Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

"ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು.... ಹಸಿದ ಅಥವಾ ಗಾಯಗೊಂಡ ಮಕ್ಕಳು... ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ" ಎಂದ ಕಾರ್ಟರ್‌ ಬರೆದಿದ್ದರು.

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಸ್ಥಳಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೆ ಉತ್ತರಿಸಿದ ಅವರು, ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. “ವಿನಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು”. ಅವರು ಆರಾಮ ಕುರ್ಚಿಗಳಲ್ಲಿ ಕುಳಿತು ಟೀಕಿಸುವುದನ್ನು ಬಿಟ್ಟು ತಾವೇನು ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಹೇಳಿದ್ದರು.

ಮುಂದುವರಿದು ತುಷಾರ್ ಮೆಹ್ತಾರವರು ರಣಹದ್ದು ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಕೆವಿನ್ ಕಾರ್ಟರ್ ಅವರು ಸುಡಾನ್‌ನಲ್ಲಿನ ಕ್ಷಾಮದ ಸಮಯದಲ್ಲಿ ತೆಗೆದ ಛಾಯಾಚಿತ್ರದ ಕಥೆಯನ್ನು ನಿರೂಪಿಸಲು ಹೋದರು.

“1983 ರಲ್ಲಿ ಸುಡಾನ್‌ಗೆ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕ ಹೋದರು. ತೀವ್ರ ಬರಗಾಲವಾದ್ದರಿಂದ ಅಲ್ಲೊಂದು ಅಪೌಷ್ಠಿಕತೆ, ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಇತ್ತು. ಅದರ ಹಿಂದೆ ಮಗು ಸಾಯುವುದನ್ನೇ ರಣಹದ್ದು ಕಾಯುತ್ತಿತ್ತು. ಅವರು ಆ ಫೋಟೊ ತೆಗೆದರು ಮತ್ತು ಅದನ್ನು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟಿಸಲಾಯಿತು. ಅವನಿಗೆ ಪುಲಿಟ್ಜೆರ್ ಪ್ರಶಸ್ತಿ ನೀಡಲಾಯಿತು. ಆತ 4 ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡ. ಅದಕ್ಕೂ ಮೊದಲು ಪತ್ರಕರ್ತರೊಬ್ಬರು ಮಗುವಿಗೆ ಏನಾಯಿತು ಎಂದು ಕೆವಿನ್ನನ್ನು ಕೇಳಿದರು? ನನಗೆ ಗೊತ್ತಿಲ್ಲ, ನಾನು ಮನೆಗೆ ಮರಳಿದೆ ಎಂದು ಆತ ಹೇಳಿದನು. ನಂತರ ಆ ಪತ್ರಕತ್ರ ಎಷ್ಟು ರಣಹದ್ದುಗಳಿದ್ದವು ಎಂದು ಕೇಳಿದನು. ಕೆವಿನ್ ಒಂದು ಎಂದನು. ಆಗ ಪತ್ರಕರ್ತ ಇಲ್ಲ, ಎರಡು ರಣಹದ್ದುಗಳಿದ್ದವು, ಅದರಲ್ಲಿ ಒಂದು ಕ್ಯಾಮೆರಾವನ್ನು ಹಿಡಿದಿತ್ತು ಎಂದನು” ಎಂಬ ಕತೆಯನ್ನು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ನಿರೂಪಿಸಿದ ಈ ಕಥೆಯು ಪ್ರಧಾನಿ ಮೋದಿ ಬೆಂಬಲಿಗರು ಹರಡಿದ ಸುಳ್ಳು ವಾಟ್ಸಾಪ್ ಸಂದೇಶವಾಗಿದೆ. ಯಾರಾದರೂ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರೆ ಈ ಕಥೆಯನ್ನು ಹೇಳಿ ನೀವೇನು ಮಾಡುತ್ತಿದ್ದೀರಿ ಎಂದು ಕೇಳುತ್ತಾರೆ.

ಸೂಡಾನ್‌ನಲ್ಲಿ ನಿಜವಾಗಿ ನಡೆದಿದ್ದೇನು?

