Homeಕರ್ನಾಟಕಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

ಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

- Advertisement -
- Advertisement -

ರಾಜ್ಯ ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಕಗ್ಗಂಟು ಬಗೆಹರಿದಿದ್ದು ಇಂದು (ಶನಿವಾರ) 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಬಿಡಿಸಿದೆ.

ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್‌.ಎಸ್‌.ಬೋಸರಾಜು ಅವರಿಗೆ ಸಚಿವರಾಗುವ ಅವಕಾಶವನ್ನು ನೀಡಲಾಗಿದೆ. ಹಲವು ಹಿರಿಯ ಶಾಸಕರಿಗೆ ಸಚಿವರಾಗುವ ಅವಕಾಶ ದೊರೆತ್ತಿಲ್ಲ.

ನೂತನ ಸಚಿವರ ಪ್ರಮಾಣವಚನ ಸಮಾರಂಭ ಶನಿವಾರ (ಇಂದು) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ಕಳುಹಿಸಿದೆ.

ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗಿದೆ.

ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳನ್ನು ಒಳಗೊಂಡು ಎಂಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಕ್ಕಲಿಗರಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿಗೆ ಅವಕಾಶ ದೊರೆತಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಟ್ಟು 9 ಮಂದಿಗೆ ಸಚಿವ ಸ್ಥಾನ ಲಭಿಸಿದೆ. ಪರಿಶಿಷ್ಟ ಜಾತಿಯ ಕೆ.ಎಚ್‌. ಮುನಿಯಪ್ಪ, ಜಿ.ಪರಮೇಶ್ವರ, ಎಚ್‌.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಪಂಗಡದ ನಾಗೇಂದ್ರ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

‘ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯವಾದ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಂಕಾಳ ಸುಬ್ಬ ವೈದ್ಯ, ಮರಾಠ ಸಮಾಜದ ಸಂತೋಷ್ ಲಾಡ್ ಸಂಪುಟ ಸೇರ್ಪಡೆಯಾಗಿದ್ದಾರೆ. ಕುರುಬ ಸಮುದಾಯದಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.

ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಬಸವರಾಜ ರಾಯರಡ್ಡಿ, ಟಿ.ಬಿ.ಜಯಚಂದ್ರ, ತನ್ವೀರ್ ಸೇಠ್‌, ಎನ್‌.ಎ.ಹ್ಯಾರಿಸ್‌, ಸಲೀಂ ಅಹಮದ್‌ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.  ದಿನೇಶ್‌ ಗುಂಡೂರಾವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಆರಂಭದಲ್ಲಿ ಒಲವು ವ್ಯಕ್ತವಾಗಿರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಬ್ರಾಹ್ಮಣ ಕೋಟಾದಡಿ ಅವರಿಗೆ ಅವಕಾಶ ದೊರೆತಿದೆ.

ರಾಜೀನಾಮೆಗೆ ಮುಂದಾದ ಹರಿಪ್ರಸಾದ್?

ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ವರದಿಯಾಗಿದೆ.

ಶನಿವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವಕಾಶ ಕೈತಪ್ಪಲು ಸಿದ್ದರಾಮಯ್ಯನವರು ಕಾರಣವೆಂದು ಹರಿಪ್ರಸಾದ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪಟ್ಟಿ

ಎಚ್.ಕೆ.ಪಾಟೀಲ- ನಾಮಧಾರಿ ರೆಡ್ಡಿ

ಕೃಷ್ಣ ಬೈರೇಗೌಡ- ಒಕ್ಕಲಿಗ

ಎನ್.ಚಲುವರಾಯಸ್ವಾಮಿ- ಒಕ್ಕಲಿಗ

ಕೆ.ವೆಂಕಟೇಶ್‌- ಒಕ್ಕಲಿಗ

ಡಾ.ಎಚ್‌.ಸಿ.ಮಹದೇವಪ್ಪ- ಎಸ್‌ಸಿ (ಬಲಗೈ)

ಈಶ್ವರ ಖಂಡ್ರೆ- ಬಣಜಿಗ ಲಿಂಗಾಯತ

ಕೆ.ಎನ್‌.ರಾಜಣ್ಣ- ವಾಲ್ಮೀಕಿ (ಎಸ್‌ಟಿ)

ದಿನೇಶ್‌ ಗುಂಡೂರಾವ್‌- ಬ್ರಾಹ್ಮಣ

ಶರಣಬಸಪ್ಪ ದರ್ಶನಾಪುರ- ರೆಡ್ಡಿ ಲಿಂಗಾಯತ

ಶಿವಾನಂದ ಪಾಟೀಲ- ಪಂಚಮಸಾಲಿ

ಆರ್.ಬಿ.ತಿಮ್ಮಾಪುರ- ಎಸ್‌ಸಿ (ಎಡಗೈ)

ಎಸ್‌.ಎಸ್‌.ಮಲ್ಲಿಕಾರ್ಜುನ- ಸಾದರ ಲಿಂಗಾಯತ

ಶಿವರಾಜ ತಂಗಡಗಿ- ಎಸ್‌ಸಿ (ಭೋವಿ)

ಶರಣ ಪ್ರಕಾಶ ಪಾಟೀಲ- ಬಣಜಿಗ ಲಿಂಗಾಯತ

ಮಂಕಾಳ ಸುಬ್ಬ ವೈದ್ಯ- ಮೊಗವೀರ

ಲಕ್ಷ್ಮಿ ಹೆಬ್ಬಾಳಕರ- ಪಂಚಮಸಾಲಿ

ರಹೀಂ ಖಾನ್‌- ಮುಸ್ಲಿಂ

ಡಿ.ಸುಧಾಕರ್‌- ಜೈನ

ಸಂತೋಷ್‌ ಎಸ್‌.ಲಾಡ್‌- ಮರಾಠ

ಎನ್‌.ಎಸ್.ಬೋಸರಾಜು- ರಾಜು ಕ್ಷತ್ರೀಯ

ಬೈರತಿ ಸುರೇಶ್‌- ಕುರುಬ

ಮಧು ಬಂಗಾರಪ್ಪ- ಈಡಿಗ

ಡಾ.ಎಂ.ಸಿ.ಸುಧಾಕರ್‌- ಒಕ್ಕಲಿಗ

ಬಿ.ನಾಗೇಂದ್ರ- ವಾಲ್ಮೀಕಿ (ಎಸ್‌ಟಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...