವಲಸೆ ಕಾರ್ಮಿಕರ ಘೋರ ಸಂಕಷ್ಟಗಳನ್ನು ಬೆಳಕಿಗೆ ತಂದಿರುವುದು ಎಂಬುದನ್ನು ಮರೆಯಬಾರದು.


ಇದನ್ನೂ ಓದಿ: ಪತ್ರಕರ್ತರು, ರಣಹದ್ದುಗಳು ಹಾಗೂ ಮತ್ತೊಬ್ಬ ಸಾಲಿಸಿಟರ್ ಜನರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....