1993ರಲ್ಲಿ ಆಹಾರ ಕ್ಯಾಂಪನ್ನು ತಲುಪಲು ತೆವಳುತ್ತಿರುವ ಸುಡಾನಿನ ನಿಶ್ಶಕ್ತ ಮಗುವೊಂದರ ಹತ್ತಿರ ರಣಹದ್ದು ಕಾಯುತ್ತಿರುವ ಚಿತ್ರ ತೆಗೆದ ಕೆವಿನ್ ನಂತರ ಆ ರಣಹದ್ದನ್ನು ಓಡಿಸಿದ್ದಾನೆ. ಆತ 20 ನಿಮಿಷ ಅಲ್ಲೆ ಕಾದಿದ್ದಾನೆ. ಆತನಿಗೆ ರೋಗದ ಕಾರಣಕ್ಕಾಗಿ ಮಗುವನ್ನು ಮುಟ್ಟಬಾರದೆಂದು ಸೂಚಿಸಲಾಗಿತ್ತು. ಆ ಮಗು ಕೋಂಗ್ ಎನ್‌ಯೋಂಗ್ ಈ ಘಟನೆ ನಡೆದ ಬಳಿಕ ಬದುಕುಳಿಯಿತು. 14 ವರ್ಷಗಳ ನಂತರ ಜ್ವರದಿಂದ ಸಾವಿಗೀಡಾಯಿತು.

ಆದರೆ ಎಲ್ಲಿಯೂ ಆ ಸಮಯದಲ್ಲಿ ಇನ್ನೊಬ್ಬ ಪತ್ರಕರ್ತ ಕೆವಿನ್‌ನನ್ನು ಪ್ರಶ್ನಿಸಿದ್ದರ ಉಲ್ಲೇಖವಿಲ್ಲ.
ಕಾರ್ಟರ್ ಆತ್ಮಹತ್ಯೆಯು ಆಘಾತದ ಬಳಿಕದ ಅಸ್ವಸ್ಥತೆ (post traumatic disorders)ಗಳಿಂದ ಉಂಟಾಗಿತ್ತೆಂದು ಅವರ ಅಂತಿಮ ಪತ್ರದಿಂದ ಗೊತ್ತಾಗುತ್ತದೆ. ಅವರು ತುಂಬಾ ನೊಂದಿದ್ದರು.

ಅವರ ಪತ್ರದ ಮುಖ್ಯಾಂಶ ಹೀಗಿದೆ: “ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು…. ಹಸಿದ ಅಥವಾ ಗಾಯಗೊಂಡ ಮಕ್ಕಳು… ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ”.

ಅವರ ಈ ಚಿತ್ರವು ಸುಡಾನಿನ ಭಯಂಕರ ಬರಗಾಲದ ಬಗ್ಗೆ ವಿಶ್ವಾದ್ಯಂತ ಗಮನ ಸೆಳೆದಿತ್ತು. ಕಾರ್ಟರ್ ಅವರನ್ನು ಇಂದಿಗೂ ಅವರ ವೃತ್ತಿಯಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತಿದೆ. ಅಂತವರ ಮೇಲೆ ಮತ್ತು ವಲಸಿಗರ ಪರವಾಗಿ ಧ್ವನಿ ಎತ್ತಿರುವವರ ಮೇಲೆ ಹಿಂಸಾಸಂತೋಷ, ಅವಕಾಶವಾದ, ಅಸಹಾನುಭೂತಿ ಇಂತಹಾ ಆರೋಪ ಮಾಡಿ ಇಂತಹಾ ವರದಿಗಳ ಮೇಲೆಯೇ ಅವಲಂಬಿಸಿದ್ದಾರೆ ಎಂದು ತುಷಾರ್ ಮೆಹ್ತಾ ಆರೋಪಣೆ ಮಾಡುವುದು ಕೆಟ್ಟ ಅಭಿರುಚಿ ಮಾತ್ರವಲ್ಲ ನೈತಿಕವಾಗಿಯೂ ತಪ್ಪು.

ಒಂದು ನಿರ್ಭೀತ, ಸ್ವತಂತ್ರ ಮಾಧ್ಯಮವು ಒಂದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ನಿರ್ಣಾಯಕವಾದುದು. ಅಂತವರ ಜವಾಬ್ದಾರಿಯುತ ವರದಿಗಾರಿಕೆಯೇ ವಲಸೆ ಕಾರ್ಮಿಕರ ಘೋರ ಸಂಕಷ್ಟಗಳನ್ನು ಬೆಳಕಿಗೆ ತಂದಿರುವುದು ಎಂಬುದನ್ನು ಮರೆಯಬಾರದು.


ಇದನ್ನೂ ಓದಿ: ಪತ್ರಕರ್ತರು, ರಣಹದ್ದುಗಳು ಹಾಗೂ ಮತ್ತೊಬ್ಬ ಸಾಲಿಸಿಟರ್ ಜನರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...