Homeಮುಖಪುಟಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

"ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು.... ಹಸಿದ ಅಥವಾ ಗಾಯಗೊಂಡ ಮಕ್ಕಳು... ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ" ಎಂದ ಕಾರ್ಟರ್‌ ಬರೆದಿದ್ದರು.

- Advertisement -
- Advertisement -

ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡ ವಲಸೆ ಕಾರ್ಮಿಕರನ್ನು ತಮ್ಮ ಸ್ವಂತ ಸ್ಥಳಗಳಿಗೆ ತಲುಪಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿತ್ತು. ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇದಕ್ಕೆ ಉತ್ತರಿಸಿದ ಅವರು, ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. “ವಿನಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು”. ಅವರು ಆರಾಮ ಕುರ್ಚಿಗಳಲ್ಲಿ ಕುಳಿತು ಟೀಕಿಸುವುದನ್ನು ಬಿಟ್ಟು ತಾವೇನು ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಹೇಳಿದ್ದರು.

ಮುಂದುವರಿದು ತುಷಾರ್ ಮೆಹ್ತಾರವರು ರಣಹದ್ದು ಮತ್ತು ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಕೆವಿನ್ ಕಾರ್ಟರ್ ಅವರು ಸುಡಾನ್‌ನಲ್ಲಿನ ಕ್ಷಾಮದ ಸಮಯದಲ್ಲಿ ತೆಗೆದ ಛಾಯಾಚಿತ್ರದ ಕಥೆಯನ್ನು ನಿರೂಪಿಸಲು ಹೋದರು.

“1983 ರಲ್ಲಿ ಸುಡಾನ್‌ಗೆ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕ ಹೋದರು. ತೀವ್ರ ಬರಗಾಲವಾದ್ದರಿಂದ ಅಲ್ಲೊಂದು ಅಪೌಷ್ಠಿಕತೆ, ಅನಾರೋಗ್ಯದಿಂದ ಬಳಲುತ್ತಿದ್ದ ಮಗು ಇತ್ತು. ಅದರ ಹಿಂದೆ ಮಗು ಸಾಯುವುದನ್ನೇ ರಣಹದ್ದು ಕಾಯುತ್ತಿತ್ತು. ಅವರು ಆ ಫೋಟೊ ತೆಗೆದರು ಮತ್ತು ಅದನ್ನು ನ್ಯೂಯಾರ್ಕ್ ಟೈಮ್ಸ್‌ನಲ್ಲಿ ಪ್ರಕಟಿಸಲಾಯಿತು. ಅವನಿಗೆ ಪುಲಿಟ್ಜೆರ್ ಪ್ರಶಸ್ತಿ ನೀಡಲಾಯಿತು. ಆತ 4 ತಿಂಗಳ ನಂತರ ಆತ್ಮಹತ್ಯೆ ಮಾಡಿಕೊಂಡ. ಅದಕ್ಕೂ ಮೊದಲು ಪತ್ರಕರ್ತರೊಬ್ಬರು ಮಗುವಿಗೆ ಏನಾಯಿತು ಎಂದು ಕೆವಿನ್ನನ್ನು ಕೇಳಿದರು? ನನಗೆ ಗೊತ್ತಿಲ್ಲ, ನಾನು ಮನೆಗೆ ಮರಳಿದೆ ಎಂದು ಆತ ಹೇಳಿದನು. ನಂತರ ಆ ಪತ್ರಕತ್ರ ಎಷ್ಟು ರಣಹದ್ದುಗಳಿದ್ದವು ಎಂದು ಕೇಳಿದನು. ಕೆವಿನ್ ಒಂದು ಎಂದನು. ಆಗ ಪತ್ರಕರ್ತ ಇಲ್ಲ, ಎರಡು ರಣಹದ್ದುಗಳಿದ್ದವು, ಅದರಲ್ಲಿ ಒಂದು ಕ್ಯಾಮೆರಾವನ್ನು ಹಿಡಿದಿತ್ತು ಎಂದನು” ಎಂಬ ಕತೆಯನ್ನು ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ನಿರೂಪಿಸಿದ ಈ ಕಥೆಯು ಪ್ರಧಾನಿ ಮೋದಿ ಬೆಂಬಲಿಗರು ಹರಡಿದ ಸುಳ್ಳು ವಾಟ್ಸಾಪ್ ಸಂದೇಶವಾಗಿದೆ. ಯಾರಾದರೂ ವಲಸೆ ಕಾರ್ಮಿಕರಿಗಾಗಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರೆ ಈ ಕಥೆಯನ್ನು ಹೇಳಿ ನೀವೇನು ಮಾಡುತ್ತಿದ್ದೀರಿ ಎಂದು ಕೇಳುತ್ತಾರೆ.

ಸೂಡಾನ್‌ನಲ್ಲಿ ನಿಜವಾಗಿ ನಡೆದಿದ್ದೇನು?

