Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

"ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು.... ಹಸಿದ ಅಥವಾ ಗಾಯಗೊಂಡ ಮಕ್ಕಳು... ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ" ಎಂದ ಕಾರ್ಟರ್‌ ಬರೆದಿದ್ದರು.

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಸ್ಥಳಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೆ ಉತ್ತರಿಸಿದ ಅವರು, ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. “ವಿನಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು”. ಅವರು ಆರಾಮ ಕುರ್ಚಿಗಳಲ್ಲಿ ಕುಳಿತು ಟೀಕಿಸುವುದನ್ನು ಬಿಟ್ಟು ತಾವೇನು ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಹೇಳಿದ್ದರು.

ಮುಂದುವರಿದು ತುಷಾರ್ ಮೆಹ್ತಾರವರು ರಣಹದ್ದು ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಕೆವಿನ್ ಕಾರ್ಟರ್ ಅವರು ಸುಡಾನ್‌ನಲ್ಲಿನ ಕ್ಷಾಮದ ಸಮಯದಲ್ಲಿ ತೆಗೆದ ಛಾಯಾಚಿತ್ರದ ಕಥೆಯನ್ನು ನಿರೂಪಿಸಲು ಹೋದರು.

“1983 ರಲ್ಲಿ ಸುಡಾನ್‌ಗೆ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕ ಹೋದರು. ತೀವ್ರ ಬರಗಾಲವಾದ್ದರಿಂದ ಅಲ್ಲೊಂದು ಅಪೌಷ್ಠಿಕತೆ, ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಇತ್ತು. ಅದರ ಹಿಂದೆ ಮಗು ಸಾಯುವುದನ್ನೇ ರಣಹದ್ದು ಕಾಯುತ್ತಿತ್ತು. ಅವರು ಆ ಫೋಟೊ ತೆಗೆದರು ಮತ್ತು ಅದನ್ನು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟಿಸಲಾಯಿತು. ಅವನಿಗೆ ಪುಲಿಟ್ಜೆರ್ ಪ್ರಶಸ್ತಿ ನೀಡಲಾಯಿತು. ಆತ 4 ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡ. ಅದಕ್ಕೂ ಮೊದಲು ಪತ್ರಕರ್ತರೊಬ್ಬರು ಮಗುವಿಗೆ ಏನಾಯಿತು ಎಂದು ಕೆವಿನ್ನನ್ನು ಕೇಳಿದರು? ನನಗೆ ಗೊತ್ತಿಲ್ಲ, ನಾನು ಮನೆಗೆ ಮರಳಿದೆ ಎಂದು ಆತ ಹೇಳಿದನು. ನಂತರ ಆ ಪತ್ರಕತ್ರ ಎಷ್ಟು ರಣಹದ್ದುಗಳಿದ್ದವು ಎಂದು ಕೇಳಿದನು. ಕೆವಿನ್ ಒಂದು ಎಂದನು. ಆಗ ಪತ್ರಕರ್ತ ಇಲ್ಲ, ಎರಡು ರಣಹದ್ದುಗಳಿದ್ದವು, ಅದರಲ್ಲಿ ಒಂದು ಕ್ಯಾಮೆರಾವನ್ನು ಹಿಡಿದಿತ್ತು ಎಂದನು” ಎಂಬ ಕತೆಯನ್ನು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ನಿರೂಪಿಸಿದ ಈ ಕಥೆಯು ಪ್ರಧಾನಿ ಮೋದಿ ಬೆಂಬಲಿಗರು ಹರಡಿದ ಸುಳ್ಳು ವಾಟ್ಸಾಪ್ ಸಂದೇಶವಾಗಿದೆ. ಯಾರಾದರೂ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರೆ ಈ ಕಥೆಯನ್ನು ಹೇಳಿ ನೀವೇನು ಮಾಡುತ್ತಿದ್ದೀರಿ ಎಂದು ಕೇಳುತ್ತಾರೆ.

ಸೂಡಾನ್‌ನಲ್ಲಿ ನಿಜವಾಗಿ ನಡೆದಿದ್ದೇನು?

