Homeಕರ್ನಾಟಕಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

ಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

- Advertisement -
- Advertisement -

ರಾಜ್ಯ ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಕಗ್ಗಂಟು ಬಗೆಹರಿದಿದ್ದು ಇಂದು (ಶನಿವಾರ) 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಬಿಡಿಸಿದೆ.

ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್‌.ಎಸ್‌.ಬೋಸರಾಜು ಅವರಿಗೆ ಸಚಿವರಾಗುವ ಅವಕಾಶವನ್ನು ನೀಡಲಾಗಿದೆ. ಹಲವು ಹಿರಿಯ ಶಾಸಕರಿಗೆ ಸಚಿವರಾಗುವ ಅವಕಾಶ ದೊರೆತ್ತಿಲ್ಲ.

ನೂತನ ಸಚಿವರ ಪ್ರಮಾಣವಚನ ಸಮಾರಂಭ ಶನಿವಾರ (ಇಂದು) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ಕಳುಹಿಸಿದೆ.

ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗಿದೆ.

ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳನ್ನು ಒಳಗೊಂಡು ಎಂಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಕ್ಕಲಿಗರಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿಗೆ ಅವಕಾಶ ದೊರೆತಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಟ್ಟು 9 ಮಂದಿಗೆ ಸಚಿವ ಸ್ಥಾನ ಲಭಿಸಿದೆ. ಪರಿಶಿಷ್ಟ ಜಾತಿಯ ಕೆ.ಎಚ್‌. ಮುನಿಯಪ್ಪ, ಜಿ.ಪರಮೇಶ್ವರ, ಎಚ್‌.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಪಂಗಡದ ನಾಗೇಂದ್ರ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

‘ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯವಾದ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಂಕಾಳ ಸುಬ್ಬ ವೈದ್ಯ, ಮರಾಠ ಸಮಾಜದ ಸಂತೋಷ್ ಲಾಡ್ ಸಂಪುಟ ಸೇರ್ಪಡೆಯಾಗಿದ್ದಾರೆ. ಕುರುಬ ಸಮುದಾಯದಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.

ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಬಸವರಾಜ ರಾಯರಡ್ಡಿ, ಟಿ.ಬಿ.ಜಯಚಂದ್ರ, ತನ್ವೀರ್ ಸೇಠ್‌, ಎನ್‌.ಎ.ಹ್ಯಾರಿಸ್‌, ಸಲೀಂ ಅಹಮದ್‌ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.  ದಿನೇಶ್‌ ಗುಂಡೂರಾವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಆರಂಭದಲ್ಲಿ ಒಲವು ವ್ಯಕ್ತವಾಗಿರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಬ್ರಾಹ್ಮಣ ಕೋಟಾದಡಿ ಅವರಿಗೆ ಅವಕಾಶ ದೊರೆತಿದೆ.

ರಾಜೀನಾಮೆಗೆ ಮುಂದಾದ ಹರಿಪ್ರಸಾದ್?

ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ವರದಿಯಾಗಿದೆ.

ಶನಿವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವಕಾಶ ಕೈತಪ್ಪಲು ಸಿದ್ದರಾಮಯ್ಯನವರು ಕಾರಣವೆಂದು ಹರಿಪ್ರಸಾದ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪಟ್ಟಿ

ಎಚ್.ಕೆ.ಪಾಟೀಲ- ನಾಮಧಾರಿ ರೆಡ್ಡಿ

ಕೃಷ್ಣ ಬೈರೇಗೌಡ- ಒಕ್ಕಲಿಗ

ಎನ್.ಚಲುವರಾಯಸ್ವಾಮಿ- ಒಕ್ಕಲಿಗ

ಕೆ.ವೆಂಕಟೇಶ್‌- ಒಕ್ಕಲಿಗ

ಡಾ.ಎಚ್‌.ಸಿ.ಮಹದೇವಪ್ಪ- ಎಸ್‌ಸಿ (ಬಲಗೈ)

ಈಶ್ವರ ಖಂಡ್ರೆ- ಬಣಜಿಗ ಲಿಂಗಾಯತ

ಕೆ.ಎನ್‌.ರಾಜಣ್ಣ- ವಾಲ್ಮೀಕಿ (ಎಸ್‌ಟಿ)

ದಿನೇಶ್‌ ಗುಂಡೂರಾವ್‌- ಬ್ರಾಹ್ಮಣ

ಶರಣಬಸಪ್ಪ ದರ್ಶನಾಪುರ- ರೆಡ್ಡಿ ಲಿಂಗಾಯತ

ಶಿವಾನಂದ ಪಾಟೀಲ- ಪಂಚಮಸಾಲಿ

ಆರ್.ಬಿ.ತಿಮ್ಮಾಪುರ- ಎಸ್‌ಸಿ (ಎಡಗೈ)

ಎಸ್‌.ಎಸ್‌.ಮಲ್ಲಿಕಾರ್ಜುನ- ಸಾದರ ಲಿಂಗಾಯತ

ಶಿವರಾಜ ತಂಗಡಗಿ- ಎಸ್‌ಸಿ (ಭೋವಿ)

ಶರಣ ಪ್ರಕಾಶ ಪಾಟೀಲ- ಬಣಜಿಗ ಲಿಂಗಾಯತ

ಮಂಕಾಳ ಸುಬ್ಬ ವೈದ್ಯ- ಮೊಗವೀರ

ಲಕ್ಷ್ಮಿ ಹೆಬ್ಬಾಳಕರ- ಪಂಚಮಸಾಲಿ

ರಹೀಂ ಖಾನ್‌- ಮುಸ್ಲಿಂ

ಡಿ.ಸುಧಾಕರ್‌- ಜೈನ

ಸಂತೋಷ್‌ ಎಸ್‌.ಲಾಡ್‌- ಮರಾಠ

ಎನ್‌.ಎಸ್.ಬೋಸರಾಜು- ರಾಜು ಕ್ಷತ್ರೀಯ

ಬೈರತಿ ಸುರೇಶ್‌- ಕುರುಬ

ಮಧು ಬಂಗಾರಪ್ಪ- ಈಡಿಗ

ಡಾ.ಎಂ.ಸಿ.ಸುಧಾಕರ್‌- ಒಕ್ಕಲಿಗ

ಬಿ.ನಾಗೇಂದ್ರ- ವಾಲ್ಮೀಕಿ (ಎಸ್‌ಟಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...