1993ರಲ್ಲಿ ಆಹಾರ ಕ್ಯಾಂಪನ್ನು ತಲುಪಲು ತೆವಳುತ್ತಿರುವ ಸುಡಾನಿನ ನಿಶ್ಶಕ್ತ ಮಗುವೊಂದರ ಹತ್ತಿರ ರಣಹದ್ದು ಕಾಯುತ್ತಿರುವ ಚಿತ್ರ ತೆಗೆದ ಕೆವಿನ್ ನಂತರ ಆ ರಣಹದ್ದನ್ನು ಓಡಿಸಿದ್ದಾನೆ. ಆತ 20 ನಿಮಿಷ ಅಲ್ಲೆ ಕಾದಿದ್ದಾನೆ. ಆತನಿಗೆ ರೋಗದ ಕಾರಣಕ್ಕಾಗಿ ಮಗುವನ್ನು ಮುಟ್ಟಬಾರದೆಂದು ಸೂಚಿಸಲಾಗಿತ್ತು. ಆ ಮಗು ಕೋಂಗ್ ಎನ್‌ಯೋಂಗ್ ಈ ಘಟನೆ ನಡೆದ ಬಳಿಕ ಬದುಕುಳಿಯಿತು. 14 ವರ್ಷಗಳ ನಂತರ ಜ್ವರದಿಂದ ಸಾವಿಗೀಡಾಯಿತು.

ಆದರೆ ಎಲ್ಲಿಯೂ ಆ ಸಮಯದಲ್ಲಿ ಇನ್ನೊಬ್ಬ ಪತ್ರಕರ್ತ ಕೆವಿನ್‌ನನ್ನು ಪ್ರಶ್ನಿಸಿದ್ದರ ಉಲ್ಲೇಖವಿಲ್ಲ.
ಕಾರ್ಟರ್ ಆತ್ಮಹತ್ಯೆಯು ಆಘಾತದ ಬಳಿಕದ ಅಸ್ವಸ್ಥತೆ (post traumatic disorders)ಗಳಿಂದ ಉಂಟಾಗಿತ್ತೆಂದು ಅವರ ಅಂತಿಮ ಪತ್ರದಿಂದ ಗೊತ್ತಾಗುತ್ತದೆ. ಅವರು ತುಂಬಾ ನೊಂದಿದ್ದರು.

ಅವರ ಪತ್ರದ ಮುಖ್ಯಾಂಶ ಹೀಗಿದೆ: “ಕೊಲೆಗಳು ಮತ್ತು ಹೆಣಗಳು ಮತ್ತು ಸಿಟ್ಟು ಮತ್ತು ನೋವು…. ಹಸಿದ ಅಥವಾ ಗಾಯಗೊಂಡ ಮಕ್ಕಳು… ಗುಂಡಿಕ್ಕಲು ತಹತಹಿಸುತ್ತಿರುವ ಹುಚ್ಚರು. ಹೆಚ್ಚಾಗಿ ಪೊಲೀಸರು, ಹಂತಕರು, ಕೊಲೆಗಡುಕರು ಇವೆಲ್ಲವುಗಳ ನೆನಪುಗಳು ನನ್ನನ್ನು ದೆವ್ವಗಳಂತೆ ಕಾಡುತ್ತಿವೆ”.

ಅವರ ಈ ಚಿತ್ರವು ಸುಡಾನಿನ ಭಯಂಕರ ಬರಗಾಲದ ಬಗ್ಗೆ ವಿಶ್ವಾದ್ಯಂತ ಗಮನ ಸೆಳೆದಿತ್ತು. ಕಾರ್ಟರ್ ಅವರನ್ನು ಇಂದಿಗೂ ಅವರ ವೃತ್ತಿಯಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತಿದೆ. ಅಂತವರ ಮೇಲೆ ಮತ್ತು ವಲಸಿಗರ ಪರವಾಗಿ ಧ್ವನಿ ಎತ್ತಿರುವವರ ಮೇಲೆ ಹಿಂಸಾಸಂತೋಷ, ಅವಕಾಶವಾದ, ಅಸಹಾನುಭೂತಿ ಇಂತಹಾ ಆರೋಪ ಮಾಡಿ ಇಂತಹಾ ವರದಿಗಳ ಮೇಲೆಯೇ ಅವಲಂಬಿಸಿದ್ದಾರೆ ಎಂದು ತುಷಾರ್ ಮೆಹ್ತಾ ಆರೋಪಣೆ ಮಾಡುವುದು ಕೆಟ್ಟ ಅಭಿರುಚಿ ಮಾತ್ರವಲ್ಲ ನೈತಿಕವಾಗಿಯೂ ತಪ್ಪು.

ಒಂದು ನಿರ್ಭೀತ, ಸ್ವತಂತ್ರ ಮಾಧ್ಯಮವು ಒಂದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ನಿರ್ಣಾಯಕವಾದುದು. ಅಂತವರ ಜವಾಬ್ದಾರಿಯುತ ವರದಿಗಾರಿಕೆಯೇ ವಲಸೆ ಕಾರ್ಮಿಕರ ಘೋರ ಸಂಕಷ್ಟಗಳನ್ನು ಬೆಳಕಿಗೆ ತಂದಿರುವುದು ಎಂಬುದನ್ನು ಮರೆಯಬಾರದು.


ಇದನ್ನೂ ಓದಿ: ಪತ್ರಕರ್ತರು, ರಣಹದ್ದುಗಳು ಹಾಗೂ ಮತ್ತೊಬ್ಬ ಸಾಲಿಸಿಟರ್ ಜನರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...