Homeಕರ್ನಾಟಕಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

ಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

- Advertisement -
- Advertisement -

ರಾಜ್ಯ ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಕಗ್ಗಂಟು ಬಗೆಹರಿದಿದ್ದು ಇಂದು (ಶನಿವಾರ) 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಬಿಡಿಸಿದೆ.

ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್‌.ಎಸ್‌.ಬೋಸರಾಜು ಅವರಿಗೆ ಸಚಿವರಾಗುವ ಅವಕಾಶವನ್ನು ನೀಡಲಾಗಿದೆ. ಹಲವು ಹಿರಿಯ ಶಾಸಕರಿಗೆ ಸಚಿವರಾಗುವ ಅವಕಾಶ ದೊರೆತ್ತಿಲ್ಲ.

ನೂತನ ಸಚಿವರ ಪ್ರಮಾಣವಚನ ಸಮಾರಂಭ ಶನಿವಾರ (ಇಂದು) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ಕಳುಹಿಸಿದೆ.

ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗಿದೆ.

ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳನ್ನು ಒಳಗೊಂಡು ಎಂಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಕ್ಕಲಿಗರಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿಗೆ ಅವಕಾಶ ದೊರೆತಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಟ್ಟು 9 ಮಂದಿಗೆ ಸಚಿವ ಸ್ಥಾನ ಲಭಿಸಿದೆ. ಪರಿಶಿಷ್ಟ ಜಾತಿಯ ಕೆ.ಎಚ್‌. ಮುನಿಯಪ್ಪ, ಜಿ.ಪರಮೇಶ್ವರ, ಎಚ್‌.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಪಂಗಡದ ನಾಗೇಂದ್ರ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

‘ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯವಾದ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಂಕಾಳ ಸುಬ್ಬ ವೈದ್ಯ, ಮರಾಠ ಸಮಾಜದ ಸಂತೋಷ್ ಲಾಡ್ ಸಂಪುಟ ಸೇರ್ಪಡೆಯಾಗಿದ್ದಾರೆ. ಕುರುಬ ಸಮುದಾಯದಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.

ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಬಸವರಾಜ ರಾಯರಡ್ಡಿ, ಟಿ.ಬಿ.ಜಯಚಂದ್ರ, ತನ್ವೀರ್ ಸೇಠ್‌, ಎನ್‌.ಎ.ಹ್ಯಾರಿಸ್‌, ಸಲೀಂ ಅಹಮದ್‌ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.  ದಿನೇಶ್‌ ಗುಂಡೂರಾವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಆರಂಭದಲ್ಲಿ ಒಲವು ವ್ಯಕ್ತವಾಗಿರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಬ್ರಾಹ್ಮಣ ಕೋಟಾದಡಿ ಅವರಿಗೆ ಅವಕಾಶ ದೊರೆತಿದೆ.

ರಾಜೀನಾಮೆಗೆ ಮುಂದಾದ ಹರಿಪ್ರಸಾದ್?

ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ವರದಿಯಾಗಿದೆ.

ಶನಿವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವಕಾಶ ಕೈತಪ್ಪಲು ಸಿದ್ದರಾಮಯ್ಯನವರು ಕಾರಣವೆಂದು ಹರಿಪ್ರಸಾದ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪಟ್ಟಿ

ಎಚ್.ಕೆ.ಪಾಟೀಲ- ನಾಮಧಾರಿ ರೆಡ್ಡಿ

ಕೃಷ್ಣ ಬೈರೇಗೌಡ- ಒಕ್ಕಲಿಗ

ಎನ್.ಚಲುವರಾಯಸ್ವಾಮಿ- ಒಕ್ಕಲಿಗ

ಕೆ.ವೆಂಕಟೇಶ್‌- ಒಕ್ಕಲಿಗ

ಡಾ.ಎಚ್‌.ಸಿ.ಮಹದೇವಪ್ಪ- ಎಸ್‌ಸಿ (ಬಲಗೈ)

ಈಶ್ವರ ಖಂಡ್ರೆ- ಬಣಜಿಗ ಲಿಂಗಾಯತ

ಕೆ.ಎನ್‌.ರಾಜಣ್ಣ- ವಾಲ್ಮೀಕಿ (ಎಸ್‌ಟಿ)

ದಿನೇಶ್‌ ಗುಂಡೂರಾವ್‌- ಬ್ರಾಹ್ಮಣ

ಶರಣಬಸಪ್ಪ ದರ್ಶನಾಪುರ- ರೆಡ್ಡಿ ಲಿಂಗಾಯತ

ಶಿವಾನಂದ ಪಾಟೀಲ- ಪಂಚಮಸಾಲಿ

ಆರ್.ಬಿ.ತಿಮ್ಮಾಪುರ- ಎಸ್‌ಸಿ (ಎಡಗೈ)

ಎಸ್‌.ಎಸ್‌.ಮಲ್ಲಿಕಾರ್ಜುನ- ಸಾದರ ಲಿಂಗಾಯತ

ಶಿವರಾಜ ತಂಗಡಗಿ- ಎಸ್‌ಸಿ (ಭೋವಿ)

ಶರಣ ಪ್ರಕಾಶ ಪಾಟೀಲ- ಬಣಜಿಗ ಲಿಂಗಾಯತ

ಮಂಕಾಳ ಸುಬ್ಬ ವೈದ್ಯ- ಮೊಗವೀರ

ಲಕ್ಷ್ಮಿ ಹೆಬ್ಬಾಳಕರ- ಪಂಚಮಸಾಲಿ

ರಹೀಂ ಖಾನ್‌- ಮುಸ್ಲಿಂ

ಡಿ.ಸುಧಾಕರ್‌- ಜೈನ

ಸಂತೋಷ್‌ ಎಸ್‌.ಲಾಡ್‌- ಮರಾಠ

ಎನ್‌.ಎಸ್.ಬೋಸರಾಜು- ರಾಜು ಕ್ಷತ್ರೀಯ

ಬೈರತಿ ಸುರೇಶ್‌- ಕುರುಬ

ಮಧು ಬಂಗಾರಪ್ಪ- ಈಡಿಗ

ಡಾ.ಎಂ.ಸಿ.ಸುಧಾಕರ್‌- ಒಕ್ಕಲಿಗ

ಬಿ.ನಾಗೇಂದ್ರ- ವಾಲ್ಮೀಕಿ (ಎಸ್‌ಟಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...