1993ರಲ್ಲಿ ಆಹಾರ ಕ್ಯಾಂಪನ್ನು ತಲುಪಲು ತೆವಳುತ್ತಿರುವ ಸುಡಾನಿನ ನಿಶ್ಶಕ್ತ ಮಗುವೊಂದರ ಹತ್ತಿರ ರಣಹದ್ದು ಕಾಯುತ್ತಿರುವ ಚಿತ್ರ ತೆಗೆದ ಕೆವಿನ್ ನಂತರ ಆ ರಣಹದ್ದನ್ನು ಓಡಿಸಿದ್ದಾನೆ. ಆತ 20 ನಿಮಿಷ ಅಲ್ಲೆ ಕಾದಿದ್ದಾನೆ. ಆತನಿಗೆ ರೋಗದ ಕಾರಣಕ್ಕಾಗಿ ಮಗುವನ್ನು ಮುಟ್ಟಬಾರದೆಂದು ಸೂಚಿಸಲಾಗಿತ್ತು. ಆ ಮಗು ಕೋಂಗ್ ಎನ್‌ಯೋಂಗ್ ಈ ಘಟನೆ ನಡೆದ ಬಳಿಕ ಬದುಕುಳಿಯಿತು. 14 ವರ್ಷಗಳ ನಂತರ ಜ್ವರದಿಂದ ಸಾವಿಗೀಡಾಯಿತು.

ಆದರೆ ಎಲ್ಲಿಯೂ ಆ ಸಮಯದಲ್ಲಿ ಇನ್ನೊಬ್ಬ ಪತ್ರಕರ್ತ ಕೆವಿನ್‌ನನ್ನು ಪ್ರಶ್ನಿಸಿದ್ದರ ಉಲ್ಲೇಖವಿಲ್ಲ.
ಕಾರ್ಟರ್ ಆತ್ಮಹತ್ಯೆಯು ಆಘಾತದ ಬಳಿಕದ ಅಸ್ವಸ್ಥತೆ (post traumatic disorders)ಗಳಿಂದ ಉಂಟಾಗಿತ್ತೆಂದು ಅವರ ಅಂತಿಮ ಪತ್ರದಿಂದ ಗೊತ್ತಾಗುತ್ತದೆ. ಅವರು ತುಂಬಾ ನೊಂದಿದ್ದರು.

ಅವರ ಪತ್ರದ ಮುಖ್ಯಾಂಶ ಹೀಗಿದೆ: “ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು…. ಹಸಿದ ಅಥವಾ ಗಾಯಗೊಂಡ ಮಕ್ಕಳು… ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ”.

ಅವರ ಈ ಚಿತ್ರವು ಸುಡಾನಿನ ಭಯಂಕರ ಬರಗಾಲದ ಬಗ್ಗೆ ವಿಶ್ವಾದ್ಯಂತ ಗಮನ ಸೆಳೆದಿತ್ತು. ಕಾರ್ಟರ್ ಅವರನ್ನು ಇಂದಿಗೂ ಅವರ ವೃತ್ತಿಯಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತಿದೆ. ಅಂತವರ ಮೇಲೆ ಮತ್ತು ವಲಸಿಗರ ಪರವಾಗಿ ಧ್ವನಿ ಎತ್ತಿರುವವರ ಮೇಲೆ ಹಿಂಸಾಸಂತೋಷ, ಅವಕಾಶವಾದ, ಅಸಹಾನುಭೂತಿ ಇಂತಹಾ ಆರೋಪ ಮಾಡಿ ಇಂತಹಾ ವರದಿಗಳ ಮೇಲೆಯೇ ಅವಲಂಬಿಸಿದ್ದಾರೆ ಎಂದು ತುಷಾರ್ ಮೆಹ್ತಾ ಆರೋಪಣೆ ಮಾಡುವುದು ಕೆಟ್ಟ ಅಭಿರುಚಿ ಮಾತ್ರವಲ್ಲ ನೈತಿಕವಾಗಿಯೂ ತಪ್ಪು.

ಒಂದು ನಿರ್ಭೀತ, ಸ್ವತಂತ್ರ ಮಾಧ್ಯಮವು ಒಂದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ನಿರ್ಣಾಯಕವಾದುದು. ಅಂತವರ ಜವಾಬ್ದಾರಿಯುತ ವರದಿಗಾರಿಕೆಯೇ ವಲಸೆ ಕಾರ್ಮಿಕರ ಘೋರ ಸಂಕಷ್ಟಗಳನ್ನು ಬೆಳಕಿಗೆ ತಂದಿರುವುದು ಎಂಬುದನ್ನು ಮರೆಯಬಾರದು.


ಇದನ್ನೂ ಓದಿ: ಪತ್ರಕರ್ತರು, ರಣಹದ್ದುಗಳು ಹಾಗೂ ಮತ್ತೊಬ್ಬ ಸಾಲಿಸಿಟರ್ ಜನರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...